AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ ಸಿನಿಮಾದಿಂದ ಅನನ್ಯಾ ಪಾಂಡೆ ಔಟ್​? ಡ್ರಗ್ಸ್​ ಕೇಸ್​ ಬೆನ್ನಲ್ಲೇ ಇನ್ನೊಂದು ಗಾಸಿಪ್​

Ananya Panday: ದಳಪತಿ ವಿಜಯ್​ ಅವರು ಸದ್ಯ ‘ಬೀಸ್ಟ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಬಳಿಕ ಅವರ 66ನೇ ಸಿನಿಮಾ ಸೆಟ್ಟೇರಲಿದೆ. ಆ ಚಿತ್ರಕ್ಕೆ ಅನನ್ಯಾ ಪಾಂಡೆ ನಾಯಕಿ ಎಂಬ ಮಾತು ಕೇಳಿಬಂದಿತ್ತು.

ದಳಪತಿ ವಿಜಯ್​ ಸಿನಿಮಾದಿಂದ ಅನನ್ಯಾ ಪಾಂಡೆ ಔಟ್​? ಡ್ರಗ್ಸ್​ ಕೇಸ್​ ಬೆನ್ನಲ್ಲೇ ಇನ್ನೊಂದು ಗಾಸಿಪ್​
ಅನನ್ಯಾ ಪಾಂಡೆ, ವಿಜಯ್​
TV9 Web
| Edited By: |

Updated on: Oct 24, 2021 | 8:31 AM

Share

ನಟಿ ಅನನ್ಯಾ ಪಾಂಡೆಗೆ ಈಗ ಸಂಕಷ್ಟ ಶುರುವಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿದೆ. ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೊತೆ ಅನನ್ಯಾ ಪಾಂಡೆ ಸ್ನೇಹ ಹೊಂದಿದ್ದಾರೆ. ಡ್ರಗ್ಸ್​ ಪೂರೈಕೆ ಕುರಿತಂತೆ ಇವರಿಬ್ಬರ ನಡುವೆ ವಾಟ್ಸಾಪ್​ ಚಾಟ್​ ನಡೆದಿದೆ ಎನ್ನಲಾಗಿದೆ. ಇದರ ಬೆನ್ನಲೇ ಈಗ ಅನನ್ಯಾ ಮತ್ತು ದಳಪತಿ ವಿಜಯ್​ಗೆ ಸಂಬಂಧಿಸಿದ ಹೊಸ ಗಾಸಿಪ್​ ಹರಿದಾಡುತ್ತಿದೆ.

ದಳಪತಿ ವಿಜಯ್​ ಅವರು ಸದ್ಯ ‘ಬೀಸ್ಟ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಬಳಿಕ ಅವರ 66ನೇ ಸಿನಿಮಾ ಸೆಟ್ಟೇರಲಿದೆ. ಆ ಚಿತ್ರಕ್ಕೆ ಅನನ್ಯಾ ಪಾಂಡೆ ನಾಯಕಿ ಎಂಬ ಮಾತು ಕೇಳಿಬಂದಿತ್ತು. ತಮಿಳಿನ ಜೊತೆಗೆ ಹಿಂದಿಗೆ ಡಬ್​ ಆಗಿ ತೆರೆಕಾಣಲಿರುವ ಆ ಚಿತ್ರಕ್ಕೆ ಬಾಲಿವುಡ್​ ಬೆಡಗಿಯೇ ನಾಯಕಿಯಾದರೆ ಒಳಿತು ಎಂದು ಚಿತ್ರತಂಡ ತೀರ್ಮಾನಿಸಿದ್ದು, ಅನನ್ಯಾ ಪಾಂಡೆಗೆ ಆಫರ್​ ನೀಡಲಾಗಿತ್ತು ಎಂಬ ಸುದ್ದಿ ಹರಡಿತ್ತು. ಆದರೆ ಈಗ ಡ್ರಗ್ಸ್​ ಕೇಸ್​ನಲ್ಲಿ ಅನನ್ಯಾ ಹೆಸರು ಕೇಳಿಬಂದಿರುವುದರಿಂದ ಅವರನ್ನು ಈ ಸಿನಿಮಾದಿಂದ ಕೈ ಬಿಡಲಾಗಿದೆ ಎಂಬ ಗಾಸಿಪ್​ ಹಬ್ಬಿದೆ.

ಈ ಕುರಿತಾಗಿ ಅನನ್ಯಾ ಪಾಂಡೆ ಅವರ ಆಪ್ತರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅನನ್ಯಾಗೆ ವಿಜಯ್​ ಅವರ 66ನೇ ಸಿನಿಮಾದ ಆಫರ್​ ಬಂದಿರಲಿಲ್ಲ. ಆ ಚಿತ್ರಕ್ಕೆ ಸಂಬಂಧಿಸಿದಂತೆ ಅವರನ್ನು ಯಾರೂ ಭೇಟಿ ಮಾಡಿಲ್ಲ. ಹೀಗಿರುವಾಗ ಅವರನ್ನು ಕೈ ಬಿಡುವುದು ಎಲ್ಲಿಂದ ಬಂತು?’ ಎಂದು ಅನನ್ಯಾ ಆಪ್ತರು ಹೇಳಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಅನನ್ಯಾರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಒಂದು ವೇಳೆ ಅವರ ವಿರುದ್ಧ ಬಲವಾದ ಸಾಕ್ಷಿಗಳು ಸಿಕ್ಕರೆ ಬಂಧಿಸುವ ಸಾಧ್ಯತೆ ಕೂಡ ಇದೆ. ಪ್ರಸ್ತುತ ವಿಜಯ್​ ದೇವರಕೊಂಡ ನಾಯಕತ್ವದ ‘ಲೈಗರ್’ ಚಿತ್ರಕ್ಕೆ ಅನನ್ಯಾ ಹೀರೋಯಿನ್​ ಆಗಿದ್ದಾರೆ. ಆ ಚಿತ್ರದ ಶೂಟಿಂಗ್​ಗೂ ತೊಂದರೆ ಆಗಿದೆ.​

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ