AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮುಖ ತೋರಿಸಿ 1 ಲಕ್ಷ ರೂಪಾಯಿ ದಾನ ಮಾಡಿದ ರಣಬೀರ್​ ಕಪೂರ್​

ಕಪೂರ್​ ಕುಟುಂಬದವರು ಎಲ್ಲರೂ ಒಟ್ಟಾಗಿ ಸೇರಿ ಕ್ರಿಸ್​ಮಸ್​ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಈ ಪಾರ್ಟಿಗೆ ಮಗಳು ರಹಾ ಜೊತೆ ಬಂದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ದಂಪತಿ ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ. ರಣಬೀರ್​ ಕಪೂರ್​ 1 ಲಕ್ಷ ರೂಪಾಯಿ ದಾನ ಮಾಡಿ ಸುದ್ದಿ ಆಗಿದ್ದಾರೆ.

ಮಗಳ ಮುಖ ತೋರಿಸಿ 1 ಲಕ್ಷ ರೂಪಾಯಿ ದಾನ ಮಾಡಿದ ರಣಬೀರ್​ ಕಪೂರ್​
ರಣಬೀರ್​ ಕಪೂರ್​, ರಹಾ, ಆಲಿಯಾ ಭಟ್​
ಮದನ್​ ಕುಮಾರ್​
|

Updated on:Dec 26, 2023 | 12:16 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ (Ranbir Kapoor) ಅವರು ಈಗ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ‘ಅನಿಮಲ್​’ ಸಿನಿಮಾದ ಗೆಲುವು. ಈ ಚಿತ್ರ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಇದೇ ಸಂಭ್ರಮದಲ್ಲಿ ರಣಬೀರ್​ ಕಪೂರ್​ ಅವರು ಕುಟುಂಬದ ಜೊತೆ ಸೇರಿ ಕ್ರಿಸ್​ಮಸ್​ (Christmas) ಆಚರಿಸಿದ್ದಾರೆ. ಈ ವೇಳೆ ಅವರು ಮಗಳ ಮುಖವನ್ನು ತೋರಿಸಿದ್ದಾರೆ. ಮಕ್ಕಳ ಕಲ್ಯಾಣಕ್ಕಾಗಿ ಒಂದು ಲಕ್ಷ ರೂಪಾಯಿ ದಾನ ಮಾಡಿದ್ದಾರೆ. ಈ ವಿಷಯವನ್ನು ಅವರ ಅತ್ತೆ ಸೋನಿ ರಾಝ್​ದಾನ್​ (Soni Razdan) ಖುಷಿಯಿಂದ ಹೇಳಿಕೊಂಡಿದ್ದಾರೆ.

ಕಪೂರ್​ ಕುಟುಂಬದವರು ಎಲ್ಲರೂ ಒಟ್ಟಾಗಿ ಸೇರಿ ಕ್ರಿಸ್​ಮಸ್​ ಹಬ್ಬವನ್ನು ಸೆಲೆಬ್ರೇಟ್​ ಮಾಡಿದ್ದಾರೆ. ಈ ಪಾರ್ಟಿಗೆ ಮಗಳು ರಹಾ ಜೊತೆ ಬಂದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ದಂಪತಿ ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ. ಮೊದಲ ಬಾರಿಗೆ ಮಗಳನ್ನು ಸಾರ್ವಜನಿಕವಾಗಿ ಪರಿಚಯಿಸಿದ್ದಾರೆ. ರಹಾ ಫೋಟೋ ವೈರಲ್​ ಆಗಿದೆ. ಹಾಗೆಯೇ ರಣಬೀರ್​ ಕಪೂರ್​ 1 ಲಕ್ಷ ರೂಪಾಯಿ ದಾನ ಮಾಡಿದ ಸುದ್ದಿಯೂ ಹೊರಬಿದ್ದಿದೆ.

ರಣಬೀರ್​ ಕಪೂರ್​ ಅವರದ್ದು ಶ್ರೀಮಂತ ಕುಟುಂಬ. ನೂರಾರು ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಅವರ ಪತ್ನಿ ಆಲಿಯಾ ಭಟ್​ ಕೂಡ ಶ್ರೀಮಂತ ಕುಟುಂಬದವರು. ಪ್ರತಿ ಸಿನಿಮಾಗಳಿಗೆ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಣಬೀರ್​ ಕಪೂರ್​ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ರಣಬೀರ್​ ಕಪೂರ್​ ಜತೆ ತೃಪ್ತಿ ದಿಮ್ರಿ ಬೋಲ್ಡ್​ ಪಾತ್ರ: ‘ಅನಿಮಲ್​’ ಚಿತ್ರಕ್ಕೆ ಈ ಸುಂದರಿ ಆಯ್ಕೆ ಆಗಿದ್ದು ಹೇಗೆ?

ಹಿಂದಿ ಚಿತ್ರರಂಗದಲ್ಲಿ ರಣಬೀರ್​ ಕಪೂರ್​ ಅವರು ಭಾರಿ ಡಿಮ್ಯಾಂಡ್​ ಹೊಂದಿದ್ದಾರೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತುಗಳಿಂದಲೂ ಅವರಿಗೆ ಸಂಭಾವನೆ ಬರುತ್ತದೆ. ಅನೇಕ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. 2023ರಲ್ಲಿ ಅವರು ನಟಿಸಿದ ‘ತು ಜೂಟಿ ಮೈ ಮಕ್ಕಾರ್​’ ಮತ್ತು ‘ಅನಿಮಲ್​’ ಸಿನಿಮಾಗಳು ತೆರೆಕಂಡವು. ಆ ಪೈಕಿ ‘ಅನಿಮಲ್​’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:09 am, Tue, 26 December 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ