AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ

ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಅನೇಕ ನಿರ್ದೇಶಕರ ಆಸೆ ಆಗಿರುತ್ತದೆ. ಸಂದೀಪ್​ ರೆಡ್ಡಿ ವಂಗ ಕೂಡ ಅಂತಹ ಆಸೆ ಇಟ್ಟುಕೊಂಡಿದ್ದಾರೆ. ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾದಿಂದ ಬಾಲಿವುಡ್​ನಲ್ಲಿ ಸಂದೀಪ್​ ಅವರು ಬಹುಬೇಡಿಕೆಯ ಡೈರೆಕ್ಟರ್ ಆಗಿ ಹೆಸರು ಮಾಡಿದ್ದಾರೆ. ಟೀಕೆಗಳ ನಡುವೆಯೂ ಅವರು ಸಖತ್​ ಫೇಮಸ್​ ಆಗಿದ್ದಾರೆ.

ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ
ಸಂದೀಪ್​ ರೆಡ್ಡಿ ವಂಗ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Feb 06, 2024 | 2:57 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಕಂಡರೆ ಕೋಟ್ಯಂತರ ಮಂದಿಗೆ ಇಷ್ಟ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಶಾರುಖ್​ ಖಾನ್​ಗೆ ಫ್ಯಾನ್ಸ್​ ಆಗಿದ್ದಾರೆ. ಅಂಥ ಅಪ್ಪಟ ಅಭಿಮಾನಿಗಳಲ್ಲಿ ‘ಅನಿಮಲ್​’ ಸಿನಿಮಾದ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಕೂಡ ಇದ್ದಾರೆ. ಸದ್ಯಕ್ಕೆ ಸಂದೀಪ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ಸೆಲೆಬ್ರಿಟಿಗಳು ಕಾದಿದ್ದಾರೆ. ಅದೇ ರೀತಿ, ಸಂದೀಪ್​ ಅವರಿಗೂ ಒಂದಷ್ಟು ಸೆಲೆಬ್ರಿಟಿಗಳ ಜೊತೆ ಸಿನಿಮಾ ಮಾಡಬೇಕು ಎಂಬ ಆಸೆ ಆಗಿದೆ. ಶಾರುಖ್​ ಖಾನ್​ (SRK) ಬಗ್ಗೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ಅವರು ಈಗ ವಿವರಿಸಿದ್ದಾರೆ.

ಶಾರುಖ್​ ಖಾನ್​ ಅವರನ್ನು ಸಂದೀಪ್​ ರೆಡ್ಡಿ ವಂಗ ಮೊದಲು ಭೇಟಿ ಮಾಡಿದ್ದು 2023ರಲ್ಲಿ. ಗಣೇಶ ಹಬ್ಬದ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರನ್ನು ಭೇಟಿಯಾಗುವ ಅವಕಾಶ ಸಂದೀಪ್​ಗೆ ಸಿಕ್ಕಿತ್ತು. ಆ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ. ‘ನಿಮ್ಮನ್ನು ನೋಡಿದ್ದಕ್ಕೆ ಖುಷಿಯಾಗುತ್ತಿದೆ ಸರ್​. ಇಷ್ಟು ದಿನ ಪರದೆಯಲ್ಲಿ ನೋಡಿದ್ದೆ. ಈಗ ಇದೇ ಮೊದಲ ಬಾರಿಗೆ ನೇರವಾಗಿ ನೋಡುತ್ತಿದ್ದೇನೆ’ ಎಂದು ಶಾರುಖ್​ ಎದುರು ಸಂದೀಪ್​ ರೆಡ್ಡಿ ವಂಗ ಖುಷಿ ತೋಡಿಕೊಂಡಿದ್ದರು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ನೋಡಿ 40 ನಿಮಿಷ ಮಾತಾಡಿದ್ದ ರಣವೀರ್​ ಸಿಂಗ್​; ನಿರ್ದೇಶಕರಿಗೆ ಅಚ್ಚರಿ

‘ಅವಕಾಶ ಸಿಕ್ಕರೆ ಖಂಡಿತವಾಗಿಯೂ ಶಾರುಖ್​ ಖಾನ್​ ಸರ್​ ಜೊತೆ ಕೆಲಸ ಮಾಡುತ್ತೇನೆ. ಪ್ರತಿ ಹೀರೋಗೋ ಕೆಲವೊಂದು ಐಡಿಯಾ ಇರುತ್ತದೆ. ಹಿಂದಿ ಚಿತ್ರರಂಗದಲ್ಲಿ ಶಾರುಖ್​ ಖಾನ್​, ರಣವೀರ್​ ಸಿಂಗ್​ ಜೊತೆ ಸಿನಿಮಾ ಮಾಡಲು ಬಯಸುತ್ತೇನೆ’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗ. ‘ಅನಿಮಲ್​​’ ಸಿನಿಮಾ ಬಿಡುಗಡೆ ಆಗುವುದಕ್ಕೂ ಮೊದಲು ಆ ಚಿತ್ರದ ಟೀಸರ್​ ಅನ್ನು ಸಂದೀಪ್​ ಅವರು ಶಾರುಖ್​ ಖಾನ್​ಗೆ ತೋರಿಸಿದ್ದರು.

ಇದನ್ನೂ ಓದಿ: ‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ಕಳೆದ ವರ್ಷ ಶಾರುಖ್​ ಖಾನ್​ ನಟನೆಯ 3 ಸಿನಿಮಾಗಳು ಬಿಡುಗಡೆಯಾಗಿ ಗಮನ ಸೆಳೆದವು. ‘ಪಠಾಣ್​’, ‘ಜವಾನ್​’, ‘ಡಂಕಿ’ ಸಿನಿಮಾಗಳ ಮೂಲಕ ಅವರು ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿದರು. ಅದೇ ರೀತಿ, ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರದ ಮೂಲಕ ಭರ್ಜರಿ ಗೆಲುವು ಕಂಡರು. ಒಂದು ವೇಳೆ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಿದರೆ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಶಾರುಖ್​ ಖಾನ್​ ಅವರು ಹೊಸ ಸಿನಿಮಾ ಘೋಷಿಸುವುದು ಬಾಕಿ ಇದೆ. ಸಂದೀಪ್​ ಅವರು ಈಗಾಗಲೇ ಪ್ರಭಾಸ್​, ಮಹೇಶ್​ ಬಾಬು, ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ