AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಲಿರುವ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

‘ಅನಿಮಲ್​’ ಸಿನಿಮಾದ ಸಲುವಾಗಿ ಇಷ್ಟು ದಿನಗಳ ಕಾಲ ಸಂದೀಪ್​ ರೆಡ್ಡಿ ವಂಗಾ ಅವರು ಮುಂಬೈನಲ್ಲಿ ವಾಸವಾಗಿದ್ದರು. ಆದರೆ ಅವರು ಈಗ ಹೈದರಾಬಾದ್​ಗೆ ವಾಪಸ್​ ಬಂದಿದ್ದು, ಹೊಸ ಆಫೀಸ್​ ತೆರೆದಿದ್ದಾರೆ. ಪ್ರಭಾಸ್​ ಜೊತೆಗಿನ ಸಿನಿಮಾ ಹಾಗೂ ತಮ್ಮ ನಿರ್ಮಾಣದ ಚಿತ್ರಗಳ ಸಲುವಾಗಿ ಮುಂದಿನ ಎರಡು ವರ್ಷ ಅವರು ಈ ಆಫೀಸ್​ನಲ್ಲೇ ಕೆಲಸ ಮಾಡಲಿದ್ದಾರೆ.

ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಲಿರುವ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಸಂದೀಪ್​ ರೆಡ್ಡಿ ವಂಗಾ
Follow us
ಮದನ್​ ಕುಮಾರ್​
|

Updated on: Mar 28, 2024 | 2:55 PM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ‘ಕಬೀರ್​ ಸಿಂಗ್​’ ಹಾಗೂ ‘ಅನಿಮಲ್​’ (Animal) ಸಿನಿಮಾಗಳ ಯಶಸ್ಸಿನ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಅವರನ್ನು ನಂಬಿಕೊಂಡು ನೂರಾರು ಕೋಟಿ ರೂಪಾಯಿ ಸುರಿಯಲು ನಿರ್ಮಾಪಕರು ಸಿದ್ಧವಾಗಿದ್ದಾರೆ. ಪ್ರಭಾಸ್​ (Prabhas) ನಟನೆಯ ಹೊಸ ಸಿನಿಮಾಗೆ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಈ ನಡುವೆ ಅವರು ನಿರ್ಮಾಣದಲ್ಲೂ ಆಸಕ್ತಿ ತೋರಿಸಿದ್ದಾರೆ. ವಿಶೇಷ ಏನೆಂದರೆ, ಕಡಿಮೆ ಬಜೆಟ್​ನ ಸಿನಿಮಾಗಳನ್ನು ಸಂದೀಪ್​ ರೆಡ್ಡಿ ವಂಗಾ ನಿರ್ಮಾಣ ಮಾಡಲಿದ್ದಾರೆ.

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ಮಾಣದಲ್ಲೂ ಆಸಕ್ತಿ ಹೊಂದಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ಅವರು ಕಡಿಮೆ ಬಜೆಟ್​ನ ಸಿನಿಮಾಗಳನ್ನು ನಿರ್ಮಾಣ ಮಾಡಲಿದ್ದಾರೆ. ಅವರ ತಂಡದವರು ಈಗ ಸ್ಕ್ರಿಪ್ಟ್​ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಯಾವ ಕಥೆಯನ್ನು ಸಿನಿಮಾ ಮಾಡಬೇಕು ಎಂಬ ಅಂತಿಮ ನಿರ್ಧಾರವನ್ನು ಸಂದೀಪ್​ ರೆಡ್ಡಿ ವಂಗಾ ಅವರು ತೆಗೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಇಷ್ಟು ದಿನಗಳ ಕಾಲ ‘ಅನಿಮಲ್​’ ಸಿನಿಮಾದ ಸಲುವಾಗಿ ಸಂದೀಪ್​ ರೆಡ್ಡಿ ವಂಗಾ ಅವರು ಮುಂಬೈನಲ್ಲಿ ವಾಸವಾಗಿದ್ದರು. ಈಗ ಅವರು ಹೈದರಾಬಾದ್​ಗೆ ವಾಪಸ್​ ಬಂದಿದ್ದಾರೆ. ಹೈದರಾಬಾದ್​ನಲ್ಲಿ ಅವರು ಹೊಸ ಆಫೀಸ್​ ತೆರೆದಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಅವರು ಈ ಹೊಸ ಆಫೀಸ್​ನಲ್ಲೇ ಕೆಲಸ ಮಾಡಲಿದ್ದಾರೆ. ತಮ್ಮ ನಿರ್ಮಾಣದಲ್ಲಿ ಸಂದೀಪ್ ರೆಡ್ಡಿ ವಂಗ ಅವರು ಯಾವ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗಾ ಅವರು ಈವರೆಗೂ ನಿರ್ದೇಶಿಸಿರುವುದು ಮೂರು ಸಿನಿಮಾ (ಅರ್ಜುನ್​ ರೆಡ್ಡಿ, ಕಬೀರ್ ಸಿಂಗ್​, ಅನಿಮಲ್​) ಮಾತ್ರ. ಈ ಎಲ್ಲ ಸಿನಿಮಾಗಳು ಭಾರಿ ಟೀಕೆಗೆ ಒಳಗಾಗಿದ್ದವು. ಮಹಿಳಾ ವಿರೋಧಿ ಸಂಭಾಷಣೆ ಮತ್ತು ದೃಶ್ಯಗಳು ಇವೆ ಎಂಬ ಕಾರಣಕ್ಕೆ ಈ ಚಿತ್ರಗಳನ್ನು ಅನೇಕರು ಟೀಕಿಸಿದ್ದುಂಟು. ಆದರೆ ಅಂಥ ಟೀಕೆಗಳಿಗೆ ಸಂದೀಪ್ ರೆಡ್ಡಿ ವಂಗಾ ಅವರು ತಲೆ ಕೆಡಿಸಿಕೊಂಡಿಲ್ಲ. ಅವರ ಮುಂದಿನ ‘ಸ್ಪಿರಿಟ್​’ ಸಿನಿಮಾ ಹೇಗಿರಲಿದೆ ಎಂಬ ಕೌತುಕ ಎಲ್ಲರಲ್ಲೂ ಇದೆ. ಇತ್ತೀಚೆಗೆ ಸಂದೀಪ್​ ರೆಡ್ಡಿ ವಂಗಾ ಅವರು ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿಕೊಟ್ಟಿದ್ದರು. ಆಗ ‘ಸ್ಪಿರಿಟ್​’ ಬಗ್ಗೆ ಮಾತನಾಡಿದ್ದರು. ಈ ಚಿತ್ರದ ಕೆಲಸಗಳು ಆರಂಭ ಆಗಿವೆ ಎಂದು ಅವರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ