AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆದ ‘ಅನಿಮಲ್’; ಊಹೆಗೂ ಮೀರಿ ಕಲೆಕ್ಷನ್

ವೀಕೆಂಡ್​ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ್ದ ರಣಬೀರ್ ಕಪುರ್ ನಟನೆಯ ‘ಅನಿಮಲ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ ಭರ್ಜರಿ ಕಮಾಯಿ ಮಾಡಿದೆ. ಈ ಮೂಲಕ ಸಿನಿಮಾ ಗೆದ್ದಿದೆ.

ಸೋಮವಾರದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆದ ‘ಅನಿಮಲ್’; ಊಹೆಗೂ ಮೀರಿ ಕಲೆಕ್ಷನ್
ರಣಬೀರ್ ಕಪೂರ್​
ರಾಜೇಶ್ ದುಗ್ಗುಮನೆ
|

Updated on: Dec 05, 2023 | 10:23 AM

Share

ಸಾಮಾನ್ಯವಾಗಿ ವೀಕೆಂಡ್​ನಲ್ಲಿ ಭರ್ಜರಿ ಗಳಿಕೆ ಮಾಡುವ ಸಿನಿಮಾಗಳು ವಾರದ ದಿನಗಳಲ್ಲಿ ಡಲ್ ಹೊಡೆಯುತ್ತವೆ. ಏಕಾಏಕಿ ಕಲೆಕ್ಷನ್​ನಲ್ಲಿ ಇಳಿಕೆ ಕಾಣುತ್ತದೆ. ಆದರೆ, ‘ಅನಿಮಲ್’ ಸಿನಿಮಾ (Animal Movie) ಈ ವಿಚಾರವನ್ನು ಸುಳ್ಳು ಮಾಡಿದೆ. ಸೋಮವಾರ (ಡಿಸೆಂಬರ್ 4) ಈ ಚಿತ್ರ 39.9 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸೋಮವಾರದ ಪರೀಕ್ಷೆಯನ್ನಿ ಡಿಸ್ಟಿಂಕ್ಷನ್​ನಲ್ಲಿ ಚಿತ್ರ ಪಾಸ್ ಆಗಿದೆ. ಶೀಘ್ರವೇ ಸಿನಿಮಾ 300 ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

ಹಿಂದಿ, ಕನ್ನಡ, ತೆಲುಗು ಸೇರಿ ಐದು ಭಾಷೆಗಳಲ್ಲಿ ‘ಅನಿಮಲ್’ ಸಿನಿಮಾ ರಿಲೀಸ್ ಆಗಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಚಿತ್ರಕ್ಕೆ 241 ಕೋಟಿ ರೂಪಾಯಿ ಹರಿದು ಬಂದಿದೆ. ರಣಬೀರ್ ಕಪೂರ್ ಅವರ ವೃತ್ತಿ ಜೀವನಕ್ಕೆ ಅತಿ ದೊಡ್ಡ ಯಶಸ್ಸು ತಂದುಕೊಟ್ಟ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ.

ಸ್ಯಾನ್​ಸಿಲ್ಕ್ ನೀಡಿರುವ ವರದಿ ಪ್ರಕಾರ ಸೋಮವಾರ ಸಿನಿಮಾಗೆ ಹಿಂದಿ ಅವತರಣಿಕೆಯಿಂದ 36 ಕೋಟಿ ರೂಪಾಯಿ ಹರಿದು ಬಂದಿದೆ. ಉಳಿದ ಭಾಷೆಗಳಿಂದ 3 ಕೋಟಿ ರೂಪಾಯಿ ಕಮಾಯಿ ಆಗಿದೆ. ಇಂದು (ಡಿಸೆಂಬರ್ 5) ಸಿನಿಮಾದ ಗಳಿಕೆ 250 ಕೋಟಿ ರೂಪಾಯಿ ದಾಟಲಿದೆ. ‘ಪಠಾಣ್’, ‘ಜವಾನ್’ ಹಾಗೂ ‘ಗದರ್ 2’ ರೀತಿಯಲ್ಲಿ ಈ ಚಿತ್ರವೂ 500 ಕೋಟಿ ರೂಪಾಯಿ ಕ್ಲಬ್ ಸೇರಿದರೂ ಅಚ್ಚರಿ ಏನಿಲ್ಲ.

‘ಅನಿಮಲ್’ ಚಿತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಒಂದು ವರ್ಗದ ಜನರು ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಇನ್ನೊಂದು ವರ್ಗದ ಜನರು ಈ ಚಿತ್ರವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಸ್ತ್ರೀದ್ವೇಷ ಹಾಗೂ ಪುರುಷತ್ವವನ್ನು ಅತಿಯಾಗಿ ಬಿಂಬಿಸಲಾಗಿದೆ ಎಂದು ಕೆಲವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದಲ್ಲಿ ಮಿಂಚಿದ ಬಾಬಿ ಡಿಯೋಲ್​; ಆದರೂ ಫ್ಯಾನ್ಸ್​ಗೆ ಇದೆ ಬೇಸರ

‘ಅನಿಮಲ್’ ಸಿನಿಮಾಗೆ ‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದಾರೆ. ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಬಾಬಿ ಡಿಯೋಲ್, ಅನಿಲ್ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!