‘ಅನಿಮಲ್’ ನಿರ್ದೇಶಕ ಅನುಭವಿಸಿದ್ದು ಒಂದೆರಡಲ್ಲ; ಬಾಲಿವುಡ್​ ಅವರನ್ನು ಹೀಗೆಲ್ಲ ಟ್ರೀಟ್ ಮಾಡಿದೆ..

ಸಂದೀಪ್ ರೆಡ್ಡಿ ವಂಗ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ. ‘ನಾನು ಹೆಚ್ಚು ದೂರುತ್ತೇನೆ ಎಂದು ಎಲ್ಲರಿಗೂ ಅನಿಸಬಾರದು. ಹೀಗಾಗಿ, ನಾನು ಅನುಭವಿಸಿದ ಎಲ್ಲಾ ವಿಚಾರಗಳನ್ನು ಹೇಳಿಕೊಳ್ಳಲು ಬಯಸೊಲ್ಲ’ ಎಂದಿದ್ದಾರೆ ಅವರು.

‘ಅನಿಮಲ್’ ನಿರ್ದೇಶಕ ಅನುಭವಿಸಿದ್ದು ಒಂದೆರಡಲ್ಲ; ಬಾಲಿವುಡ್​ ಅವರನ್ನು ಹೀಗೆಲ್ಲ ಟ್ರೀಟ್ ಮಾಡಿದೆ..
ಸಂದೀಪ್ ರೆಡ್ಡಿ ವಂಗ
Follow us
|

Updated on: Jan 17, 2024 | 11:44 AM

ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ‘ಅನಿಮಲ್’ ಸಿನಿಮಾದಿಂದ (Animal Movie) ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರ ಸಾಕಷ್ಟು ವಿವಾದಗಳನ್ನು ಕೂಡ ಮಾಡಿದೆ. ಈ ಸಿನಿಮಾ ಫಿಲ್ಮ್​ಫೇರ್​ ಅವಾರ್ಡ್​ನಲ್ಲಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಇದರ ಜೊತೆಗೆ ಚಿತ್ರರಂಗ ಹೊರಗಿನಿಂದ ಬಂದವರನ್ನು ಯಾವ ರೀತಿಯಲ್ಲಿ ನೋಡುತ್ತದೆ ಎಂಬುದನ್ನು ಅವರು ಹೇಳಿದ್ದಾರೆ. ‘ಚಿತ್ರರಂಗದಲ್ಲಿ ಇರುವವರು ತಮ್ಮ ಸುತ್ತ ಮುತ್ತಲಿನವರನ್ನು ಪ್ರಮೋಟ್ ಮಾಡಲು ಹೆಚ್ಚು ಆಸಕ್ತಿ ತೋರಿಸುತ್ತಾರೆ. ಹೊರಗಿನಿಂದ ಬಂದವರನ್ನು ಅವರು ಪ್ರಮೋಟ್ ಮಾಡುವುದಿಲ್ಲ’ ಎಂದಿದ್ದಾರೆ  ಸಂದೀಪ್ ರೆಡ್ಡಿ ವಂಗ.

ಸಂದರ್ಶನ ಒಂದರಲ್ಲಿ ಸಂದೀಪ್ ರೆಡ್ಡಿ ವಂಗ ಮಾತನಾಡಿದ್ದಾರೆ. ‘ನಾನು ಹೆಚ್ಚು ದೂರುತ್ತೇನೆ ಎಂದು ಎಲ್ಲರಿಗೂ ಅನಿಸಬಾರದು. ಹೀಗಾಗಿ, ನಾನು ಅನುಭವಿಸಿದ ಎಲ್ಲಾ ವಿಚಾರಗಳನ್ನು ಹೇಳಿಕೊಳ್ಳಲು ಬಯಸುವುದಿಲ್ಲ. ಇದು ನಿಜಕ್ಕೂ ಪ್ರಾಣಿಗಳ ರೀತಿಯ ವರ್ತನೆ. ಪ್ರಾಣಿಗಳು ತಮ್ಮ ಜಾಗವನ್ನು ಆಗ್ರಮಿಸಿಕೊಳ್ಳಲು ಬರುತ್ತಿದ್ದಾರೆ ಎಂದು ತಿಳಿದಾಗ ಎದುರಾಳಿಗಳ ವಿರುದ್ಧ ಅವು ತಿರುಗಿ ಬೀಳುತ್ತವೆ’ ಎಂದಿದ್ದಾರೆ ಸಂದೀಪ್ ರೆಡ್ಡಿ ವಂಗ.

‘ಅವಾರ್ಡ್ ​ಶೋಗಳನ್ನೇ ನೋಡಿ. ಎಲ್ಲರೂ ಅವರವರ ಗೆಳೆಯರನ್ನೇ ಪ್ರಮೋಟ್ ಮಾಡುತ್ತಾರೆ. ಅವಾರ್ಡ್ ಫಂಕ್ಷನ್ ಏನು ಅನ್ನೋದು ಎಲ್ಲರಿಗೂ ಗೊತ್ತು. ಬಾಲಿವುಡ್​ಗೆ ಬಂದ ಬಳಿಕ ನಾನು ಏನೆಲ್ಲ ಎದುರಿಸಿದ್ದೀನಿ ಅನ್ನೋದನ್ನು ರಾತ್ರಿ ಬೆಳಗ್ಗಿನವರೆಗೆ ನಾನು ಹೇಳಬಹುದು. ಅಷ್ಟು ನನ್ನ ಜೀವನದಲ್ಲಿ ಘಟಿಸಿದೆ. ಆದರೆ, ನನಗೆ ಮಗುವಿನಂತೆ ಅಳೋಕೆ ಇಷ್ಟ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಒಟಿಟಿಯಲ್ಲಿ ಸದ್ಯಕ್ಕೆ ರಿಲೀಸ್ ಆಗಲ್ಲ ‘ಅನಿಮಲ್’? ನಿರ್ಮಾಣ ಸಂಸ್ಥೆಯಿಂದಲೇ ಚಿತ್ರದ ಮೇಲೆ ಬಿತ್ತು ಕೇಸ್

‘ಅನಿಮಲ್’ ಸಿನಿಮಾ ಪಾಸಿಟಿವ್ ಹಾಗೂ ನೆಗೆಟಿವ್ ಎರಡೂ ರೀತಿಯ ವಿಮರ್ಶೆ ಪಡೆದಿದೆ. ಅನೇಕರು ಈ ಚಿತ್ರವನ್ನು ಸಾಕಷ್ಟು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಹೆಣ್ಣುಮಕ್ಕಳ ಗೌರವ ಕಳೆಯುವಂಥ ದೃಶ್ಯಗಳು ಇವೆ ಎಂದು ಅನೇಕರು ಆರೋಪಿಸಿದ್ದರು. ಈ ಸಿನಿಮಾ ಫಿಲ್ಮ್​ಫೇರ್​ನಲ್ಲಿ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ