AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಸಿನಿಮಾಗಾಗಿ ಅರ್ಧದಷ್ಟು ಸಂಭಾವನೆ ಕಡಿತ ಮಾಡಿಕೊಂಡ ರಣಬೀರ್; ಒಟ್ಟೂ ಪಡೆದಿದ್ದೆಷ್ಟು?

‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಹೀಗಾಗಿ, ಚಿತ್ರಕ್ಕೆ ‘ಅರ್ಜುನ್ ರೆಡ್ಡಿ’ ಚಿತ್ರದ ಶೇಡ್ ಇದೆ. ‘ಅನಿಮಲ್​’ಗಾಗಿ ರಣಬೀರ್ ಅವರು 30-35 ಕೋಟಿ ರೂಪಾಯಿ ಪಡೆದಿದ್ದಾರೆ.

‘ಅನಿಮಲ್’ ಸಿನಿಮಾಗಾಗಿ ಅರ್ಧದಷ್ಟು ಸಂಭಾವನೆ ಕಡಿತ ಮಾಡಿಕೊಂಡ ರಣಬೀರ್; ಒಟ್ಟೂ ಪಡೆದಿದ್ದೆಷ್ಟು?
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Oct 02, 2023 | 7:46 AM

Share

ನಟ ರಣಬೀರ್ ಕಪೂರ್ (Ranbir Kapoor) ಅವರು ‘ಅನಿಮಲ್’ ಸಿನಿಮಾ ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈಗ ಅವರ ಸಂಭಾವನೆ ವಿಚಾರ ಚರ್ಚೆಗೆ ಬಂದಿದೆ. ಅವರು ಈ ಚಿತ್ರಕ್ಕಾಗಿ ಪಡೆದಿದ್ದೆಷ್ಟು ಎನ್ನುವ ಕುರಿತು ಚರ್ಚೆ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ರಣಬೀರ್ ಕಪೂರ್ ಅವರು ಸ್ಟಾರ್ ಹೀರೋ ಆಗಿ ಬೆಳೆದು ನಿಂತಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಸಿಕ್ಕ ಎಲ್ಲಾ ಕಥೆಗಳನ್ನು ಒಪ್ಪಿ ನಟಿಸುವುದಿಲ್ಲ. ಅಳೆದು, ತೂಗಿ ಅವರು ಸಿನಿಮಾ ಮಾಡುತ್ತಾರೆ. ಅವರಿಗೆ ‘ಅನಿಮಲ್’ ಚಿತ್ರದ ಕಥೆ ಇಷ್ಟವಾಗಿದೆ. ಹೀಗಾಗಿ, ಈ ಚಿತ್ರಕ್ಕಾಗಿ ಅವರು ದೊಡ್ಡ ಕಾಲ್​ಶೀಟ್ ನೀಡಿದ್ದರು. ‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಹೀಗಾಗಿ, ಚಿತ್ರಕ್ಕೆ ‘ಅರ್ಜುನ್ ರೆಡ್ಡಿ’ ಚಿತ್ರದ ಶೇಡ್ ಇದೆ. ‘ಅನಿಮಲ್​’ಗಾಗಿ ರಣಬೀರ್ ಅವರು 30-35 ಕೋಟಿ ರೂಪಾಯಿ ಪಡೆದಿದ್ದಾರೆ.

ರಣಬೀರ್ ಕಪೂರ್ ಅವರು ಪ್ರತಿ ಚಿತ್ರಕ್ಕೆ ಪಡೆಯೋದು 70 ಕೋಟಿ ರೂಪಾಯಿ. ಆದರೆ, ‘ಅನಿಮಲ್’ ಚಿತ್ರಕ್ಕಾಗಿ ಸಂಭಾವನೆಯನ್ನು ಅರ್ಧದಷ್ಟು ಇಳಿಸಿಕೊಂಡಿದ್ದಾರೆ. ಉಳಿದ 35 ಕೋಟಿ ರೂಪಾಯಿ ಹಣವನ್ನು ನಿರ್ಮಾಣಕ್ಕೆ ಬಳಕೆ ಮಾಡುವಂತೆ ಕೋರಿದ್ದಾರೆ. ಸಿನಿಮಾ ಗೆದ್ದರೆ ಅದರಲ್ಲಿ ಬಂದ ಲಾಭದಲ್ಲಿ ಪಾಲು ಪಡೆಯಲಿದ್ದಾರೆ. ಈ ರೀತಿಯ ಲೆಕ್ಕಾಚಾರವನ್ನು ಅವರು ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

‘ಅನಿಮಲ್’ ಸಿನಿಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ನಾಯಕಿ ಪಾತ್ರ ಮಾಡುತ್ತಿದ್ದಾರೆ. ರಣಬೀರ್ ತಂದೆಯಾಗಿ ಅನಿಲ್ ಕಪೂರ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಹಾಗೂ ಸಾಹಸ ದೃಶ್ಯಗಳು ಇರಲಿವೆ ಅನ್ನೋದು ಅಭಿಮಾನಿಗಳ ನಿರೀಕ್ಷೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು