AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ

ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಅನೇಕ ನಿರ್ದೇಶಕರ ಆಸೆ ಆಗಿರುತ್ತದೆ. ಸಂದೀಪ್​ ರೆಡ್ಡಿ ವಂಗ ಕೂಡ ಅಂತಹ ಆಸೆ ಇಟ್ಟುಕೊಂಡಿದ್ದಾರೆ. ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾದಿಂದ ಬಾಲಿವುಡ್​ನಲ್ಲಿ ಸಂದೀಪ್​ ಅವರು ಬಹುಬೇಡಿಕೆಯ ಡೈರೆಕ್ಟರ್ ಆಗಿ ಹೆಸರು ಮಾಡಿದ್ದಾರೆ. ಟೀಕೆಗಳ ನಡುವೆಯೂ ಅವರು ಸಖತ್​ ಫೇಮಸ್​ ಆಗಿದ್ದಾರೆ.

ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ
ಸಂದೀಪ್​ ರೆಡ್ಡಿ ವಂಗ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Feb 06, 2024 | 2:57 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಕಂಡರೆ ಕೋಟ್ಯಂತರ ಮಂದಿಗೆ ಇಷ್ಟ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಶಾರುಖ್​ ಖಾನ್​ಗೆ ಫ್ಯಾನ್ಸ್​ ಆಗಿದ್ದಾರೆ. ಅಂಥ ಅಪ್ಪಟ ಅಭಿಮಾನಿಗಳಲ್ಲಿ ‘ಅನಿಮಲ್​’ ಸಿನಿಮಾದ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಕೂಡ ಇದ್ದಾರೆ. ಸದ್ಯಕ್ಕೆ ಸಂದೀಪ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ಸೆಲೆಬ್ರಿಟಿಗಳು ಕಾದಿದ್ದಾರೆ. ಅದೇ ರೀತಿ, ಸಂದೀಪ್​ ಅವರಿಗೂ ಒಂದಷ್ಟು ಸೆಲೆಬ್ರಿಟಿಗಳ ಜೊತೆ ಸಿನಿಮಾ ಮಾಡಬೇಕು ಎಂಬ ಆಸೆ ಆಗಿದೆ. ಶಾರುಖ್​ ಖಾನ್​ (SRK) ಬಗ್ಗೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ಅವರು ಈಗ ವಿವರಿಸಿದ್ದಾರೆ.

ಶಾರುಖ್​ ಖಾನ್​ ಅವರನ್ನು ಸಂದೀಪ್​ ರೆಡ್ಡಿ ವಂಗ ಮೊದಲು ಭೇಟಿ ಮಾಡಿದ್ದು 2023ರಲ್ಲಿ. ಗಣೇಶ ಹಬ್ಬದ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರನ್ನು ಭೇಟಿಯಾಗುವ ಅವಕಾಶ ಸಂದೀಪ್​ಗೆ ಸಿಕ್ಕಿತ್ತು. ಆ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ. ‘ನಿಮ್ಮನ್ನು ನೋಡಿದ್ದಕ್ಕೆ ಖುಷಿಯಾಗುತ್ತಿದೆ ಸರ್​. ಇಷ್ಟು ದಿನ ಪರದೆಯಲ್ಲಿ ನೋಡಿದ್ದೆ. ಈಗ ಇದೇ ಮೊದಲ ಬಾರಿಗೆ ನೇರವಾಗಿ ನೋಡುತ್ತಿದ್ದೇನೆ’ ಎಂದು ಶಾರುಖ್​ ಎದುರು ಸಂದೀಪ್​ ರೆಡ್ಡಿ ವಂಗ ಖುಷಿ ತೋಡಿಕೊಂಡಿದ್ದರು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ನೋಡಿ 40 ನಿಮಿಷ ಮಾತಾಡಿದ್ದ ರಣವೀರ್​ ಸಿಂಗ್​; ನಿರ್ದೇಶಕರಿಗೆ ಅಚ್ಚರಿ

‘ಅವಕಾಶ ಸಿಕ್ಕರೆ ಖಂಡಿತವಾಗಿಯೂ ಶಾರುಖ್​ ಖಾನ್​ ಸರ್​ ಜೊತೆ ಕೆಲಸ ಮಾಡುತ್ತೇನೆ. ಪ್ರತಿ ಹೀರೋಗೋ ಕೆಲವೊಂದು ಐಡಿಯಾ ಇರುತ್ತದೆ. ಹಿಂದಿ ಚಿತ್ರರಂಗದಲ್ಲಿ ಶಾರುಖ್​ ಖಾನ್​, ರಣವೀರ್​ ಸಿಂಗ್​ ಜೊತೆ ಸಿನಿಮಾ ಮಾಡಲು ಬಯಸುತ್ತೇನೆ’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗ. ‘ಅನಿಮಲ್​​’ ಸಿನಿಮಾ ಬಿಡುಗಡೆ ಆಗುವುದಕ್ಕೂ ಮೊದಲು ಆ ಚಿತ್ರದ ಟೀಸರ್​ ಅನ್ನು ಸಂದೀಪ್​ ಅವರು ಶಾರುಖ್​ ಖಾನ್​ಗೆ ತೋರಿಸಿದ್ದರು.

ಇದನ್ನೂ ಓದಿ: ‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ಕಳೆದ ವರ್ಷ ಶಾರುಖ್​ ಖಾನ್​ ನಟನೆಯ 3 ಸಿನಿಮಾಗಳು ಬಿಡುಗಡೆಯಾಗಿ ಗಮನ ಸೆಳೆದವು. ‘ಪಠಾಣ್​’, ‘ಜವಾನ್​’, ‘ಡಂಕಿ’ ಸಿನಿಮಾಗಳ ಮೂಲಕ ಅವರು ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿದರು. ಅದೇ ರೀತಿ, ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರದ ಮೂಲಕ ಭರ್ಜರಿ ಗೆಲುವು ಕಂಡರು. ಒಂದು ವೇಳೆ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಿದರೆ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಶಾರುಖ್​ ಖಾನ್​ ಅವರು ಹೊಸ ಸಿನಿಮಾ ಘೋಷಿಸುವುದು ಬಾಕಿ ಇದೆ. ಸಂದೀಪ್​ ಅವರು ಈಗಾಗಲೇ ಪ್ರಭಾಸ್​, ಮಹೇಶ್​ ಬಾಬು, ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ