AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Shah Rukh Khan: ಶಾರುಖ್​ ಖಾನ್​ ಫ್ಯಾಮಿಲಿ ಜೊತೆ ಅನನ್ಯಾ ಪಾಂಡೆ ಆಪ್ತವಾಗಿದ್ದಾರೆ ಎಂಬುದು ಸ್ಪಷ್ಟ. ಸದ್ಯಕ್ಕೆ ಶಾರುಖ್​ ಪುತ್ರ ಆರ್ಯನ್​ ಖಾನ್​ ಆರ್ಥರ್​ ರೋಡ್​ ಜೈಲಿನಲ್ಲಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ.

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ
ಶಾರುಖ್​ ಖಾನ್​, ಅನನ್ಯಾ ಪಾಂಡೆ
TV9 Web
| Edited By: |

Updated on: Oct 21, 2021 | 3:10 PM

Share

ನಟಿ ಅನನ್ಯಾ ಪಾಂಡೆ ಮನೆ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿರುವುದು ಕುತೂಹಲಕ್ಕೆ ಕಾರಣ ಆಗಿದೆ. ವಿಜಯ್​ ದೇವರಕೊಂಡ ಜೊತೆ ‘ಲೈಗರ್​’ ಸಿನಿಮಾದಲ್ಲಿ ನಟಿಸುತ್ತಿರುವ ಅನನ್ಯಾ ಪಾಂಡೆ ಈಗ ವಿಚಾರಣೆಯಲ್ಲಿ ಹಾಜರಾಗಬೇಕಿದೆ. ಅವರ ವಿರುದ್ಧ ಸೂಕ್ತ ಸಾಕ್ಷಿಗಳು ಸಿಕ್ಕರೆ ಬಂಧನದ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಅನೇಕರಿಗೆ ಗೊತ್ತಿರದ ವಿಚಾರ ಏನೆಂದರೆ, ಶಾರುಖ್​ ಖಾನ್​ ಕುಟುಂಬದ ಜೊತೆಗೆ ಅನನ್ಯಾ ಪಾಂಡೆಗೆ ಆಪ್ತ ಒಡನಾಟ ಇದೆ. ಶಾರುಖ್​ ಮಕ್ಕಳಾದ ಸುಹಾನಾ ಖಾನ್​ ಮತ್ತು ಆರ್ಯನ್​ ಖಾನ್​ ಅವರು ಅನನ್ಯಾಗೆ ಕ್ಲೋಸ್​ ಫ್ರೆಂಡ್ಸ್.

ಈ ಹಿಂದೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರಗಳನ್ನು ಅನನ್ಯಾ ಪಾಂಡೆ ಹೇಳಿಕೊಂಡಿದ್ದರು. ಶಾರುಖ್​ ಖಾನ್​ ಕುಟುಂಬದ ಜೊತೆ ತಮ್ಮ ಸಂಬಂಧ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದರು. ‘ಶಾರುಖ್​ ಖಾನ್​ ನನಗೆ ಎರಡನೇ ಅಪ್ಪ ಇದ್ದಂತೆ. ಅವರು ನನ್ನ ಆಪ್ತ ಸ್ನೇಹಿತೆಯ ತಂದೆ. ಅವರ ಜೊತೆ ನಾವು ಐಪಿಎಲ್​ ಮ್ಯಾಚ್​ ನೋಡಲು ಹೋಗುತ್ತಿದ್ದೆವು’ ಎಂದು ಅನನ್ಯಾ ಪಾಂಡೆ ಹೇಳಿದ್ದರು.

ಶಾರುಖ್​ ಪುತ್ರಿ ಸುಹಾನಾ ಖಾನ್​, ಸಂಜಯ್​ ಕಪೂರ್​ ಮಗಳು ಶನಾಯಾ ಹಾಗೂ ಅನನ್ಯಾ ಪಾಂಡೆ ಬೆಸ್ಟ್​ ಫ್ರೆಂಡ್ಸ್​. ‘ಚಿಕ್ಕವರಿದ್ದಾಗ ನಾವೆಲ್ಲ ವಿಚಿತ್ರ ಕೆಲಸಗಳನ್ನು ಮಾಡುತ್ತಿದ್ದವು. ಅದಕ್ಕೆಲ್ಲ ಶಾರುಖ್ ಖಾನ್​ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಫೋಟೋಶೂಟ್​ ಮಾಡುತ್ತಿದ್ದರು. ನಮ್ಮ ವಿಡಿಯೋಗಳನ್ನು ಚಿತ್ರಿಸಿ ನಮ್ಮನ್ನು ಅತ್ಯುತ್ತಮ ನಟರು ಎಂಬಂತೆ ಟ್ರೀಟ್​ ಮಾಡುತ್ತಿದ್ದರು. ಅದನ್ನು ಎಲ್ಲರಿಗೂ ತೋರಿಸುತ್ತಿದ್ದರು’ ಎಂದು ಅನನ್ಯಾ ಹೇಳಿಕೊಂಡಿದ್ದರು.

ಒಟ್ಟಿನಲ್ಲಿ ಶಾರುಖ್​ ಖಾನ್​ ಫ್ಯಾಮಿಲಿ ಜೊತೆ ಅನನ್ಯಾ ಪಾಂಡೆ ಆಪ್ತವಾಗಿದ್ದಾರೆ ಎಂಬುದು ಸ್ಪಷ್ಟ. ಸದ್ಯಕ್ಕೆ ಶಾರುಖ್​ ಪುತ್ರ ಆರ್ಯನ್​ ಖಾನ್​ ಆರ್ಥರ್​ ರೋಡ್​ ಜೈಲಿನಲ್ಲಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಅನನ್ಯಾ ಪಾಂಡೆ ಮನೆ ಮೇಲೆ ಎನ್​ಸಿಬಿ ದಾಳಿ ನಡೆದಿದೆ. ಎನ್​ಸಿಬಿ ಅಧಿಕಾರಿಗಳು ಅನನ್ಯಾ ಅವರ ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡು, ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ