AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ

Aryan Khan: ಬಾಲಿವುಡ್ ನಟಿ ಅನನ್ಯಾ ಪಾಂಡೆಯವರನ್ನು ಎನ್​ಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಈ ವೇಲೆ ಅವರು ಭಯಗೊಂಡು ಕಣ್ಣೀರಿಟ್ಟಿದ್ದಾರೆ. ವಿಚಾರಣೆಯಲ್ಲಿ ಅವರು ಕೆಲವು ಶಾಕಿಂಗ್ ಹೇಳಿಕೆಗಳನ್ನು ನೀಡಿದ್ದಾರೆ.

Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ, ಆರ್ಯನ್ ಖಾನ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Oct 22, 2021 | 12:35 PM

Share

ಮುಂಬೈ: ಡ್ರಗ್ಸ್ ಕೇಸ್​ನಲ್ಲಿ ಆರ್ಯನ್ ಖಾನ್​​ ಬಂಧನದ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಾಲಿವುಡ್ ನಟಿ ಅನನ್ಯಾ ಪಾಂಡೆಗೆ ಎನ್​ಸಿಬಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ನಿನ್ನೆ (ಗುರುವಾರ) ಮುಂಬೈ NCB ಕಚೇರಿಗೆ ಬಂದಾಗ ಭಯಗೊಂಡಿದ್ದ ಅನನ್ಯಾ ಪಾಂಡೆ, ವಿಚಾರಣೆಗೂ ಮೊದಲು ಕಣ್ಣೀರಿಟ್ಟಿದ್ದರು. ಸಮಾಧಾನ ಮಾಡಿದ ಬಳಿಕ NCB ಅಧಿಕಾರಿಗಳು ಅವರನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್​ಸಿಬಿ ಅಧಿಕಾರಿಗಳ ಪ್ರಶ್ನೆಗೆ ಅವರು ಉತ್ತರಿಸಿದ್ದು, ಇಂದೂ ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ.

ನಟಿ ಅನನ್ಯಾ ಅವರನ್ನು ನಿನ್ನೆ ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಡ್ರಗ್ಸ್ ವಿಚಾರವಾಗಿ ಆರ್ಯನ್, ಅನನ್ಯಾ ನಡುವೆ ಚಾಟ್ ನಡೆದಿದ್ದರ ಕುರಿತು ಅದಿಕಾರಿಗಳು ಪ್ರಶ್ನಿಸಿದ್ದರು. ಈ ವೇಳೆ ಅನನ್ಯಾ, ತಾನು ಈವರೆಗೂ ಡ್ರಗ್ಸ್ ತೆಗೆದುಕೊಂಡಿಲ್ಲ. ಹಾಗೂ ಆರ್ಯನ್ ಖಾನ್ ಜತೆ ಡ್ರಗ್ಸ್ ವಿಚಾರವಾಗಿ ಚಾಟ್ ಮಾಡಿಲ್ಲ. ಸಿಗರೇಟ್ ಬಗ್ಗೆ ವಾಟ್ಸಾಪ್ ಮೆಸೇಜ್, ಸಂಭಾಷಣೆ ಮಾಡಿದ್ದೆವು. ಆದರೆ ಡ್ರಗ್ಸ್ ಬಗ್ಗೆ ವಾಟ್ಸಾಪ್‌ನಲ್ಲಿ ಮೆಸೇಜ್ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿ ವರದಿಗಳು ತಿಳಿಸಿವೆ.

ಇದೇ ವೇಳೆ ಎನ್​ಸಿಬಿ ಮೂಲಗಳ ಪ್ರಕಾರ, ಅನನ್ಯಾ ತಾವು ಆರ್ಯನ್​ಗೆ ಡ್ರಗ್ಸ್ ಒದಗಿಸಿಲ್ಲ ಮತ್ತು ಅವರ ವಿರುದ್ಧ ಅದಕ್ಕೆ ಯಾವ ಸಾಕ್ಷ್ಯಗಳೂ ಇಲ್ಲ ಎಂದು ತಿಳಿಸಿವೆ. ಆರ್ಯನ್ ಖಾನ್ ಅವರನ್ನು ಅಕ್ಟೋಬರ್ 2ರಂದು ಮುಂಬೈನ ಐಷಾರಾಮಿ ಹಡಗೊಂದರಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಇದುವರೆಗೆ ಹಲವರನ್ನು ಬಂಧಿಸಲಾಗಿದೆ ಎಂದು ಎನ್​ಸಿಬಿ ತಿಳಿಸಿದೆ. ಆರ್ಯನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ಹೈಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಅಕ್ಟೋಬರ್ 26ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Anushka Sharma: ಒಂದೇ ಒಂದು ಚಿತ್ರದಿಂದ ಅಭಿಮಾನಿಗಳ ಮನಗೆದ್ದ ಅನುಷ್ಕಾ; ಅಂಥದ್ದೇನಿದೆ ಅದರಲ್ಲಿ?

HBD Raayan Raj Sarja: ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬಕ್ಕೆ ಧ್ರುವ-ಪ್ರೇರಣಾ ವಿಶ್​; ಚಿರು ಪುತ್ರನಿಗೆ ಶುಭಾಶಯಗಳ ಸುರಿಮಳೆ

Published On - 12:32 pm, Fri, 22 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?