AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ‘ಅನಿಮಲ್​’ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ; ರಗಡ್​ ಅವತಾರದಲ್ಲಿ ರಣಬೀರ್​ ಕಪೂರ್​

Animal Movie First Look: ‘ಅರ್ಜುನ್​ ರೆಡ್ಡಿ’ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆಗಸ್ಟ್​ 11ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

Ranbir Kapoor: ‘ಅನಿಮಲ್​’ ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ; ರಗಡ್​ ಅವತಾರದಲ್ಲಿ ರಣಬೀರ್​ ಕಪೂರ್​
‘ಅನಿಮಲ್’ ಚಿತ್ರದ ಫಸ್ಟ್ ಲುಕ್
TV9 Web
| Edited By: |

Updated on:Jan 01, 2023 | 11:31 AM

Share

ಖ್ಯಾತ ನಟ ರಣಬೀರ್​ ಕಪೂರ್​ (Ranbir Kapoor) ಅವರು 2022ರಲ್ಲಿ ಭರ್ಜರಿ ಗೆಲುವು ಕಂಡರು. ಅವರು ನಟಿಸಿದ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ 2023ರ ಹೊಸ ವರ್ಷವನ್ನು ಕೂಡ ಹೊಸ ಭರವಸೆಯೊಂದಿಗೆ ಅವರು ಶುರು ಮಾಡಿದ್ದಾರೆ. ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾದ (Animal Movie) ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಪೋಸ್ಟರ್​ನಲ್ಲಿ ಅವರು ಸಖತ್​ ರಗಡ್​ ಆಗಿ ಕಾಣಿಸಿಕೊಂಡಿದ್ದಾರೆ. ಹೊಸ ವರ್ಷದ ಪ್ರಯುಕ್ತ ಡಿ.31ರ ಮಧ್ಯರಾತ್ರಿ ಈ ಫಸ್ಟ್​ ಲುಕ್​ ಅನಾವರಣ ಮಾಡಲಾಗಿದೆ. ರಣಬೀರ್​ ಕಪೂರ್​ ಅಭಿಮಾನಿಗಳ ವಲಯದಲ್ಲಿ ‘ಅನಿಮಲ್​’ ಪೋಸ್ಟರ್​ ವೈರಲ್​ ಆಗಿದೆ. ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ.

ಹೇಗಿದೆ ‘ಅನಿಮಲ್​’ ಫಸ್ಟ್​ ಲುಕ್​ ಪೋಸ್ಟರ್​?

ರಣಬೀರ್​ ಕಪೂರ್​ ಅವರು ಈವರೆಗೆ ರೊಮ್ಯಾಂಟಿಕ್​ ಹೀರೋ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಆದರೆ ‘ಅನಿಮಲ್​’ ಸಿನಿಮಾದಲ್ಲಿ ಅವರು ಸಂಪೂರ್ಣ ರಗಡ್​ ಗೆಟಪ್​ನಲ್ಲಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ ಎಂಬ ಸುಳಿವು ಈ ಪೋಸ್ಟರ್​ ಮೂಲಕ ಸಿಕ್ಕಿದೆ. ಕೈಯಲ್ಲಿ ಮಾರಕಾಸ್ತ್ರ ಹಿಡಿದು, ರಕ್ತ ಮೆತ್ತಿದ ಕೈಗಳಿಂದ ಸಿಗರೇಟ್​ ಹಚ್ಚಿಕೊಳ್ಳುತ್ತಿರುವ ರೀತಿಯಲ್ಲಿ ಅವರು ಪೋಸ್​ ನೀಡಿದ್ದಾರೆ. ಈ ಚಿತ್ರದಲ್ಲಿ ಸಿಕ್ಕಾಪಟ್ಟೆ ಆ್ಯಕ್ಷನ್​ ಸನ್ನಿವೇಶಗಳು ಇರಲಿವೆ ಎಂಬುದಕ್ಕೆ ಈ ಪೋಸ್ಟರ್​ ಸುಳಿವು ನೀಡುತ್ತಿದೆ.

ಇದನ್ನೂ ಓದಿ
Image
Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

ಇದನ್ನೂ ಓದಿ: Ranbir Kapoor: ‘ಬ್ರಹ್ಮಾಸ್ತ್ರ ನೋಡಿ ಅಂತ ನಾನು ಎಲ್ಲರ ಮನೆಗೆ ಹೋಗಿ ಬೇಡಿಕೊಳ್ಳಬೇಕಾ?’: ಸಿಟ್ಟಾದ ರಣಬೀರ್​ ಕಪೂರ್​

‘ಅನಿಮಲ್​’ ಚಿತ್ರಕ್ಕೆ ಸಂದೀಪ್​ ರೆಡ್ಡಿ ವಂಗ ನಿರ್ದೇಶನ:

‘ಅರ್ಜುನ್​ ರೆಡ್ಡಿ’ ಸಿನಿಮಾ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಕಥಾನಾಯಕನನ್ನು ರೊಮ್ಯಾಂಟಿಕ್​ ಆಗಿಯೂ, ಸಖತ್​ ರಗಡ್​ ಆಗಿಯೂ ತೋರಿಸುವಲ್ಲಿ ಅವರು ಪಳಗಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ರಣಬೀರ್ ಕಪೂರ್​ ಅವರ ಲುಕ್​ ಹೇಗಿರಬಹುದು ಎಂಬ ಕೌತುಕ ಮನೆ ಮಾಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಇದನ್ನೂ ಓದಿ: 10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ

ಆಗಸ್ಟ್​ 11ರಂದು ‘ಅನಿಮಲ್​’ ರಿಲೀಸ್​ ಆಗಲಿದೆ. ನಟಿ ರಶ್ಮಿಕಾ ಮಂದಣ್ಣ ಅವರ ಪಾಲಿಗೆ ಈ ಚಿತ್ರ ಬಹಳ ಮುಖ್ಯವಾಗಿರಲಿದೆ. ಹಿಂದಿ ಚಿತ್ರರಂಗದಲ್ಲಿ ಅವರು ಭದ್ರವಾಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಸ್ಟಾರ್​ ನಟರ ಜೊತೆ ನಟಿಸಿದ ಅವರಿಗೆ ಬಾಲಿವುಡ್​ನಲ್ಲೂ ಅಂಥ ಚಾನ್ಸ್​ ಸಿಗುತ್ತಿದೆ. ಆ ಪೈಕಿ ‘ಅನಿಮಲ್​’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ.

ಇದು ಪ್ಯಾನ್​ ಇಂಡಿಯಾ ಸಿನಿಮಾಗಳ ಜಮಾನ. ‘ಅನಿಮಲ್​’ ಚಿತ್ರ ಕೂಡ ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಕ್ರೈಂ ಡ್ರಾಮಾ ಪ್ರಕಾರದ ಈ ಚಿತ್ರದಲ್ಲಿ ಅನಿಲ್​ ಕಪೂರ್​ ಮತ್ತು ಬಾಬಿ ಡಿಯೋಲ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:31 am, Sun, 1 January 23

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ