AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಲೀಕ್ ಮಾಡುವುದಾಗಿ ನಟಿಗೆ ಹೆದರಿಸಿದ್ದ ಆರ್ಯನ್ ಖಾನ್

Ananya Pandey-Aryan Khan: ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ, ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಗ್ಗೆ ಮಾತನಾಡುತ್ತಾ, ಆರ್ಯನ್ ಖಾನ್, ಅನನ್ಯಾರ ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಹೇಳಿದ್ದಾರೆ.

ವಿಡಿಯೋ ಲೀಕ್ ಮಾಡುವುದಾಗಿ ನಟಿಗೆ ಹೆದರಿಸಿದ್ದ ಆರ್ಯನ್ ಖಾನ್
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Oct 15, 2024 | 8:26 PM

Share

ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನಟರಲ್ಲ. ಆದರೆ ಯಾವಾಗಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿರುತ್ತಾರೆ. ಈಗಂತೂ ಆರ್ಯನ್ ಖಾನ್ ಬಗ್ಗೆ ಚರ್ಚೆಯಾಗುತ್ತಿದೆ. ಖ್ಯಾತ ನಟಿಯೊಬ್ಬರು ಆರ್ಯನ್ ಬಗ್ಗೆ ದೊಡ್ಡ ವಿಚಾರ ರಿವೀಲ್ ಮಾಡಿದ್ದಾರೆ. ಆರ್ಯನ್ ಬಗ್ಗೆ ತೆರೆದಿಟ್ಟ ನಟಿ ಬೇರೆ ಯಾರೂ ಅಲ್ಲ, ಅನನ್ಯಾ ಪಾಂಡೆ. ಅನನ್ಯಾ ಪಾಂಡೆ ಸಂದರ್ಶನವೊಂದರಲ್ಲಿ ಆರ್ಯನ್ ವೀಡಿಯೊವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ.

ನಟ ಚಂಕಿ ಪಾಂಡೆ ಮಗಳು ಅನನ್ಯಾ ಪಾಂಡೆ ಮತ್ತು ಆರ್ಯನ್ ಖಾನ್ ಬಾಲ್ಯದ ಸ್ನೇಹಿತರು. ಅವರ ಅನೇಕ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ. ಖಾಸಗಿ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಆರ್ಯನ್ ಅನನ್ಯಾಗೆ ಬೆದರಿಕೆ ಹಾಕಿದ್ದರು. ಹಲವು ವರ್ಷಗಳ ನಂತರ ಅನನ್ಯಾ ತನ್ನ ಬಾಲ್ಯದ ಕಥೆಗಳನ್ನು ಹೇಳುವ ಮೂಲಕ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

‘ನಾನು ದಿನವಿಡೀ ಏನು ಮಾಡುತ್ತೇನೆ, ಏನು ತಿನ್ನುತ್ತೇನೆ ಎಲ್ಲವನ್ನೂ ವಿಡಿಯೋದಲ್ಲಿ ರೆಕಾರ್ಡ್ ಮಾಡುತ್ತಿದ್ದೆ. ಆದರೆ ನಾನು ಆ ವಿಡಿಯೋಗಳನ್ನು ಎಲ್ಲಿಯೂ ಪೋಸ್ಟ್ ಮಾಡಿಲ್ಲ. ಈಗಲೂ ಆ ವಿಡಿಯೋಗಳು ನನ್ನ ಬಳಿ ಇವೆ. ಆಗ ಆಪಲ್‌ಗೆ ಫೋಟೋಬೂತ್ ಹೊಸತು. ನಾನು, ಸುಹಾನಾ ಖಾನ್, ಶನಯಾ ಕಪೂರ್ ನಾವು ಸಾರ್ವಕಾಲಿಕ ವಿಷಯಗಳನ್ನು ರೆಕಾರ್ಡ್ ಮಾಡುತ್ತಿದ್ದೆವು. ನಂತರ ಆರ್ಯನ್ ನಮಗೆ ಬೆದರಿಕೆ ಹಾಕುತ್ತಿದ್ದರು’ ಎಂದಿದ್ದಾರೆ ಅನನ್ಯಾ.

ಇದನ್ನೂ ಓದಿ:14ನೇ ವರ್ಷಕ್ಕೇ ಪ್ರೀತಿಸಿದ್ದರು ಅನನ್ಯಾ ಪಾಂಡೆ, ಆದರೆ ಆಗಿದ್ದೇನು?

‘ನನ್ನ ಕೆಲಸ ಮಾಡದಿದ್ದರೆ ನಿನ್ನ ವಿಡಿಯೋಗಳನ್ನು ಲೀಕ್ ಮಾಡುತ್ತೇನೆ ಎಂದು ಆರ್ಯನ್ ಹೇಳುತ್ತಿದ್ದ. ಎಲ್ಲವೂ ಬಾಲ್ಯದ ನೆನಪುಗಳು’ ಎಂದು ಅನನ್ಯಾ ಹೇಳಿದ್ದಾರೆ. ಅನನ್ಯಾ ಪಾಂಡೆ ಅವರ ಸಿನಿಮಾಗಳ ಬಗ್ಗೆ ಮಾತನಾಡುವುದಾದರೆ, ಅನನ್ಯಾ ಇದುವರೆಗೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅನನ್ಯಾ ಕಡಿಮೆ ಸಮಯದಲ್ಲಿ ಹೆಚ್ಚು ಸಿನಿಮಾ ಮಾಡಿದರೂ ಯಾವುದೂ ಗೆಲ್ಲಲಿಲ್ಲ. ನಟಿಯ ಮುಂಬರುವ ಚಿತ್ರಕ್ಕಾಗಿ ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ನಟಿ ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆಕೆಗೆ ಅಪಾರ ಅಭಿಮಾನಿಗಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ