Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Shah Rukh Khan: ಶಾರುಖ್​ ಖಾನ್​ ಫ್ಯಾಮಿಲಿ ಜೊತೆ ಅನನ್ಯಾ ಪಾಂಡೆ ಆಪ್ತವಾಗಿದ್ದಾರೆ ಎಂಬುದು ಸ್ಪಷ್ಟ. ಸದ್ಯಕ್ಕೆ ಶಾರುಖ್​ ಪುತ್ರ ಆರ್ಯನ್​ ಖಾನ್​ ಆರ್ಥರ್​ ರೋಡ್​ ಜೈಲಿನಲ್ಲಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ.

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ
ಶಾರುಖ್​ ಖಾನ್​, ಅನನ್ಯಾ ಪಾಂಡೆ
Follow us
TV9 Web
| Updated By: ಮದನ್​ ಕುಮಾರ್​

Updated on: Oct 21, 2021 | 3:10 PM

ನಟಿ ಅನನ್ಯಾ ಪಾಂಡೆ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿರುವುದು ಕುತೂಹಲಕ್ಕೆ ಕಾರಣ ಆಗಿದೆ. ವಿಜಯ್​ ದೇವರಕೊಂಡ ಜೊತೆ ‘ಲೈಗರ್​’ ಸಿನಿಮಾದಲ್ಲಿ ನಟಿಸುತ್ತಿರುವ ಅನನ್ಯಾ ಪಾಂಡೆ ಈಗ ವಿಚಾರಣೆಯಲ್ಲಿ ಹಾಜರಾಗಬೇಕಿದೆ. ಅವರ ವಿರುದ್ಧ ಸೂಕ್ತ ಸಾಕ್ಷಿಗಳು ಸಿಕ್ಕರೆ ಬಂಧನದ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಅನೇಕರಿಗೆ ಗೊತ್ತಿರದ ವಿಚಾರ ಏನೆಂದರೆ, ಶಾರುಖ್​ ಖಾನ್​ ಕುಟುಂಬದ ಜೊತೆಗೆ ಅನನ್ಯಾ ಪಾಂಡೆಗೆ ಆಪ್ತ ಒಡನಾಟ ಇದೆ. ಶಾರುಖ್​ ಮಕ್ಕಳಾದ ಸುಹಾನಾ ಖಾನ್​ ಮತ್ತು ಆರ್ಯನ್​ ಖಾನ್​ ಅವರು ಅನನ್ಯಾಗೆ ಕ್ಲೋಸ್​ ಫ್ರೆಂಡ್ಸ್.

ಈ ಹಿಂದೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರಗಳನ್ನು ಅನನ್ಯಾ ಪಾಂಡೆ ಹೇಳಿಕೊಂಡಿದ್ದರು. ಶಾರುಖ್​ ಖಾನ್​ ಕುಟುಂಬದ ಜೊತೆ ತಮ್ಮ ಸಂಬಂಧ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದರು. ‘ಶಾರುಖ್​ ಖಾನ್​ ನನಗೆ ಎರಡನೇ ಅಪ್ಪ ಇದ್ದಂತೆ. ಅವರು ನನ್ನ ಆಪ್ತ ಸ್ನೇಹಿತೆಯ ತಂದೆ. ಅವರ ಜೊತೆ ನಾವು ಐಪಿಎಲ್​ ಮ್ಯಾಚ್​ ನೋಡಲು ಹೋಗುತ್ತಿದ್ದೆವು’ ಎಂದು ಅನನ್ಯಾ ಪಾಂಡೆ ಹೇಳಿದ್ದರು.

ಶಾರುಖ್​ ಪುತ್ರಿ ಸುಹಾನಾ ಖಾನ್​, ಸಂಜಯ್​ ಕಪೂರ್​ ಮಗಳು ಶನಾಯಾ ಹಾಗೂ ಅನನ್ಯಾ ಪಾಂಡೆ ಬೆಸ್ಟ್​ ಫ್ರೆಂಡ್ಸ್​. ‘ಚಿಕ್ಕವರಿದ್ದಾಗ ನಾವೆಲ್ಲ ವಿಚಿತ್ರ ಕೆಲಸಗಳನ್ನು ಮಾಡುತ್ತಿದ್ದವು. ಅದಕ್ಕೆಲ್ಲ ಶಾರುಖ್ ಖಾನ್​ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಫೋಟೋಶೂಟ್​ ಮಾಡುತ್ತಿದ್ದರು. ನಮ್ಮ ವಿಡಿಯೋಗಳನ್ನು ಚಿತ್ರಿಸಿ ನಮ್ಮನ್ನು ಅತ್ಯುತ್ತಮ ನಟರು ಎಂಬಂತೆ ಟ್ರೀಟ್​ ಮಾಡುತ್ತಿದ್ದರು. ಅದನ್ನು ಎಲ್ಲರಿಗೂ ತೋರಿಸುತ್ತಿದ್ದರು’ ಎಂದು ಅನನ್ಯಾ ಹೇಳಿಕೊಂಡಿದ್ದರು.

ಒಟ್ಟಿನಲ್ಲಿ ಶಾರುಖ್​ ಖಾನ್​ ಫ್ಯಾಮಿಲಿ ಜೊತೆ ಅನನ್ಯಾ ಪಾಂಡೆ ಆಪ್ತವಾಗಿದ್ದಾರೆ ಎಂಬುದು ಸ್ಪಷ್ಟ. ಸದ್ಯಕ್ಕೆ ಶಾರುಖ್​ ಪುತ್ರ ಆರ್ಯನ್​ ಖಾನ್​ ಆರ್ಥರ್​ ರೋಡ್​ ಜೈಲಿನಲ್ಲಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಅನನ್ಯಾ ಪಾಂಡೆ ಮನೆ ಮೇಲೆ ಎನ್​ಸಿಬಿ ದಾಳಿ ನಡೆದಿದೆ. ಎನ್​ಸಿಬಿ ಅಧಿಕಾರಿಗಳು ಅನನ್ಯಾ ಅವರ ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡು, ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ
ಮಂಡ್ಯ: ಕಂಕಣ ಭಾಗ್ಯಕ್ಕಾಗಿ ಮಹದೇಶ್ವರ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ