AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಅನಿಮಲ್’; ವೀಕೆಂಡ್​ನಲ್ಲಿ ಭರ್ಜರಿ ಕಮಾಯಿ

‘ಅನಿಮಲ್’ ಚಿತ್ರ ದಿನ ಕಳೆದಂತೆ ಹೆಚ್ಚಿನ ಗಳಿಕೆ ಮಾಡುತ್ತಲೇ ಬಂತು. ಈ ಸಿನಿಮಾ ಭಾನುವಾರ 12 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ ಭಾರತದಲ್ಲಿ 500 ಕೋಟಿ ರೂಪಾಯಿ ಆಗಿದೆ.

500 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಅನಿಮಲ್’; ವೀಕೆಂಡ್​ನಲ್ಲಿ ಭರ್ಜರಿ ಕಮಾಯಿ
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Dec 18, 2023 | 8:31 AM

Share

‘ಅನಿಮಲ್’ ಸಿನಿಮಾದಿಂದ (Animal Movie) ನಿರ್ದೇಶಕ ಸಂದೀಪ್ ರೆಡ್ಡಿ ವಂಗ, ಕಲಾವಿದರಾದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ಮೊದಲಾದವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಭಾನುವಾರ (ಡಿಸೆಂಬರ್ 17) ಭರ್ಜರಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಭಾರತದ ಬಾಕ್ಸ್ ಆಫೀಸ್ ಕಲೆಕ್ಷನ್ 500 ಕೋಟಿ ರೂಪಾಯಿ ಆಗಿದೆ. ಗಳಿಕೆ ವಿಚಾರದಲ್ಲಿ ಈ ಚಿತ್ರ ಮತ್ತಷ್ಟು ದಾಖಲೆ ಬರೆಯುವ ಸಾಧ್ಯತೆ ಇದೆ. ಈ ವರ್ಷ 500 ಕೋಟಿ ಕ್ಲಬ್ ಸೇರಿದ ನಾಲ್ಕನೇ ಹಿಂದಿ ಸಿನಿಮಾ ಎನ್ನುವ ಖ್ಯಾತಿ ‘ಅನಿಮಲ್’ ಚಿತ್ರಕ್ಕೆ ಸಿಕ್ಕಿದೆ.

ಡಿಸೆಂಬರ್ 1ರಂದು ‘ಅನಿಮಲ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಸಿನಿಮಾ ಅಬ್ಬರದ ಗಳಿಕೆ ಮಾಡಿತು. ವಿಮರ್ಶಕರಿಂದ ಚಿತ್ರಕ್ಕೆ ನೆಗೆಟಿವ್ ಪ್ರಚಾರ ಸಿಕ್ಕರೂ ಸಿನಿಮಾ ಗಳಿಕೆ ಮೇಲೆ ಯಾವುದೇ ಪ್ರಭಾವ ಉಂಟಾಗಿಲ್ಲ. ಈ ಚಿತ್ರ ದಿನ ಕಳೆದಂತೆ ಹೆಚ್ಚಿನ ಗಳಿಕೆ ಮಾಡುತ್ತಲೇ ಬಂತು. ಈ ಸಿನಿಮಾ ಭಾನುವಾರ 12 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ ಭಾರತದಲ್ಲಿ 500 ಕೋಟಿ ರೂಪಾಯಿ ಆಗಿದೆ.

ವಿಶ್ವ ಬಾಕ್ಸ್ ಆಫೀಸ್​ನಲ್ಲೂ ‘ಅನಿಮಲ್’ ಸಿನಿಮಾ ಅಬ್ಬರದ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 800 ಕೋಟಿ ರೂಪಾಯಿ ಗಳಿಸಿದೆ. ಅಂದರೆ, ವಿದೇಶದಲ್ಲಿ ಈ ಚಿತ್ರ 17 ದಿನಕ್ಕೆ 300 ಕೋಟಿ ರೂಪಾಯಿ ಗಳಿಸಿದೆ. ಅಮೆರಿಕ ಮೊದಲಾದ ಕಡೆಗಳಲ್ಲಿ ಈ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಇದು ರಣಬೀರ್ ಹಾಗೂ ರಶ್ಮಿಕಾ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

‘ಅನಿಮಲ್’ ಸಿನಿಮಾದಿಂದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್, ಶಕ್ತಿ ಕಪೂರ್ ಮೊದಲಾದವರ ಖ್ಯಾತಿ ಹೆಚ್ಚಿದೆ. ನಟಿ ತೃಪ್ತಿ ದಿಮ್ರಿ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಬೋಲ್ಡ್ ಪಾತ್ರದ ಮೂಲಕ ಅವರು ಗೆದ್ದು ಬೀಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Mon, 18 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್