ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಟಾಲಿವುಡ್​ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಶಾಹಿದ್​ ಕಪೂರ್​, ರಣಬೀರ್​ ಕಪೂರ್​ ಜೊತೆ ಈಗಾಗಲೇ ಕೆಲಸ ಮಾಡಿರುವ ಅವರು ಈಗ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಲು ಹಂಬಲಿಸುತ್ತಿದ್ದಾರೆ. ವಿಶೇಷ ಏನೆಂದರೆ, ಶಾರುಖ್​ ಜೊತೆ ಕಾಮಿಡಿ ಸಿನಿಮಾ ಮಾಡಬೇಕು ಎಂಬುದು ಅವರ ಆಸೆ.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಶಾರುಖ್​ ಖಾನ್​, ಸಂದೀಪ್​ ರೆಡ್ಡಿ ವಂಗಾ
Follow us
|

Updated on: Nov 30, 2023 | 1:16 PM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಮಾಡಿದ ‘ಅರ್ಜುನ್​ ರೆಡ್ಡಿ’ ಸಿನಿಮಾ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ತೆಲುಗಿನಲ್ಲಿ ವಿಜಯ್​ ದೇವರಕೊಂಡ ನಟಿಸಿದ್ದ ಆ ಸಿನಿಮಾವನ್ನು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ ಎಂದು ರಿಮೇಕ್​ ಮಾಡಲಾಯಿತು. ಅದರಲ್ಲಿ ಶಾಹಿದ್​ ಕಪೂರ್​ ನಟಿಸಿ ಯಶಸ್ಸು ಕಂಡರು. ಅದಕ್ಕೂ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡುವ ಮೂಲಕ ಬಾಲಿವುಡ್​ಗೆ (Bollywood) ಕಾಲಿಟ್ಟಿದ್ದರು. ಈಗ ಅವರು ರಣಬೀರ್​ ಕಪೂರ್​ ನಟನೆಯ ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಶಾರುಖ್​ ಖಾನ್​ (Shah Rukh Khan) ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಂದೀಪ್​ ರೆಡ್ಡಿ ವಂಗಾ ಕಾದಿದ್ದಾರೆ.

ಶಾರುಖ್​ ಖಾನ್​ ಅವರು ದಕ್ಷಿಣ ಭಾರತದ ನಿರ್ದೇಶಕರಿಗೆ ಮಣೆ ಹಾಕುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಜೊತೆ ‘ಜವಾನ್​’ ಸಿನಿಮಾ ಮಾಡಿ ಶಾರುಖ್​ ಖಾನ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದರು. ಈಗ ಅವರು ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಜೊತೆ ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಸಂದೀಪ್​ ರೆಡ್ಡಿ ವಂಗಾ ಬಹಿರಂಗಪಡಿಸಿದ್ದಾರೆ. ‘ಅನಿಮಲ್​’ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಅವರು ಈ ವಿಷಯ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..

ಶಾರುಖ್​ ಖಾನ್​ ಅವರನ್ನು ಸಂದೀಪ್​ ಭೇಟಿ ಆಗಿದ್ದಾರೆ. ತಾವು ದೊಡ್ಡ ಅಭಿಮಾನಿ ಎಂದು ಕೂಡ ಹೇಳಿಕೊಂಡಿದ್ದಾರೆ. ಶಾರುಖ್​ ಖಾನ್​ ಜೊತೆ ಒಂದು ಕಾಮಿಡಿ ಸಿನಿಮಾ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗಾ ಅವರು ಆಸೆಪಟ್ಟಿದ್ದಾರೆ. ಆದರೆ ಅದಕ್ಕೆ ಶಾರುಖ್​ ಖಾನ್​ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕು. ಈವರೆಗೂ ತುಂಬಾ ರಗಡ್​ ಸಿನಿಮಾ ಮಾಡಿರುವ ಸಂದೀಪ್​ ಅವರು ಈಗ ಕಾಮಿಡಿ ಕಡೆಗೆ ಆಸಕ್ತಿ ತೋರಿಸುತ್ತಿರುವುದು ವಿಶೇಷ ಎನಿಸಿದೆ.

ಇದನ್ನೂ ಓದಿ: ಡಿ.1ರಂದು ‘ಅನಿಮಲ್​’ ಅದ್ದೂರಿ ಬಿಡುಗಡೆ; ಇಲ್ಲಿವೆ ಪೋಸ್ಟರ್​ಗಳು..

ಸದ್ಯ ‘ಅನಿಮಲ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದರ ಮೇಲೆ ಸಂದೀಪ್​ ರೆಡ್ಡಿ ವಂಗಾ ಅವರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಅವರ ಡಿಮ್ಯಾಂಡ್ ಹೆಚ್ಚಾಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಟಿ-ಸಿರೀಸ್​ ಸಂಸ್ಥೆ ಬಂಡವಾಳ ಹೂಡಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!