AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

900 ಕೋಟಿ ರೂಪಾಯಿ ಹಿಟ್​ ನೀಡಿದ ಈ ನಿರ್ದೇಶಕ ಯಾರು ಅಂತ ಗೊತ್ತಾಯ್ತಾ?

ತಾವು ಆ್ಯಕ್ಷನ್​-ಕಟ್​ ಹೇಳಿದ ಸಿನಿಮಾ 900 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ್ದರಿಂದ ಇವರು ತಿರುಮಲ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವರಿಗೆ ಮುಡಿ ನೀಡಿದ್ದರಿಂದ ಇವರ ಗೆಟಪ್​ ಬದಲಾಗಿದೆ. ತಕ್ಷಣ ನೋಡಿದರೆ ಗುರುತು ಸಿಗುವುದು ಕಷ್ಟ. ಆದರೂ ಇವರನ್ನು ಗುರುತಿಸಿದ ಅಭಿಮಾನಿಗಳು ಫೋಟೋ ತೆಗೆಸಿಕೊಂಡಿದ್ದಾರೆ. ಅಷ್ಟಕ್ಕೂ ಯಾರು ಇವರು?

900 ಕೋಟಿ ರೂಪಾಯಿ ಹಿಟ್​ ನೀಡಿದ ಈ ನಿರ್ದೇಶಕ ಯಾರು ಅಂತ ಗೊತ್ತಾಯ್ತಾ?
ನಿರ್ದೇಶಕನ ವೈರಲ್​ ಫೋಟೋ
ಮದನ್​ ಕುಮಾರ್​
|

Updated on: Mar 06, 2024 | 10:49 PM

Share

2023ರಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳಲ್ಲಿ ‘ಅನಿಮಲ್​’ ಚಿತ್ರ (Animal Movie) ಕೂಡ ಇದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಹಾಗೂ ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದರು. ವಿಮರ್ಶೆಯ ದೃಷ್ಟಿಯಿಂದ ಮಿಶ್ರ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿತು. ವಿಶ್ವಾದ್ಯಂತ ಈ ಚಿತ್ರಕ್ಕೆ ಆದ ಕಲೆಕ್ಷನ್​ ಬರೋಬ್ಬರಿ 900 ಕೋಟಿ ರೂಪಾಯಿಗಿಂತಲೂ ಅಧಿಕ. ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈಗ ಅವರ ಹೊಸ ಫೋಟೋ ವೈರಲ್​ ಆಗಿದೆ. ಅದರಲ್ಲಿ ಅವರ ಗೆಟಪ್​ ಸಂಪೂರ್ಣ ಬದಲಾಗಿದೆ.

‘ಅನಿಮಲ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದರಿಂದ ಸಂದೀಪ್​ ರೆಡ್ಡಿ ವಂಗಾ ಅವರಿಗೆ ಖುಷಿ ಆಗಿದೆ. ಇಷ್ಟು ದಿನಗಳ ಕಾಲ ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುವುದರಲ್ಲಿ ಅವರು ಬ್ಯುಸಿ ಆಗಿದ್ದರು. ಈಗ ಸಮಯ ಮಾಡಿಕೊಂಡು ಆಂಧ್ರದ ತಿರುಮಲ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮುಡಿ ಕೊಟ್ಟಿದ್ದಾರೆ. ಇಷ್ಟು ದಿನ ಉದ್ದ ಕೂದಲು ಬಿಟ್ಟುಕೊಂಡು ಕಾಣಿಸಿಕೊಳ್ಳುತ್ತಿದ್ದ ಅವರನ್ನು ಈಗ ಬೋಳು ತಲೆಯ ಗೆಟಪ್​ನಲ್ಲಿ ನೋಡಿದರೆ ಒಮ್ಮೆಲೆ ಗುರುತು ಹಿಡಿಯುವುದು ಕಷ್ಟ.

ಇದನ್ನೂ ಓದಿ: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೆ: ‘ಅನಿಮಲ್’ ಸಿನಿಮಾ ವಿರುದ್ಧ ಸಿಡಿದೆದ್ದ ಖುಷ್ಬು

ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಕಾಣಿಸಿಕೊಂಡ ಸಂದೀಪ್​ ರೆಡ್ಡಿ ವಂಗಾ ಅವರನ್ನು ನೋಡಿ ಅಲ್ಲಿದ್ದ ಕೆಲವರು ಮಾತನಾಡಿಸಿದ್ದಾರೆ. ‘ಸಾಮಾನ್ಯವಾಗಿ ನಾನು ಪ್ರತಿವರ್ಷ ಇಲ್ಲಿಗೆ ಬರುತ್ತೇನೆ. ಆದರೆ ಈ ನಡುವೆ ಸ್ವಲ್ಪ ಗ್ಯಾಪ್​ ಆಗಿತ್ತು’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ. ನಿಮ್ಮ ಮುಂದಿನ ಸಿನಿಮಾ ಯಾವುದು ಎಂದು ಕೇಳಿದಕ್ಕೆ ‘ಪ್ರಭಾಸ್​ ಜೊತೆಗೆ ಸ್ಪಿರಿಟ್​ ಚಿತ್ರದ ಕೆಲಸ ಈಗಾಗಲೇ ಶುರುವಾಗಿದೆ’ ಎಂದು ಸಂದೀಪ್​ ಉತ್ತರಿಸಿದ್ದಾರೆ.

ಸಂದೀಪ್​ ರೆಡ್ಡಿ ವಂಗಾ ವೈರಲ್​ ವಿಡಿಯೋ:

ಸಂದೀಪ್​ ರೆಡ್ಡಿ ವಂಗಾ ಅವರನ್ನು ನೋಡಿದ ಕೆಲವು ಅಭಿಮಾನಿಗಳು ಫೋಟೋ ತೆಗೆಸಿಕೊಂಡಿದ್ದಾರೆ. ಅವರ ಮುಂದಿನ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಮನೆ ಮಾಡಿದೆ. ಸಂದೀಪ್​ ನಿರ್ದೇಶನ ಮಾಡುವ ಸಿನಿಮಾಗಳು ವಿವಾದ ಸೃಷ್ಟಿ ಮಾಡುತ್ತವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’, ‘ಅನಿಮಲ್​’ ಸಿನಿಮಾಗಳನ್ನು ಕೆಲವರು ಕಟುವಾಗಿ ಟೀಕಿಸಿದ್ದಾರೆ. ಹಲವು ಸೆಲೆಬ್ರಿಟಿಗಳು ಕೂಡ ಈ ಸಿನಿಮಾದ ವಿರುದ್ಧ ಮಾತನಾಡಿದ್ದಾರೆ. ಅಂಥ ಟೀಕೆಗಳ ಬಗ್ಗೆ ಸಂದೀಪ್​ ಅವರು ತಲೆ ಕೆಡಿಸಿಕೊಂಡಿಲ್ಲ. ಅವರ ಮುಂದಿನ ಸಿನಿಮಾ ಹೇಗಿರಲಿದೆ ಎಂದು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ‘ಸ್ಪಿರಿಟ್​’ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಅವರು ಕೈ ಜೋಡಿಸಿರುವುದರಿಂದ ನಿರೀಕ್ಷೆ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ