AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಯ ಮದುವೆಯಲ್ಲಿ ಧಮ್ ಹೊಡೆಯುತ್ತಾ ನಿಂತ ಅನನ್ಯಾ ಪಾಂಡೆ; ಬಾಯಿಗೆ ಬಂದಂತೆ ಬೈಸಿಕೊಂಡ ನಟಿ

ಜನರು ಗುಂಪುಗುಂಪಾಗಿ ನಿಂತು ಮದುವೆ ಕಾರ್ಯಗಳಲ್ಲಿ ಬ್ಯುಸಿ ಇದ್ದರೆ, ಅನನ್ಯಾ ಮಾತ್ರ ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ಫೋಟೋ ವೈರಲ್ ಆಗಿದೆ.

ಸಂಬಂಧಿಯ ಮದುವೆಯಲ್ಲಿ ಧಮ್ ಹೊಡೆಯುತ್ತಾ ನಿಂತ ಅನನ್ಯಾ ಪಾಂಡೆ; ಬಾಯಿಗೆ ಬಂದಂತೆ ಬೈಸಿಕೊಂಡ ನಟಿ
ಅನನ್ಯಾ ಪಾಂಡೆ
ರಾಜೇಶ್ ದುಗ್ಗುಮನೆ
|

Updated on: Mar 15, 2023 | 11:02 AM

Share

ಸೆಲೆಬ್ರಿಟಿಗಳು ಯಾವುದೇ ಕೆಲಸ ಮಾಡುವಾಗ ತುಂಬಾನೇ ಎಚ್ಚರಿಕೆಯಿಂದ ಇರಬೇಕು. ಅವರನ್ನು ಕ್ಯಾಮೆರಾಗಳು ಹಾಗೂ ಫ್ಯಾನ್ಸ್ ಗಮನಿಸುತ್ತಾ ಇರುತ್ತಾರೆ. ಸ್ವಲ್ಪ ಹೆಚ್ಚು ಕಡಿಮೆ ಆದರೂ ಟ್ರೋಲ್ ಆಗಬೇಕಾಗುತ್ತದೆ. ತಂಬಾಕು, ಮದ್ಯದ ವಿಚಾರಗಳಲ್ಲಂತೂ ಹೆಚ್ಚು ಎಚ್ಚರಿಕೆ ಬೇಕು. ಈಗ ನಟಿ ಅನನ್ಯಾ ಪಾಂಡೆ (Ananya Panday) ಅವರು ಸಿಗರೇಟ್ (Cigarate) ಸೇದಿ ಸಿಕ್ಕಿ ಬಿದ್ದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅವರಿಗೆ ಬಾಯಿಗೆ ಬಂದಂತೆ ಬೈದು ಟ್ರೋಲ್ ಮಾಡಿದ್ದಾರೆ.

ಅನನ್ಯಾ ಪಾಂಡೆ ಸಂಬಂಧಿ ಅಲನಾ ಪಾಂಡೆ ಅವರು ಮದುವೆ ಆಗುತ್ತಿದ್ದಾರೆ. ಮಂಗಳವಾರ (ಮಾರ್ಚ್ 14) ಮೆಹೆಂದಿ ಕಾರ್ಯಗಳು ನಡೆದಿವೆ. ಮದುವೆಯಲ್ಲಿ ಭಾಗಿಯಾದ ವ್ಯಕ್ತಿಯೋರ್ವ ಅಲ್ಲಿನ ವಾತಾವರಣ ಹೇಗಿದೆ ಎಂಬುದನ್ನು ತೋರಿಸಲು ಫೋಟೋ ಕ್ಲಿಕ್ ಮಾಡಿ ಶೇರ್ ಮಾಡಿಕೊಂಡಿದ್ದರು. ಜನರು ಗುಂಪುಗುಂಪಾಗಿ ನಿಂತು ಮದುವೆ ಕಾರ್ಯಗಳಲ್ಲಿ ಬ್ಯುಸಿ ಇದ್ದರೆ, ಅನನ್ಯಾ ಮಾತ್ರ ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ಫೋಟೋ ವೈರಲ್ ಆದ ಬೆನ್ನಲ್ಲೇ ಇದನ್ನು ಡಿಲೀಟ್ ಮಾಡಲಾಗಿದೆ. ಆದರೆ, ಫ್ಯಾನ್ಸ್ ಆಗಲೇ ಈ ಸ್ಟೇಟಸ್​ನ ಸ್ಕ್ರೀನ್​ಶಾಟ್ ತೆಗೆದಿಟ್ಟುಕೊಂಡಿದ್ದರು. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಲ್​ಚಲ್​ ಎಬ್ಬಿಸಿದೆ.

ಇದನ್ನೂ ಓದಿ: ‘ಸ್ಕ್ರೀನ್ ಫ್ಲ್ಯಾಟ್ ಆಗಿದೆ ಎಂದು ಟೀಕಿಸುತ್ತಿದ್ದರು’; ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದ ಅನನ್ಯಾ ಪಾಂಡೆ

ಇದನ್ನೂ ಓದಿ
Image
ಗುಳಿಕೆನ್ನೆ ಸುಂದರಿ ಆಲಿಯಾ ಭಟ್; ಇಲ್ಲಿದೆ ಬರ್ತ್​ಡೇ ಗರ್ಲ್​​ನ ಸುಂದರ ಫೋಟೋಸ್
Image
‘ಸ್ಕ್ರೀನ್ ಫ್ಲ್ಯಾಟ್ ಆಗಿದೆ ಎಂದು ಟೀಕಿಸುತ್ತಿದ್ದರು’; ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದ ಅನನ್ಯಾ ಪಾಂಡೆ
Image
‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ

‘ಅನನ್ಯಾ ಪಾಂಡೆ ಒಳ್ಳೆಯ ನಟಿಯಲ್ಲ ಎಂಬುದು ಗೊತ್ತಿತ್ತು. ಆದರೆ, ಸ್ಮೋಕರ್ ಅನ್ನೋದು ಗೊತ್ತಿರಲಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಅನನ್ಯಾಗೆ ಛೀಮಾರಿ ಹಾಕಿದ್ದಾರೆ. ‘ಎಲ್ಲರೂ ಮದುವೆ ಸಂಭ್ರಮದಲ್ಲಿ ಬ್ಯುಸಿ ಆದರೆ ನಮ್ಮ ಅನನ್ಯಾ ಪಾಂಡೆ ಮಾತ್ರ ಸಿಗರೇಟ್ ಸೇದುವುದರಲ್ಲಿ ಬ್ಯುಸಿ ಇದ್ದರು’ ಎಂದು ಟೀಕೆ ಮಾಡಿದ್ದಾರೆ. ‘ಅನನ್ಯಾ ಪಾಂಡೆ ನೋಡೋಕೆ ಅಷ್ಟೇ ಸೈಲೆಂಟ್​. ಈ ರೀತಿ ಸಿಗರೇಟ್​ಗೆ ಅಡಿಕ್ಟ್ ಆಗಿದ್ದಾರೆಂದು ಗೊತ್ತಿರಲಿಲ್ಲ. ಪಾಪ ಎಷ್ಟಂದರೂ ಸ್ಟ್ರಗಲ್ ಮಾಡಿ ಬಂದವರಲ್ಲವೇ’ ಎನ್ನುವ ಕಮೆಂಟ್ ಕೂಡ ಬಂದಿದೆ. ಈ ಫೋಟೋದಿಂದ ಅನನ್ಯಾ ಸಾಕಷ್ಟು ಟ್ರೋಲ್ ಆಗಿದ್ದಾರೆ.

ಇದನ್ನೂ ಓದಿ: ‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ

ಸ್ಟಾರ್ ಕಿಡ್​ ಆದ ಕಾರಣ ಅನನ್ಯಾ ಪಾಂಡೆಗೆ ಬಾಲಿವುಡ್​ನಲ್ಲಿ ಅನಾಯಾಸವಾಗಿ ಅವಕಾಶ ಸಿಕ್ಕವು. ಆದರೆ, ಯಶಸ್ಸು ಮಾತ್ರ ಸಿಕ್ಕಿಲ್ಲ. ಸಂದರ್ಶನ ಒಂದರಲ್ಲಿ ಮಾತನಾಡುತ್ತಾ ಅನನ್ಯಾ ಪಾಂಡೆ ಅವರು ‘ನಾನು ತುಂಬಾನೇ ಸ್ಟ್ರಗಲ್ ಮಾಡಿದ್ದೆ’ ಎಂದು ಹೇಳಿಕೊಂಡಿದ್ದರು. ಇದರಿಂದ ಅವರು ಸಾಕಷ್ಟು ಟೀಕೆಗೆ ಒಳಗಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ