AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ಗೆ ಸಲ್ಮಾನ್ ಖಾನ್​-ಆಮಿರ್ ಖಾನ್ ಭೇಟಿ; ಈ ಫೋಟೋದಲ್ಲಿ ಮಿಸ್ಸಿಂಗ್ ಆಗಿದ್ದು ಯಾರು?

Salman Khan: ಸಲ್ಮಾನ್ ಖಾನ್ ಹಾಗೂ ಆಮಿರ್ ಖಾನ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. 1994ರಲ್ಲಿ ತೆರೆಗೆ ಬಂದ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ತೆರೆಹಂಚಿಕೊಂಡಿದ್ದರು.

ಈದ್​ಗೆ ಸಲ್ಮಾನ್ ಖಾನ್​-ಆಮಿರ್ ಖಾನ್ ಭೇಟಿ; ಈ ಫೋಟೋದಲ್ಲಿ ಮಿಸ್ಸಿಂಗ್ ಆಗಿದ್ದು ಯಾರು?
ಆಮಿರ್-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on:Apr 22, 2023 | 9:28 AM

Share

ಮುಸ್ಲಿಂ ಧರ್ಮದವರ ಪವಿತ್ರ ಹಬ್ಬ ರಂಜಾನ್ ಆಚರಣೆ ವಿಶ್ವಾದ್ಯಂತ ಜೋರಾಗಿದೆ. ಈ ಸಂದರ್ಭದಲ್ಲಿ ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದು ಕಡೆ ಸೇರಿದ್ದಾರೆ. ಈ ಫೋಟೋನ ಸಲ್ಮಾನ್ ಖಾನ್ (Salman Khan) ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಫೋಟೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ 10 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ ಅನ್ನೋದು ವಿಶೇಷ. ಶಾರುಖ್ ಖಾನ್ (Shah Rukh Khan) ಅವರು ಈ ಫೋಟೋದಲ್ಲಿ ಮಿಸ್ ಆಗಿದ್ದಾರೆ ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ.

ಸಲ್ಮಾನ್ ಖಾನ್ ಹಾಗೂ ಆಮಿರ್ ಖಾನ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. 1994ರಲ್ಲಿ ತೆರೆಗೆ ಬಂದ ‘ಅಂದಾಜ್ ಅಪ್ನಾ ಅಪ್ನಾ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ತೆರೆಹಂಚಿಕೊಂಡಿದ್ದರು. ಸಲ್ಮಾನ್ ಖಾನ್ ಚಿತ್ರಕ್ಕೆ ಆಮಿರ್ ಖಾನ್ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿಯೂ ಇತ್ತೀಚೆಗೆ ಹರಿದಾಡಿತ್ತು. ಆದರೆ, ಆ ಬಗ್ಗೆ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ. ಹೀಗಿರುವಾಗಲೇ ಈದ್​ ದಿನ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಈ ವಾರ ಸಲ್ಮಾನ್​ ಖಾನ್​ ಸಿನಿಮಾ ಅಬ್ಬರ; ಪೈಪೋಟಿ ನೀಡಲಿವೆ ಕನ್ನಡದ ಹಲವು ಚಿತ್ರಗಳು

ಸಲ್ಮಾನ್ ಖಾನ್ ಕಪ್ಪು ಬಣ್ಣದ ಬಟ್ಟೆ ಹಾಕಿದ್ದಾರೆ. ಆಮಿರ್ ಖಾನ್ ಟೀ ಶರ್ಟ್ ಧರಿಸಿದ್ದಾರೆ. ಅನೇಕರು ಇದು ಆಮಿರ್ ಖಾನ್ ಮನೆಯಲ್ಲಿ ನಡೆದ ಭೇಟಿ ಎಂದು ಊಹಿಸಿದ್ದಾರೆ. ಈ ಪೋಸ್ಟ್​​ಗೆ ‘ಚಾಂದ್ ಮುಬಾರಕ್​’ ಎಂದು ಸಲ್ಲು ಕ್ಯಾಪ್ಶನ್ ನೀಡಿದ್ದಾರೆ. ಶಾರುಖ್ ಖಾನ್ ಕೂಡ ಈ ಫೋಟೋದಲ್ಲಿದ್ದರೆ ಮತ್ತಷ್ಟು ಖುಷಿ ಆಗುತ್ತಿತ್ತು ಎನ್ನುವ ಅಭಿಪ್ರಾಯ ಫ್ಯಾನ್ಸ್ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಬೆಂಬಲಿಸಿದ ರಾಖಿ ಸಾವಂತ್​​ಗೂ ಸಂಕಷ್ಟ; ಬಿಷ್ಣೋಯ್ ಗ್ಯಾಂಗ್​ನಿಂದ ಬಂತು ಎಚ್ಚರಿಕೆ

ಈದ್ ಪ್ರಯುಕ್ತ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅನೇಕರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ, ಈ ಚಿತ್ರ ರಿಮೇಕ್ ಆಗಿರುವುದರಿಂದ ನಟ, ನಿರ್ಮಾಪಕ ಸಲ್ಮಾನ್ ಖಾನ್​ಗೆ ಭಯ ಇದೆ. ಈ ಚಿತ್ರದ ಮೊದಲ ದಿನದ ಕಲೆಕ್ಷನ್ ನೋಡಿದರೆ ಮುಂದಿನ ದಿನಗಳಲ್ಲಿ ಸಿನಿಮಾ ಯಾವ ರೀತಿಯಲ್ಲಿ ಪರ್ಫಾರ್ಮೆನ್ಸ್ ಮಾಡಬಹುದು ಎನ್ನುವ ಅಂದಾಜು ಸಿಗಲಿದೆ. ಆಮಿರ್ ಖಾನ್ ಸದ್ಯ ನಟನೆಯಿಂದ ಬ್ರೇಕ್ ಪಡೆದಿದ್ದಾರೆ. ಡ್ರೀಮ್11 ಜಾಹೀರಾತಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Sat, 22 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?