ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ

ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಅನೇಕ ನಿರ್ದೇಶಕರ ಆಸೆ ಆಗಿರುತ್ತದೆ. ಸಂದೀಪ್​ ರೆಡ್ಡಿ ವಂಗ ಕೂಡ ಅಂತಹ ಆಸೆ ಇಟ್ಟುಕೊಂಡಿದ್ದಾರೆ. ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾದಿಂದ ಬಾಲಿವುಡ್​ನಲ್ಲಿ ಸಂದೀಪ್​ ಅವರು ಬಹುಬೇಡಿಕೆಯ ಡೈರೆಕ್ಟರ್ ಆಗಿ ಹೆಸರು ಮಾಡಿದ್ದಾರೆ. ಟೀಕೆಗಳ ನಡುವೆಯೂ ಅವರು ಸಖತ್​ ಫೇಮಸ್​ ಆಗಿದ್ದಾರೆ.

ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ
ಸಂದೀಪ್​ ರೆಡ್ಡಿ ವಂಗ, ಶಾರುಖ್​ ಖಾನ್​
Follow us
|

Updated on: Feb 06, 2024 | 2:57 PM

ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಕಂಡರೆ ಕೋಟ್ಯಂತರ ಮಂದಿಗೆ ಇಷ್ಟ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಶಾರುಖ್​ ಖಾನ್​ಗೆ ಫ್ಯಾನ್ಸ್​ ಆಗಿದ್ದಾರೆ. ಅಂಥ ಅಪ್ಪಟ ಅಭಿಮಾನಿಗಳಲ್ಲಿ ‘ಅನಿಮಲ್​’ ಸಿನಿಮಾದ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಕೂಡ ಇದ್ದಾರೆ. ಸದ್ಯಕ್ಕೆ ಸಂದೀಪ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಲು ಅನೇಕ ಸೆಲೆಬ್ರಿಟಿಗಳು ಕಾದಿದ್ದಾರೆ. ಅದೇ ರೀತಿ, ಸಂದೀಪ್​ ಅವರಿಗೂ ಒಂದಷ್ಟು ಸೆಲೆಬ್ರಿಟಿಗಳ ಜೊತೆ ಸಿನಿಮಾ ಮಾಡಬೇಕು ಎಂಬ ಆಸೆ ಆಗಿದೆ. ಶಾರುಖ್​ ಖಾನ್​ (SRK) ಬಗ್ಗೆ ತಮಗೆ ಇರುವ ಅಭಿಮಾನ ಎಂಥದ್ದು ಎಂಬುದನ್ನು ಅವರು ಈಗ ವಿವರಿಸಿದ್ದಾರೆ.

ಶಾರುಖ್​ ಖಾನ್​ ಅವರನ್ನು ಸಂದೀಪ್​ ರೆಡ್ಡಿ ವಂಗ ಮೊದಲು ಭೇಟಿ ಮಾಡಿದ್ದು 2023ರಲ್ಲಿ. ಗಣೇಶ ಹಬ್ಬದ ಸಂದರ್ಭದಲ್ಲಿ ಶಾರುಖ್​ ಖಾನ್​ ಅವರನ್ನು ಭೇಟಿಯಾಗುವ ಅವಕಾಶ ಸಂದೀಪ್​ಗೆ ಸಿಕ್ಕಿತ್ತು. ಆ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ. ‘ನಿಮ್ಮನ್ನು ನೋಡಿದ್ದಕ್ಕೆ ಖುಷಿಯಾಗುತ್ತಿದೆ ಸರ್​. ಇಷ್ಟು ದಿನ ಪರದೆಯಲ್ಲಿ ನೋಡಿದ್ದೆ. ಈಗ ಇದೇ ಮೊದಲ ಬಾರಿಗೆ ನೇರವಾಗಿ ನೋಡುತ್ತಿದ್ದೇನೆ’ ಎಂದು ಶಾರುಖ್​ ಎದುರು ಸಂದೀಪ್​ ರೆಡ್ಡಿ ವಂಗ ಖುಷಿ ತೋಡಿಕೊಂಡಿದ್ದರು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ನೋಡಿ 40 ನಿಮಿಷ ಮಾತಾಡಿದ್ದ ರಣವೀರ್​ ಸಿಂಗ್​; ನಿರ್ದೇಶಕರಿಗೆ ಅಚ್ಚರಿ

‘ಅವಕಾಶ ಸಿಕ್ಕರೆ ಖಂಡಿತವಾಗಿಯೂ ಶಾರುಖ್​ ಖಾನ್​ ಸರ್​ ಜೊತೆ ಕೆಲಸ ಮಾಡುತ್ತೇನೆ. ಪ್ರತಿ ಹೀರೋಗೋ ಕೆಲವೊಂದು ಐಡಿಯಾ ಇರುತ್ತದೆ. ಹಿಂದಿ ಚಿತ್ರರಂಗದಲ್ಲಿ ಶಾರುಖ್​ ಖಾನ್​, ರಣವೀರ್​ ಸಿಂಗ್​ ಜೊತೆ ಸಿನಿಮಾ ಮಾಡಲು ಬಯಸುತ್ತೇನೆ’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗ. ‘ಅನಿಮಲ್​​’ ಸಿನಿಮಾ ಬಿಡುಗಡೆ ಆಗುವುದಕ್ಕೂ ಮೊದಲು ಆ ಚಿತ್ರದ ಟೀಸರ್​ ಅನ್ನು ಸಂದೀಪ್​ ಅವರು ಶಾರುಖ್​ ಖಾನ್​ಗೆ ತೋರಿಸಿದ್ದರು.

ಇದನ್ನೂ ಓದಿ: ‘ಅನಿಮಲ್​’ ನಿರ್ದೇಶಕನಿಂದ ಬಂದ ಆಫರ್​ ತಿರಸ್ಕರಿಸಿದ ಕಂಗನಾ ರಣಾವತ್​

ಕಳೆದ ವರ್ಷ ಶಾರುಖ್​ ಖಾನ್​ ನಟನೆಯ 3 ಸಿನಿಮಾಗಳು ಬಿಡುಗಡೆಯಾಗಿ ಗಮನ ಸೆಳೆದವು. ‘ಪಠಾಣ್​’, ‘ಜವಾನ್​’, ‘ಡಂಕಿ’ ಸಿನಿಮಾಗಳ ಮೂಲಕ ಅವರು ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿದರು. ಅದೇ ರೀತಿ, ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರದ ಮೂಲಕ ಭರ್ಜರಿ ಗೆಲುವು ಕಂಡರು. ಒಂದು ವೇಳೆ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಸೆಟ್ಟೇರಿದರೆ ಅಭಿಮಾನಿಗಳಿಗೆ ಹಬ್ಬ ಆಗಲಿದೆ. ಶಾರುಖ್​ ಖಾನ್​ ಅವರು ಹೊಸ ಸಿನಿಮಾ ಘೋಷಿಸುವುದು ಬಾಕಿ ಇದೆ. ಸಂದೀಪ್​ ಅವರು ಈಗಾಗಲೇ ಪ್ರಭಾಸ್​, ಮಹೇಶ್​ ಬಾಬು, ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ