AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ

ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಅವರ ಮೊಬೈಲ್​ ವಶಕ್ಕೆ ಪಡೆಯಲಾಗಿತ್ತು. ಮೊಬೈಲ್​ನಲ್ಲಿ ವಾಟ್ಸಾಪ್ ಸಂದೇಶಗಳನ್ನು ಎನ್​ಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ
ಆರ್ಯನ್​ ಜತೆ ಅನನ್ಯಾ ಪಾಂಡೆ
TV9 Web
| Edited By: |

Updated on: Oct 22, 2021 | 5:47 PM

Share

ಹೈ ಪ್ರೊಫೈಲ್​ ಪ್ರಕರಣದಲ್ಲಿ ಯಾರನ್ನೂ ಸುಖಾಸುಮ್ಮನೆ ವಿಚಾರಣೆ ಮಾಡೋಕೆ ಅಥವಾ ಬಂಧಿಸೋಕೆ ಸಾಧ್ಯವಾಗುವುದಿಲ್ಲ. ಈಗ ಡ್ರಗ್​ ಕೇಸ್​ನಲ್ಲಿ ಸ್ಟಾರ್​ ಕಿಡ್​​ಗಳ ಹೆಸರು ಮುಂಚೂಣಿಯಲ್ಲಿದೆ. ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ನಟಿ ಅನನ್ಯಾ ಪಾಂಡೆ ಮೇಲೂ ಅನುಮಾನ ಶುರುವಾಗಿದೆ. ಈ ಕಾರಣಕ್ಕೆ ಎನ್​ಸಿಬಿ ಅಧಿಕಾರಿಗಳು ಅವರನ್ನು ಕರೆಸಿ ವಿಚಾರಣೆ ಮಾಡುತ್ತಿದ್ದಾರೆ. ಈ ಮಧ್ಯೆ ವಾಟ್ಸಾಪ್​ ಚಾಟ್​ನಿಂದ ಎನ್​ಸಿಬಿ ಅಧಿಕಾರಿಗಳಿಗೆ ಕೆಲ ಮಹತ್ವದ ವಿಚಾರಗಳು ಗೊತ್ತಾಗಿವೆ ಎನ್ನಲಾಗುತ್ತಿದೆ.

ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಅವರ ಮೊಬೈಲ್​ ವಶಕ್ಕೆ ಪಡೆಯಲಾಗಿತ್ತು. ಮೊಬೈಲ್​ನಲ್ಲಿ ವಾಟ್ಸಾಪ್ ಸಂದೇಶಗಳನ್ನು ಎನ್​ಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅನನ್ಯಾ ಮತ್ತು ಆರ್ಯನ್​ ಮಧ್ಯೆ ನಡೆದ ಚಾಟ್ಅನ್ನು ಅಧಿಕಾರಿಗಳ ಹುಬ್ಬೇರಿಸುವಂತೆ ಮಾಡಿದೆಯಂತೆ. ಈ ಚಾಟ್​ನಲ್ಲಿ  ಡ್ರಗ್​ಗೆ ಸಂಬಂಧಿಸಿ ಅನನ್ಯಾ ಮತ್ತು ಆರ್ಯನ್​ ಮಾತುಕತೆ ನಡೆಸಿದ್ದಾರೆ.

ಆರ್ಯನ್​ ಖಾನ್​ಗೆ ಅನನ್ಯಾ ಪಾಂಡೆ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂಬರ್ಥದಲ್ಲಿ ವಾಟ್ಸಾಪ್​ ಚಾಟ್​​ಗಳು ಇರುವುದು ಕಂಡು ಬಂದಿದೆ. ಈ ಕಾರಣಕ್ಕೆ ಅನನ್ಯಾ ಅವರನ್ನು ವಿಚಾರಣೆಗೆ ಕರೆಸಲಾಗಿದೆ ಎಂದು ಎನ್​ಸಿಬಿ ಮೂಲಗಳು ತಿಳಿಸಿವೆ. ಡ್ರಗ್ಸ್​ ತೆಗೆದುಕೊಳ್ಳುವುದರ ಜತೆಗೆ ಅದನ್ನು ಪೂರೈಕೆ ಮಾಡುವುದು ಕೂಡ ಅಪರಾಧವೇ. ಹೀಗಾಗಿ, ಅನನ್ಯಾ ಪಾಂಡೆ ವಿರುದ್ಧ ಈ ರೀತಿಯ ಸಾಕ್ಷ್ಯಗಳು ಸಿಕ್ಕರೆ ಎನ್​ಸಿಬಿ ಅವರನ್ನು ಬಂಧಿಸಬಹುದು. ಎಲ್ಲಾ ರೀತಿಯಿಂದಲೂ ತನಿಖೆ ನಡೆಸಲಾಗುತ್ತಿದೆ.

ಬಾಲಿವುಡ್​ನಲ್ಲಿ ಚಂಕಿ ಪಾಂಡೆ ಬೇಡಿಕೆಯ ನಟ ಆಗಿದ್ದರು. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗಿದೆ. ಶಾರುಖ್​ ಮಗ ಆರ್ಯನ್​ಗೂ ಚಂಕಿ ಪಾಂಡೆ ಮಗಳು ಅನನ್ಯಾ ನಡುವೆ ಒಳ್ಳೆಯ ಗೆಳೆತನ ಇತ್ತು. ಇದು ಅವರಿಗೆ ಸಂಕಷ್ಟ ತಂದಿಟ್ಟಿದ್ದೆ.  ‘ಚಿಕ್ಕವರಿದ್ದಾಗ ನಾವೆಲ್ಲ ವಿಚಿತ್ರ ಕೆಲಸಗಳನ್ನು ಮಾಡುತ್ತಿದ್ದವು. ಅದಕ್ಕೆಲ್ಲ ಶಾರುಖ್ ಖಾನ್​ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಫೋಟೋಶೂಟ್​ ಮಾಡುತ್ತಿದ್ದರು. ನಮ್ಮ ವಿಡಿಯೋಗಳನ್ನು ಚಿತ್ರಿಸಿ ನಮ್ಮನ್ನು ಅತ್ಯುತ್ತಮ ನಟರು ಎಂಬಂತೆ ಟ್ರೀಟ್​ ಮಾಡುತ್ತಿದ್ದರು. ಅದನ್ನು ಎಲ್ಲರಿಗೂ ತೋರಿಸುತ್ತಿದ್ದರು’ ಎಂದು ಅನನ್ಯಾ ಹೇಳಿಕೊಂಡಿದ್ದರು.

ಇದನ್ನೂ ಓದಿ: Ananya Panday: ಎನ್​ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದ ಅನನ್ಯಾ ಪಾಂಡೆ; ಇಲ್ಲಿಗೇ ಮುಗಿದಿಲ್ಲ ಕಂಟಕ

Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್