Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಟಾಲಿವುಡ್​ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಶಾಹಿದ್​ ಕಪೂರ್​, ರಣಬೀರ್​ ಕಪೂರ್​ ಜೊತೆ ಈಗಾಗಲೇ ಕೆಲಸ ಮಾಡಿರುವ ಅವರು ಈಗ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಲು ಹಂಬಲಿಸುತ್ತಿದ್ದಾರೆ. ವಿಶೇಷ ಏನೆಂದರೆ, ಶಾರುಖ್​ ಜೊತೆ ಕಾಮಿಡಿ ಸಿನಿಮಾ ಮಾಡಬೇಕು ಎಂಬುದು ಅವರ ಆಸೆ.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಶಾರುಖ್​ ಖಾನ್​, ಸಂದೀಪ್​ ರೆಡ್ಡಿ ವಂಗಾ
Follow us
ಮದನ್​ ಕುಮಾರ್​
|

Updated on: Nov 30, 2023 | 1:16 PM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಮಾಡಿದ ‘ಅರ್ಜುನ್​ ರೆಡ್ಡಿ’ ಸಿನಿಮಾ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ತೆಲುಗಿನಲ್ಲಿ ವಿಜಯ್​ ದೇವರಕೊಂಡ ನಟಿಸಿದ್ದ ಆ ಸಿನಿಮಾವನ್ನು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ ಎಂದು ರಿಮೇಕ್​ ಮಾಡಲಾಯಿತು. ಅದರಲ್ಲಿ ಶಾಹಿದ್​ ಕಪೂರ್​ ನಟಿಸಿ ಯಶಸ್ಸು ಕಂಡರು. ಅದಕ್ಕೂ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡುವ ಮೂಲಕ ಬಾಲಿವುಡ್​ಗೆ (Bollywood) ಕಾಲಿಟ್ಟಿದ್ದರು. ಈಗ ಅವರು ರಣಬೀರ್​ ಕಪೂರ್​ ನಟನೆಯ ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಶಾರುಖ್​ ಖಾನ್​ (Shah Rukh Khan) ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಂದೀಪ್​ ರೆಡ್ಡಿ ವಂಗಾ ಕಾದಿದ್ದಾರೆ.

ಶಾರುಖ್​ ಖಾನ್​ ಅವರು ದಕ್ಷಿಣ ಭಾರತದ ನಿರ್ದೇಶಕರಿಗೆ ಮಣೆ ಹಾಕುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಜೊತೆ ‘ಜವಾನ್​’ ಸಿನಿಮಾ ಮಾಡಿ ಶಾರುಖ್​ ಖಾನ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದರು. ಈಗ ಅವರು ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಜೊತೆ ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಸಂದೀಪ್​ ರೆಡ್ಡಿ ವಂಗಾ ಬಹಿರಂಗಪಡಿಸಿದ್ದಾರೆ. ‘ಅನಿಮಲ್​’ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಅವರು ಈ ವಿಷಯ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..

ಶಾರುಖ್​ ಖಾನ್​ ಅವರನ್ನು ಸಂದೀಪ್​ ಭೇಟಿ ಆಗಿದ್ದಾರೆ. ತಾವು ದೊಡ್ಡ ಅಭಿಮಾನಿ ಎಂದು ಕೂಡ ಹೇಳಿಕೊಂಡಿದ್ದಾರೆ. ಶಾರುಖ್​ ಖಾನ್​ ಜೊತೆ ಒಂದು ಕಾಮಿಡಿ ಸಿನಿಮಾ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗಾ ಅವರು ಆಸೆಪಟ್ಟಿದ್ದಾರೆ. ಆದರೆ ಅದಕ್ಕೆ ಶಾರುಖ್​ ಖಾನ್​ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕು. ಈವರೆಗೂ ತುಂಬಾ ರಗಡ್​ ಸಿನಿಮಾ ಮಾಡಿರುವ ಸಂದೀಪ್​ ಅವರು ಈಗ ಕಾಮಿಡಿ ಕಡೆಗೆ ಆಸಕ್ತಿ ತೋರಿಸುತ್ತಿರುವುದು ವಿಶೇಷ ಎನಿಸಿದೆ.

ಇದನ್ನೂ ಓದಿ: ಡಿ.1ರಂದು ‘ಅನಿಮಲ್​’ ಅದ್ದೂರಿ ಬಿಡುಗಡೆ; ಇಲ್ಲಿವೆ ಪೋಸ್ಟರ್​ಗಳು..

ಸದ್ಯ ‘ಅನಿಮಲ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದರ ಮೇಲೆ ಸಂದೀಪ್​ ರೆಡ್ಡಿ ವಂಗಾ ಅವರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಅವರ ಡಿಮ್ಯಾಂಡ್ ಹೆಚ್ಚಾಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಟಿ-ಸಿರೀಸ್​ ಸಂಸ್ಥೆ ಬಂಡವಾಳ ಹೂಡಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ