AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಟಾಲಿವುಡ್​ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಶಾಹಿದ್​ ಕಪೂರ್​, ರಣಬೀರ್​ ಕಪೂರ್​ ಜೊತೆ ಈಗಾಗಲೇ ಕೆಲಸ ಮಾಡಿರುವ ಅವರು ಈಗ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಲು ಹಂಬಲಿಸುತ್ತಿದ್ದಾರೆ. ವಿಶೇಷ ಏನೆಂದರೆ, ಶಾರುಖ್​ ಜೊತೆ ಕಾಮಿಡಿ ಸಿನಿಮಾ ಮಾಡಬೇಕು ಎಂಬುದು ಅವರ ಆಸೆ.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಶಾರುಖ್​ ಖಾನ್​, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Nov 30, 2023 | 1:16 PM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಮಾಡಿದ ‘ಅರ್ಜುನ್​ ರೆಡ್ಡಿ’ ಸಿನಿಮಾ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ತೆಲುಗಿನಲ್ಲಿ ವಿಜಯ್​ ದೇವರಕೊಂಡ ನಟಿಸಿದ್ದ ಆ ಸಿನಿಮಾವನ್ನು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ ಎಂದು ರಿಮೇಕ್​ ಮಾಡಲಾಯಿತು. ಅದರಲ್ಲಿ ಶಾಹಿದ್​ ಕಪೂರ್​ ನಟಿಸಿ ಯಶಸ್ಸು ಕಂಡರು. ಅದಕ್ಕೂ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡುವ ಮೂಲಕ ಬಾಲಿವುಡ್​ಗೆ (Bollywood) ಕಾಲಿಟ್ಟಿದ್ದರು. ಈಗ ಅವರು ರಣಬೀರ್​ ಕಪೂರ್​ ನಟನೆಯ ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಶಾರುಖ್​ ಖಾನ್​ (Shah Rukh Khan) ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಂದೀಪ್​ ರೆಡ್ಡಿ ವಂಗಾ ಕಾದಿದ್ದಾರೆ.

ಶಾರುಖ್​ ಖಾನ್​ ಅವರು ದಕ್ಷಿಣ ಭಾರತದ ನಿರ್ದೇಶಕರಿಗೆ ಮಣೆ ಹಾಕುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಜೊತೆ ‘ಜವಾನ್​’ ಸಿನಿಮಾ ಮಾಡಿ ಶಾರುಖ್​ ಖಾನ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದರು. ಈಗ ಅವರು ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಜೊತೆ ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಸಂದೀಪ್​ ರೆಡ್ಡಿ ವಂಗಾ ಬಹಿರಂಗಪಡಿಸಿದ್ದಾರೆ. ‘ಅನಿಮಲ್​’ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಅವರು ಈ ವಿಷಯ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..

ಶಾರುಖ್​ ಖಾನ್​ ಅವರನ್ನು ಸಂದೀಪ್​ ಭೇಟಿ ಆಗಿದ್ದಾರೆ. ತಾವು ದೊಡ್ಡ ಅಭಿಮಾನಿ ಎಂದು ಕೂಡ ಹೇಳಿಕೊಂಡಿದ್ದಾರೆ. ಶಾರುಖ್​ ಖಾನ್​ ಜೊತೆ ಒಂದು ಕಾಮಿಡಿ ಸಿನಿಮಾ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗಾ ಅವರು ಆಸೆಪಟ್ಟಿದ್ದಾರೆ. ಆದರೆ ಅದಕ್ಕೆ ಶಾರುಖ್​ ಖಾನ್​ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕು. ಈವರೆಗೂ ತುಂಬಾ ರಗಡ್​ ಸಿನಿಮಾ ಮಾಡಿರುವ ಸಂದೀಪ್​ ಅವರು ಈಗ ಕಾಮಿಡಿ ಕಡೆಗೆ ಆಸಕ್ತಿ ತೋರಿಸುತ್ತಿರುವುದು ವಿಶೇಷ ಎನಿಸಿದೆ.

ಇದನ್ನೂ ಓದಿ: ಡಿ.1ರಂದು ‘ಅನಿಮಲ್​’ ಅದ್ದೂರಿ ಬಿಡುಗಡೆ; ಇಲ್ಲಿವೆ ಪೋಸ್ಟರ್​ಗಳು..

ಸದ್ಯ ‘ಅನಿಮಲ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದರ ಮೇಲೆ ಸಂದೀಪ್​ ರೆಡ್ಡಿ ವಂಗಾ ಅವರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಅವರ ಡಿಮ್ಯಾಂಡ್ ಹೆಚ್ಚಾಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಟಿ-ಸಿರೀಸ್​ ಸಂಸ್ಥೆ ಬಂಡವಾಳ ಹೂಡಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ