AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ಟಾಲಿವುಡ್​ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಶಾಹಿದ್​ ಕಪೂರ್​, ರಣಬೀರ್​ ಕಪೂರ್​ ಜೊತೆ ಈಗಾಗಲೇ ಕೆಲಸ ಮಾಡಿರುವ ಅವರು ಈಗ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಲು ಹಂಬಲಿಸುತ್ತಿದ್ದಾರೆ. ವಿಶೇಷ ಏನೆಂದರೆ, ಶಾರುಖ್​ ಜೊತೆ ಕಾಮಿಡಿ ಸಿನಿಮಾ ಮಾಡಬೇಕು ಎಂಬುದು ಅವರ ಆಸೆ.

ಶಾರುಖ್​ ಖಾನ್​ ಜತೆ ಕಾಮಿಡಿ ಸಿನಿಮಾ ಮಾಡುವ ಹಂಬಲದಲ್ಲಿ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ
ಶಾರುಖ್​ ಖಾನ್​, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Nov 30, 2023 | 1:16 PM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರಿಗೆ ಸಖತ್​ ಬೇಡಿಕೆ ಇದೆ. ಅವರು ಮಾಡಿದ ‘ಅರ್ಜುನ್​ ರೆಡ್ಡಿ’ ಸಿನಿಮಾ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ತೆಲುಗಿನಲ್ಲಿ ವಿಜಯ್​ ದೇವರಕೊಂಡ ನಟಿಸಿದ್ದ ಆ ಸಿನಿಮಾವನ್ನು ಹಿಂದಿಯಲ್ಲಿ ‘ಕಬೀರ್​ ಸಿಂಗ್​’ ಎಂದು ರಿಮೇಕ್​ ಮಾಡಲಾಯಿತು. ಅದರಲ್ಲಿ ಶಾಹಿದ್​ ಕಪೂರ್​ ನಟಿಸಿ ಯಶಸ್ಸು ಕಂಡರು. ಅದಕ್ಕೂ ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡುವ ಮೂಲಕ ಬಾಲಿವುಡ್​ಗೆ (Bollywood) ಕಾಲಿಟ್ಟಿದ್ದರು. ಈಗ ಅವರು ರಣಬೀರ್​ ಕಪೂರ್​ ನಟನೆಯ ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಶಾರುಖ್​ ಖಾನ್​ (Shah Rukh Khan) ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲು ಸಂದೀಪ್​ ರೆಡ್ಡಿ ವಂಗಾ ಕಾದಿದ್ದಾರೆ.

ಶಾರುಖ್​ ಖಾನ್​ ಅವರು ದಕ್ಷಿಣ ಭಾರತದ ನಿರ್ದೇಶಕರಿಗೆ ಮಣೆ ಹಾಕುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಜೊತೆ ‘ಜವಾನ್​’ ಸಿನಿಮಾ ಮಾಡಿ ಶಾರುಖ್​ ಖಾನ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದರು. ಈಗ ಅವರು ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಜೊತೆ ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಸಂದೀಪ್​ ರೆಡ್ಡಿ ವಂಗಾ ಬಹಿರಂಗಪಡಿಸಿದ್ದಾರೆ. ‘ಅನಿಮಲ್​’ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಅವರು ಈ ವಿಷಯ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಸುತ್ತಾ ‘ಅನಿಮಲ್​’ ಸಿನಿಮಾ? ಇಲ್ಲಿದೆ ಲೆಕ್ಕಾಚಾರ..

ಶಾರುಖ್​ ಖಾನ್​ ಅವರನ್ನು ಸಂದೀಪ್​ ಭೇಟಿ ಆಗಿದ್ದಾರೆ. ತಾವು ದೊಡ್ಡ ಅಭಿಮಾನಿ ಎಂದು ಕೂಡ ಹೇಳಿಕೊಂಡಿದ್ದಾರೆ. ಶಾರುಖ್​ ಖಾನ್​ ಜೊತೆ ಒಂದು ಕಾಮಿಡಿ ಸಿನಿಮಾ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗಾ ಅವರು ಆಸೆಪಟ್ಟಿದ್ದಾರೆ. ಆದರೆ ಅದಕ್ಕೆ ಶಾರುಖ್​ ಖಾನ್​ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎಂಬುದನ್ನು ಕಾದು ನೋಡಬೇಕು. ಈವರೆಗೂ ತುಂಬಾ ರಗಡ್​ ಸಿನಿಮಾ ಮಾಡಿರುವ ಸಂದೀಪ್​ ಅವರು ಈಗ ಕಾಮಿಡಿ ಕಡೆಗೆ ಆಸಕ್ತಿ ತೋರಿಸುತ್ತಿರುವುದು ವಿಶೇಷ ಎನಿಸಿದೆ.

ಇದನ್ನೂ ಓದಿ: ಡಿ.1ರಂದು ‘ಅನಿಮಲ್​’ ಅದ್ದೂರಿ ಬಿಡುಗಡೆ; ಇಲ್ಲಿವೆ ಪೋಸ್ಟರ್​ಗಳು..

ಸದ್ಯ ‘ಅನಿಮಲ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದರ ಮೇಲೆ ಸಂದೀಪ್​ ರೆಡ್ಡಿ ವಂಗಾ ಅವರ ಭವಿಷ್ಯ ನಿರ್ಧಾರ ಆಗಲಿದೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದರೆ ಅವರ ಡಿಮ್ಯಾಂಡ್ ಹೆಚ್ಚಾಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 1ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ಟಿ-ಸಿರೀಸ್​ ಸಂಸ್ಥೆ ಬಂಡವಾಳ ಹೂಡಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ