AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಕೋಟಿ ರೂ. ಕಾರು ಖರೀದಿ ಮಾಡಿದ ಅನನ್ಯಾ; ನಂಬರ್​ ಪ್ಲೇಟ್​ ವಿಶೇಷತೆ ಏನು?

ಅನನ್ಯಾ ಕಾರಿನ ಸಂಖ್ಯೆ ಕೊನೆಯಾಗೋದು 3000 ನಂಬರ್​ನಿಂದ. ಮಾರ್ವೆಲ್ ಸಿನಿಮಾದಲ್ಲಿ ‘ಐ ಲವ್​ ಯೂ 3000’ ಅನ್ನೋ ಲೈನ್ ಬರುತ್ತದೆ. ‘ಎಲ್ಲಕ್ಕಿಂತ ಹೆಚ್ಚು ನಿನ್ನನ್ನು ಪ್ರೀತಿಸುತ್ತೇನೆ’ ಎಂಬ ಅರ್ಥ ಇದೆ. ಹೀಗಾಗಿ, ಅನನ್ಯಾ ಮಾರ್ವೆಲ್ ಪ್ರೇಮಿ ಆಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.

3 ಕೋಟಿ ರೂ. ಕಾರು ಖರೀದಿ ಮಾಡಿದ ಅನನ್ಯಾ; ನಂಬರ್​ ಪ್ಲೇಟ್​ ವಿಶೇಷತೆ ಏನು?
ಅನನ್ಯಾ ಪಾಂಡೆ
Follow us
ರಾಜೇಶ್ ದುಗ್ಗುಮನೆ
|

Updated on: Jul 23, 2024 | 12:44 PM

ಬಾಲಿವುಡ್ ನಟಿ ಅನನ್ಯಾ ಪಾಂಡೆ ಅವರು ಸದಾ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಅವರು ಹಾರ್ದಿಕ್ ಪಾಂಡ್ಯ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡಿ ಸುದ್ದಿ ಆಗಿದ್ದರು. ಈಗ ಅವರು ಲಕ್ಷುರಿ ರೇಂಜ್ ರೋವರ್ ಖರೀದಿ ಮಾಡಿದ್ದಾರೆ. ಇದರ ಬೆಲೆ ಬರೋಬ್ಬರಿ 3+ ಕೋಟಿ ರೂಪಾಯಿ. ಈಗ ಅವರು ಖರೀದಿ ಮಾಡಿರೋ ಕಾರು ಸಖತ್ ಚರ್ಚೆ ಆಗುತ್ತಿದೆ. ಇದಕ್ಕೆ ಕಾರಣ ಆಗಿರೋದು ಕಾರಿನ ನಂಬರ್​ಪ್ಲೇಟ್.

‘ಸ್ಟುಡೆಂಟ್ ಆಫ್ ದಿ ಇಯರ್ 2’ ಚಿತ್ರದ ಮೂಲಕ ಅನನ್ಯಾ ಪಾಂಡೆ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಕೆಲವು ಸಿನಿಮಾ ಮಾಡಿದರು. ಆದರೆ ಯಾವುದೂ ಕೈ ಹಿಡಿಯಲಿಲ್ಲ. ಈಗ ಅವರು ದುಬಾರಿ ಕಾರು ಖರೀದಿ ಮಾಡಿದ್ದಾರೆ. ಅವರು ಖರೀದಿಸಿದ ರೇಂಜ್ ರೋವರ್ ಕಾರಿನ ಬೆಲೆ ಬರೋಬ್ಬರಿ 3.38 ಕೋಟಿ ರೂಪಾಯಿ.

ಅನನ್ಯಾ ಪಾಂಡೆ ಬಳಿ ಹಲವು ಕಾರುಗಳು ಇವೆ. ಇದರ ಜೊತೆಗೆ ಈಗ ಹೊಸ ಕಾರು ಸೇರ್ಪಡೆ ಆಗಿದೆ. ಇವರ ಕಾರಿನ ಸಂಖ್ಯೆ ಕೊನೆಯಾಗೋದು 3000 ನಂಬರ್​ನಿಂದ. ಅವರು ಇದನ್ನು ವಿಶೇಷವಾಗಿ ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಅವರ ಜನ್ಮದಿನ ಅಕ್ಟೋಬರ್ 30. ಈ ಕಾರಣಕ್ಕೆ ಅವರು 3000 ಖರೀದಿ ಮಾಡಿರಬಹುದು ಎಂದು ಕೆಲವರು ಊಹಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹಾಲಿವುಡ್​ನ ಮಾರ್ವೆಲ್ ಸಿನಿಮಾದಲ್ಲಿ ಬರೋ ಲೈನ್​ಗೋಸ್ಕರ ಈ ನಂಬರ್​ಪ್ಲೇಟ್ ಪಡೆಯಲಾಗಿದೆ ಎನ್ನಲಾಗಿದೆ.

ಮಾರ್ವೆಲ್ ಸಿನಿಮಾದಲ್ಲಿ ‘ಐ ಲವ್​ ಯೂ 3000’ ಅನ್ನೋ ಲೈನ್ ಬರುತ್ತದೆ. ‘ಎಲ್ಲಕ್ಕಿಂತ ಹೆಚ್ಚು ನಿನ್ನನ್ನು ಪ್ರೀತಿಸುತ್ತೇನೆ’ ಎಂಬ ಅರ್ಥ ಇದೆ. ಹೀಗಾಗಿ, ಅನನ್ಯಾ ಮಾರ್ವೆಲ್ ಪ್ರೇಮಿ ಆಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಅನನ್ಯಾ ಪಾಂಡೆ ಕೈಯಲ್ಲಿ ಹಿಡಿದಿರುವ ಬ್ಯಾಗಿನ ಬೆಲೆಗೆ ಒಂದು ಹೊಸ ಕಾರು ಕೊಳ್ಳಬಹುದು!

ಇತ್ತೀಚೆಗೆ ಅನನ್ಯಾ ಪಾಂಡೆ ಅವರು ಅಂಬಾನಿ ಮನೆ ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವಿವಾಹ ಸಮಾರಂಭದಲ್ಲಿ ಅವರು ಹಾರ್ದಿಕ್ ಪಾಂಡ್ಯ ಜೊತೆ ಕಾಣಿಸಿಕೊಂಡಿದ್ದರು. ಆ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಇಬ್ಬರೂ ಪರಸ್ಪರ ಫಾಲೋ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ