AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್​ ಸಿನಿಮಾದಿಂದ ಅನನ್ಯಾ ಪಾಂಡೆ ಔಟ್​? ಡ್ರಗ್ಸ್​ ಕೇಸ್​ ಬೆನ್ನಲ್ಲೇ ಇನ್ನೊಂದು ಗಾಸಿಪ್​

Ananya Panday: ದಳಪತಿ ವಿಜಯ್​ ಅವರು ಸದ್ಯ ‘ಬೀಸ್ಟ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಬಳಿಕ ಅವರ 66ನೇ ಸಿನಿಮಾ ಸೆಟ್ಟೇರಲಿದೆ. ಆ ಚಿತ್ರಕ್ಕೆ ಅನನ್ಯಾ ಪಾಂಡೆ ನಾಯಕಿ ಎಂಬ ಮಾತು ಕೇಳಿಬಂದಿತ್ತು.

ದಳಪತಿ ವಿಜಯ್​ ಸಿನಿಮಾದಿಂದ ಅನನ್ಯಾ ಪಾಂಡೆ ಔಟ್​? ಡ್ರಗ್ಸ್​ ಕೇಸ್​ ಬೆನ್ನಲ್ಲೇ ಇನ್ನೊಂದು ಗಾಸಿಪ್​
ಅನನ್ಯಾ ಪಾಂಡೆ, ವಿಜಯ್​
TV9 Web
| Edited By: |

Updated on: Oct 24, 2021 | 8:31 AM

Share

ನಟಿ ಅನನ್ಯಾ ಪಾಂಡೆಗೆ ಈಗ ಸಂಕಷ್ಟ ಶುರುವಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರ ಹೆಸರು ತಳುಕು ಹಾಕಿಕೊಂಡಿದೆ. ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೊತೆ ಅನನ್ಯಾ ಪಾಂಡೆ ಸ್ನೇಹ ಹೊಂದಿದ್ದಾರೆ. ಡ್ರಗ್ಸ್​ ಪೂರೈಕೆ ಕುರಿತಂತೆ ಇವರಿಬ್ಬರ ನಡುವೆ ವಾಟ್ಸಾಪ್​ ಚಾಟ್​ ನಡೆದಿದೆ ಎನ್ನಲಾಗಿದೆ. ಇದರ ಬೆನ್ನಲೇ ಈಗ ಅನನ್ಯಾ ಮತ್ತು ದಳಪತಿ ವಿಜಯ್​ಗೆ ಸಂಬಂಧಿಸಿದ ಹೊಸ ಗಾಸಿಪ್​ ಹರಿದಾಡುತ್ತಿದೆ.

ದಳಪತಿ ವಿಜಯ್​ ಅವರು ಸದ್ಯ ‘ಬೀಸ್ಟ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಬಳಿಕ ಅವರ 66ನೇ ಸಿನಿಮಾ ಸೆಟ್ಟೇರಲಿದೆ. ಆ ಚಿತ್ರಕ್ಕೆ ಅನನ್ಯಾ ಪಾಂಡೆ ನಾಯಕಿ ಎಂಬ ಮಾತು ಕೇಳಿಬಂದಿತ್ತು. ತಮಿಳಿನ ಜೊತೆಗೆ ಹಿಂದಿಗೆ ಡಬ್​ ಆಗಿ ತೆರೆಕಾಣಲಿರುವ ಆ ಚಿತ್ರಕ್ಕೆ ಬಾಲಿವುಡ್​ ಬೆಡಗಿಯೇ ನಾಯಕಿಯಾದರೆ ಒಳಿತು ಎಂದು ಚಿತ್ರತಂಡ ತೀರ್ಮಾನಿಸಿದ್ದು, ಅನನ್ಯಾ ಪಾಂಡೆಗೆ ಆಫರ್​ ನೀಡಲಾಗಿತ್ತು ಎಂಬ ಸುದ್ದಿ ಹರಡಿತ್ತು. ಆದರೆ ಈಗ ಡ್ರಗ್ಸ್​ ಕೇಸ್​ನಲ್ಲಿ ಅನನ್ಯಾ ಹೆಸರು ಕೇಳಿಬಂದಿರುವುದರಿಂದ ಅವರನ್ನು ಈ ಸಿನಿಮಾದಿಂದ ಕೈ ಬಿಡಲಾಗಿದೆ ಎಂಬ ಗಾಸಿಪ್​ ಹಬ್ಬಿದೆ.

ಈ ಕುರಿತಾಗಿ ಅನನ್ಯಾ ಪಾಂಡೆ ಅವರ ಆಪ್ತರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಅನನ್ಯಾಗೆ ವಿಜಯ್​ ಅವರ 66ನೇ ಸಿನಿಮಾದ ಆಫರ್​ ಬಂದಿರಲಿಲ್ಲ. ಆ ಚಿತ್ರಕ್ಕೆ ಸಂಬಂಧಿಸಿದಂತೆ ಅವರನ್ನು ಯಾರೂ ಭೇಟಿ ಮಾಡಿಲ್ಲ. ಹೀಗಿರುವಾಗ ಅವರನ್ನು ಕೈ ಬಿಡುವುದು ಎಲ್ಲಿಂದ ಬಂತು?’ ಎಂದು ಅನನ್ಯಾ ಆಪ್ತರು ಹೇಳಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಅನನ್ಯಾರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಒಂದು ವೇಳೆ ಅವರ ವಿರುದ್ಧ ಬಲವಾದ ಸಾಕ್ಷಿಗಳು ಸಿಕ್ಕರೆ ಬಂಧಿಸುವ ಸಾಧ್ಯತೆ ಕೂಡ ಇದೆ. ಪ್ರಸ್ತುತ ವಿಜಯ್​ ದೇವರಕೊಂಡ ನಾಯಕತ್ವದ ‘ಲೈಗರ್’ ಚಿತ್ರಕ್ಕೆ ಅನನ್ಯಾ ಹೀರೋಯಿನ್​ ಆಗಿದ್ದಾರೆ. ಆ ಚಿತ್ರದ ಶೂಟಿಂಗ್​ಗೂ ತೊಂದರೆ ಆಗಿದೆ.​

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!