AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಕಪೂರ್ ಚಿತ್ರದಲ್ಲಿ ಡಬಲ್ ಮೀನಿಂಗ್ ಹಾಡು; ಏನಿದರ ಅರ್ಥ?

Anil Kapoor: ಹಾಡೊಂದನ್ನು ಸಿನಿಮಾದಿಂದ ಕೈಬಿಡುವಂತೆ ಬಾಲಿವುಡ್ ನಟ ಅನಿಲ್ ಕಪೂರ್ ನಿರ್ಮಾಪಕರೊಟ್ಟಿಗೆ ಜಗಳ, ಮಾಡಿದ್ದರು ನಟಿ ಜೂಹಿ ಚಾವ್ಲಾ ಕಣ್ಣೀರು ಹಾಕಿದ್ದರು. ಯಾವುದು ಆ ಹಾಡು? ಆ ಹಾಡಿನ ಅರ್ಥ ಏನು?

ಅನಿಲ್ ಕಪೂರ್ ಚಿತ್ರದಲ್ಲಿ ಡಬಲ್ ಮೀನಿಂಗ್ ಹಾಡು; ಏನಿದರ ಅರ್ಥ?
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Aug 20, 2024 | 2:55 PM

Share

ಅನೇಕ ಸಿನಿಮಾಗಳಲ್ಲಿ ಡಬಲ್ ಮೀನಿಂಗ್ ಹಾಡುಗಳನ್ನು ಬರೆಯಲಾಗುತ್ತದೆ. ಇದಕ್ಕೆ ಕೆಲವೊಮ್ಮೆ ಕಲಾವಿದರು ತಕರಾರು ತೆಗೆದಿದ್ದೂ ಇದೆ. ಅದೇ ರೀತಿ ಅನಿಲ್ ಕಪೂರ್ ಅವರ ಸಿನಿಮಾ ಒಂದರಲ್ಲಿ ಡಬಲ್ ಮೀನಿಂಗ್ ಹಾಡು ಇತ್ತು. ಈ ಬಗ್ಗೆ ಅವರಿಗೆ ಈಗಲೂ ಬೇಸರ ಇದೆ. ಅತ್ಯಂತ ಸಿಟ್ಟು ತರಿಸಿದ ಹಾಡು ಇದು ಎಂದು ಅವರು ಪರಿಗಣಿಸಿದ್ದಾರೆ. ಈ ಮೊದಲ ‘ಕಾಫಿ ವಿತ್ ಕರಣ್’ ಶೋದಲ್ಲಿ ಹೇಳಿಕೊಂಡಿದ್ದಾರೆ.

‘ಖಡಾ ಹೇ..ಖಡಾ ಹೇ’ (ನಿಂತಿದೆ.. ನಿಂತಿದೆ) ಅನ್ನೋ ಹಾಡು 1994ರ ‘ಅಂದಾಜ್’ ಸಿನಿಮಾದ್ದು. ಈ ಸಿನಿಮಾದಲ್ಲಿ ಅನಿಲ್ ಕಪೂರ್, ಜೂಹಿ ಚಾವ್ಲಾ, ಕರೀಶ್ಮಾ ಕಪೂರ್ ಮೊದಲಾದವರು ನಟಿಸಿದ್ದರು. ಈ ಹಾಡಿನ ಬಗ್ಗೆ ಅನಿಲ್ ಕಪೂರ್ ಅವರಿಗೆ ಈಗಲೂ ಬೇಸರ ಇದೆ. ‘ಅತ್ಯಂತ ಇರಿಟೇಟ್ ಸಾಂಗ್ ಇದು’ ಎಂದು ಅನಿಲ್ ಕಪೂರ್ ಅವರು ಕರೆದಿದ್ದಾರೆ.

‘ಅತಿ ಹೆಚ್ಚು ಇರಿಟೇಷನ್ ಸಾಂಗ್ ಯಾವುದು’ ಎಂದು ಕರಣ್ ಜೋಹರ್ ಪ್ರಶ್ನೆ ಮಾಡಿದ್ದಾರೆ. ‘ನನ್ನದೇ ಸಿನಿಮಾದ ಹಾಡು. ಖಡಾ ಹೇ ಸಾಂಗ್. ಅತ್ಯಂತ ಕೆಟ್ಟ ಸಾಂಗ್ ಅದು. ನಾನು ಹಾಗೂ ಜೂಹಿ ಛಾವ್ಲಾ ಇಬ್ಬರೂ ನಿರ್ಮಾಪಕರ ಜೊತೆ ಜಗಳ ಆಡಿದೆವು. ಜೂಹಿ ಅತ್ತರು. ಸಿನಿಮಾದ ಶೂಟಿಂಗ್ ಕೂಡ ಬಹುತೇಕ ನಿಂತಿತ್ತು’ ಎಂದಿದ್ದರು ಅನಿಲ್ ಕಪೂರ್.

ಇದನ್ನೂ ಓದಿ:ಮೋದಿ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ರಜನೀಕಾಂತ್, ಅನಿಲ್ ಕಪೂರ್

ಈ ಸಿನಿಮಾ ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಅನೇಕರು ಈ ಹಾಡಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ ಈ ಹಾಡು ರಿಲೀಸ್ ಆಯಿತು. ಅನಿವಾರ್ಯವಾಗಿ ಅನಿಲ್ ಕಪೂರ್ ಹಾಗೂ ಜೂಹಿ ಒಟ್ಟಾಗಿ ಡ್ಯಾನ್ಸ್ ಮಾಡಿದರು. ಈ ಹಾಡು ಈಗಲೂ ಇನ್ಸ್ಟಾಗ್ರಾಮ್ನಲ್ಲಿ ಆಗಾಗ ವೈರಲ್ ಆಗುತ್ತಲೇ ಇರುತ್ತದೆ. ಈ ಹಾಡು ರಿಲೀಸ್ ಆಗಿ ಬರೋಬ್ಬರಿ 30 ವರ್ಷಗಳು ಕಳೆದಿವೆ.

ಅನಿಲ್ ಕಪೂರ್ ಅವರು ಈಗಲೂ ಕೆಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 3’ ಅನ್ನು ನಡೆಸಿಕೊಟ್ಟಿದ್ದರು. ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್