AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಂ ಕಪೂರ್ ಬಗ್ಗೆ ಟ್ರೋಲ್ ಮಾಡಿದ ಯೂಟ್ಯೂಬರ್​ಗೆ ನೋಟಿಸ್ ನೀಡಿದ ಆನಂದ್ ಅಹುಜಾ

2007ರಲ್ಲಿ ರಿಲೀಸ್ ಆದ ‘ಸಾವರಿಯಾ’ ಅವರ ನಟನೆಯ ಮೊದಲ ಸಿನಿಮಾ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. ಆದರೆ, ಅವರ ನಟನೆಯಲ್ಲಿ ಹೆಚ್ಚು ಬದಲಾವಣೆ ಏನೂ ಕಂಡಿಲ್ಲ. ಈ ಬಗ್ಗೆ ಟ್ರೋಲ್ ಮಾಡಲಾಗಿದೆ.

ಸೋನಂ ಕಪೂರ್ ಬಗ್ಗೆ ಟ್ರೋಲ್ ಮಾಡಿದ ಯೂಟ್ಯೂಬರ್​ಗೆ ನೋಟಿಸ್ ನೀಡಿದ ಆನಂದ್ ಅಹುಜಾ
ಸೋನಂ, ಆನಂದ್, ರಾಗಿಣಿ
ರಾಜೇಶ್ ದುಗ್ಗುಮನೆ
|

Updated on: Oct 12, 2023 | 2:46 PM

Share

ಬಾಲಿವುಡ್ ನಟಿ ಸೋನಂ ಕಪೂರ್ (Sonam Kapoor) ಅವರಿಗೆ ಟ್ರೋಲ್ ಹೊಸದಲ್ಲ. ಅವರ ದೇಹದ ಬಗ್ಗೆ, ಅವರ ನಟನೆಯ ಬಗ್ಗೆ ಟೀಕೆಗಳು ಆಗಾಗ ವ್ಯಕ್ತವಾಗುತ್ತಲೇ ಇರುತ್ತವೆ. ಇದಕ್ಕೆ ಸೋನಂ ಕಪೂರ್ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅವರ ಬಗ್ಗೆ ಹುಟ್ಟಿರುವ ಟ್ರೋಲ್​ಗಳಿಗೆ ಅವರು ಉತ್ತರಿಸುವ ಗೋಜಿಗೂ ಹೋಗಿಲ್ಲ. ಆದರೆ, ಸೋನಂ ಕಪೂರ್ ಪತಿ ಆನಂದ್ ಅಹುಜಾ ಅವರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಂತಿದೆ. ಈ ಕಾರಣದಿಂದಲೇ ಪತ್ನಿಯನ್ನು ಟೀಕಿಸಿದ ಯೂಟ್ಯೂಬರ್​ಗೆ ನೋಟಿಸ್ ಕಳುಹಿಸಿದ್ದಾರೆ. ಆ ಯೂಟ್ಯೂಬರ್​ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

ಸೋನಂ ಕಪೂರ್ ಅವರು ಅನಿಲ್ ಕಪೂರ್ ಮಗಳು. ಈ ಒಂದೇ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ನಟಿಸೋಕೆ ಸುಲಭದಲ್ಲಿ ಅವಕಾಶ ಸಿಕ್ಕಿತು.   2007ರಲ್ಲಿ ರಿಲೀಸ್ ಆದ ‘ಸಾವರಿಯಾ’ ಅವರ ನಟನೆಯ ಮೊದಲ ಸಿನಿಮಾ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿದರು. ಆದರೆ, ಅವರ ನಟನೆಯಲ್ಲಿ ಹೆಚ್ಚು ಬದಲಾವಣೆ ಏನೂ ಕಂಡಿಲ್ಲ. ಈ ಬಗ್ಗೆ ಟ್ರೋಲ್ ಮಾಡಲಾಗಿದೆ.

ಯೂಟ್ಯೂಬ್​ ಕಾಂಟೆಂಟ್ ಕ್ರಿಯೇಟರ್ ರಾಗಿಣಿ ಅವರು ಸೋನಂ ಬಗ್ಗೆ ಟೀಕೆ ಮಾಡಿದ್ದರು. ಕೆಲವು ಒಳ್ಳೆಯ ವಿಚಾರಗಳನ್ನು ಹೇಳಿದರೆ, ಇನ್ನೂ ಕೆಲವು ವಿಚಾರಗಳಲ್ಲಿ ಅವರನ್ನು ಟೀಕೆ ಮಾಡಿದ್ದರು. ಈ ವಿಡಿಯೋ ಆನಂದ್ ಅಹೂಜ ಅವರನ್ನು ಕೆಣಕಿದೆ. ಹೀಗಾಗಿ, ಆನಂದ್ ಅವರು ಪ್ರಕರಣ ದಾಖಲು ಮಾಡಿದ್ದಾರೆ. ರಾಗಿಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ‘ಒಂದೇ ವಿಡಿಯೋದಿಂದ ಅವರಿಗೆ ತಲೆಕೆಟ್ಟು ಹೋಗಿದೆ’ ಎಂದು ರಾಗಿಣಿ ಬರೆದುಕೊಂಡಿದ್ದಾರೆ.

ರಾಗಿಣಿ ಅವರು ಹೊಸ ವಿಡಿಯೋ ಮಾಡಿ ಫೋಟೋ ಪೋಸ್ಟ್ ಮಾಡಿದ್ದಾರೆ. ನೋಟಿಸ್​ ಬಗ್ಗೆ ಅವರು ಅಸಮಾಧಾನ ಹೊರ ಹಾಕಿದ್ದಾರೆ.  ಸದ್ಯ ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸೋನಂ ಕಪೂರ್ ಬಗ್ಗೆ ರಾಣಾ ದಗ್ಗುಬಾಟಿ ಹೇಳಿಕೆ: ಪ್ರತಿಕ್ರಿಯೆ ನೀಡಿದ ದುಲ್ಕರ್ ಸಲ್ಮಾನ್

ಸಿನಿಮಾ ವಿಚಾರಕ್ಕೆ ಬರೋದಾದರೆ ಸುಜಯ್ ಘೋಷ್ ನಿರ್ದೇಶನದ ‘ಬ್ಲೈಂಡ್’ ಸಿನಿಮಾದಲ್ಲಿ ಸೋನಂ ಕಪೂರ್ ನಟಿಸಿದ್ದರು. ಈ ಚಿತ್ರ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಪೊಲೀಸ್ ಕೆಲಸದಲ್ಲಿರುವ ನಾಯಕಿ ಅಪಘಾತದಲ್ಲಿ ಕಣ್ಣು ಕಳೆದುಕೊಳ್ಳುತ್ತಾಳೆ. ಆದಾಗ್ಯೂ ಅವಳು ಸರಣಿ ಹಂತಕನ ಕಂಡು ಹಿಡಿಯುತ್ತಾಳೆ. ಈ ರೀತಿಯ ಕತೆಯನ್ನು ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು