AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಅನಿಮಲ್’; ವೀಕೆಂಡ್​ನಲ್ಲಿ ಭರ್ಜರಿ ಕಮಾಯಿ

‘ಅನಿಮಲ್’ ಚಿತ್ರ ದಿನ ಕಳೆದಂತೆ ಹೆಚ್ಚಿನ ಗಳಿಕೆ ಮಾಡುತ್ತಲೇ ಬಂತು. ಈ ಸಿನಿಮಾ ಭಾನುವಾರ 12 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ ಭಾರತದಲ್ಲಿ 500 ಕೋಟಿ ರೂಪಾಯಿ ಆಗಿದೆ.

500 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಅನಿಮಲ್’; ವೀಕೆಂಡ್​ನಲ್ಲಿ ಭರ್ಜರಿ ಕಮಾಯಿ
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Dec 18, 2023 | 8:31 AM

Share

‘ಅನಿಮಲ್’ ಸಿನಿಮಾದಿಂದ (Animal Movie) ನಿರ್ದೇಶಕ ಸಂದೀಪ್ ರೆಡ್ಡಿ ವಂಗ, ಕಲಾವಿದರಾದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ಮೊದಲಾದವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಭಾನುವಾರ (ಡಿಸೆಂಬರ್ 17) ಭರ್ಜರಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಭಾರತದ ಬಾಕ್ಸ್ ಆಫೀಸ್ ಕಲೆಕ್ಷನ್ 500 ಕೋಟಿ ರೂಪಾಯಿ ಆಗಿದೆ. ಗಳಿಕೆ ವಿಚಾರದಲ್ಲಿ ಈ ಚಿತ್ರ ಮತ್ತಷ್ಟು ದಾಖಲೆ ಬರೆಯುವ ಸಾಧ್ಯತೆ ಇದೆ. ಈ ವರ್ಷ 500 ಕೋಟಿ ಕ್ಲಬ್ ಸೇರಿದ ನಾಲ್ಕನೇ ಹಿಂದಿ ಸಿನಿಮಾ ಎನ್ನುವ ಖ್ಯಾತಿ ‘ಅನಿಮಲ್’ ಚಿತ್ರಕ್ಕೆ ಸಿಕ್ಕಿದೆ.

ಡಿಸೆಂಬರ್ 1ರಂದು ‘ಅನಿಮಲ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಸಿನಿಮಾ ಅಬ್ಬರದ ಗಳಿಕೆ ಮಾಡಿತು. ವಿಮರ್ಶಕರಿಂದ ಚಿತ್ರಕ್ಕೆ ನೆಗೆಟಿವ್ ಪ್ರಚಾರ ಸಿಕ್ಕರೂ ಸಿನಿಮಾ ಗಳಿಕೆ ಮೇಲೆ ಯಾವುದೇ ಪ್ರಭಾವ ಉಂಟಾಗಿಲ್ಲ. ಈ ಚಿತ್ರ ದಿನ ಕಳೆದಂತೆ ಹೆಚ್ಚಿನ ಗಳಿಕೆ ಮಾಡುತ್ತಲೇ ಬಂತು. ಈ ಸಿನಿಮಾ ಭಾನುವಾರ 12 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ ಭಾರತದಲ್ಲಿ 500 ಕೋಟಿ ರೂಪಾಯಿ ಆಗಿದೆ.

ವಿಶ್ವ ಬಾಕ್ಸ್ ಆಫೀಸ್​ನಲ್ಲೂ ‘ಅನಿಮಲ್’ ಸಿನಿಮಾ ಅಬ್ಬರದ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 800 ಕೋಟಿ ರೂಪಾಯಿ ಗಳಿಸಿದೆ. ಅಂದರೆ, ವಿದೇಶದಲ್ಲಿ ಈ ಚಿತ್ರ 17 ದಿನಕ್ಕೆ 300 ಕೋಟಿ ರೂಪಾಯಿ ಗಳಿಸಿದೆ. ಅಮೆರಿಕ ಮೊದಲಾದ ಕಡೆಗಳಲ್ಲಿ ಈ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಇದು ರಣಬೀರ್ ಹಾಗೂ ರಶ್ಮಿಕಾ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

‘ಅನಿಮಲ್’ ಸಿನಿಮಾದಿಂದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್, ಶಕ್ತಿ ಕಪೂರ್ ಮೊದಲಾದವರ ಖ್ಯಾತಿ ಹೆಚ್ಚಿದೆ. ನಟಿ ತೃಪ್ತಿ ದಿಮ್ರಿ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಂಡಿದ್ದಾರೆ. ಬೋಲ್ಡ್ ಪಾತ್ರದ ಮೂಲಕ ಅವರು ಗೆದ್ದು ಬೀಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Mon, 18 December 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!