AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ‘ರಣಬೀರ್​ ಕಪೂರ್​ ಅವರೇ ಭಾರತದ ಬೆಸ್ಟ್​ ನಟ’: ‘ಅನಿಮಲ್​’ ಹೀರೋಗೆ ಮಹೇಶ್​ ಬಾಬು ಮೆಚ್ಚುಗೆ

ಹೈದರಾಬಾದ್​ನಲ್ಲಿ ಇತ್ತೀಚೆಗೆ ನಡೆದ ‘ಅನಿಮಲ್​’ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಲಕ್ಷಾಂತರ ಜನರು ಭಾಗಿ ಆಗಿದ್ದರು. ಟಾಲಿವುಡ್​ನ ಫೇಮಸ್​ ಸೆಲೆಬ್ರಿಟಿಗಳಾದ ಎಸ್​.ಎಸ್​. ರಾಜಮೌಳಿ, ಮಹೇಶ್​ ಬಾಬು ಮುಂತಾದವರು ಬಂದು ಚಿತ್ರತಂಡದ ಬೆನ್ನು ತಟ್ಟಿದರು. ಈ ಸಂದರ್ಭದ ವಿಡಿಯೋಗಳು ವೈರಲ್​ ಆಗಿವೆ.

Ranbir Kapoor: ‘ರಣಬೀರ್​ ಕಪೂರ್​ ಅವರೇ ಭಾರತದ ಬೆಸ್ಟ್​ ನಟ’: ‘ಅನಿಮಲ್​’ ಹೀರೋಗೆ ಮಹೇಶ್​ ಬಾಬು ಮೆಚ್ಚುಗೆ
ಮಹೇಶ್​ ಬಾಬು, ರಣಬೀರ್ ಕಪೂರ್​
ಮದನ್​ ಕುಮಾರ್​
|

Updated on: Nov 28, 2023 | 11:53 AM

Share

ನಟ ರಣಬೀರ್​ ಕಪೂರ್​ ಅವರು ಅನಿಮಲ್​’ (Animal Movie) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಮಹೇಶ್​ ಬಾಬು ಕಡೆಯಿಂದ ಭರ್ಜರಿ ಮೆಚ್ಚುಗೆ ಸಿಕ್ಕಿದೆ. ‘ಇವರು ಭಾರತದ ಅತ್ಯುತ್ತಮ ನಟ’ ಎಂದು ಮಹೇಶ್​ ಬಾಬು (Mahesh Babu) ಹೊಗಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಈ ಪರಿ ಪ್ರಶಂಸೆ ಸ್ವೀಕರಿಸಿದ ರಣಬೀರ್​ ಕಪೂರ್​ (Ranbir Kapoor) ಅವರು ನಗು ಚೆಲ್ಲಿದ್ದಾರೆ. ಸೌತ್​ ಸೂಪರ್​ ಸ್ಟಾರ್​ ನಟನಿಂದ ರಣಬೀರ್​ ಕಪೂರ್​ಗೆ ಇಂಥ ಹೊಗಳಿಕೆ ಸಿಕ್ಕಿರುವುದಕ್ಕೆ ಬಾಲಿವುಡ್​ ಸಿನಿಪ್ರಿಯರು ಖುಷಿ ಆಗಿದ್ದಾರೆ. ಡಿಸೆಂಬರ್​ 1ರಂದು ‘ಅನಿಮಲ್​’ ಸಿನಿಮಾ ಬಿಡುಗಡೆ ಆಗಲಿದೆ.

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಅವರು ಈ ಹಿಂದೆ ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದರು. ಈಗ ‘ಅನಿಮಲ್​’ ಚಿತ್ರದ ಮೂಲಕ ಮತ್ತೊಂದು ಯಶಸ್ಸು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕಾಗಿ ದೇಶಾದ್ಯಂತ ಪ್ರಚಾರ ನೀಡಲಾಗುತ್ತಿದೆ. ಇತ್ತೀಚೆಗೆ ಹೈದರಾಬಾದ್​ನಲ್ಲಿ ಈ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಿತು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಎಷ್ಟು?

ಸಂದೀಪ್​ ರೆಡ್ಡಿ ವಂಗಾ ಅವರು ಮೂಲತಃ ತೆಲುಗು ಚಿತ್ರರಂಗದವರು. ‘ಅನಿಮಲ್​’ ಸಿನಿಮಾದ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಟಾಲಿವುಡ್​ನಲ್ಲಿ ಭಾರಿ ಜನಪ್ರಿಯತೆ ಪಡೆದಿದ್ದಾರೆ. ಹಾಗಾಗಿ ಹೈದರಾಬಾದ್​ನಲ್ಲಿ ಈ ಸಿನಿಮಾಗೆ ಹೆಚ್ಚು ಪ್ರಚಾರ ನೀಡಲಾಗುತ್ತಿದೆ. ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಮಹೇಶ್​ ಬಾಬು, ಎಸ್​.ಎಸ್​. ರಾಜಮೌಳಿ ಮುಂತಾದ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ರಣಬೀರ್​ ಕಪೂರ್​ ಅವರ ಅಭಿನಯದ ಬಗ್ಗೆ ಮಹೇಶ್​ ಬಾಬು ಮೆಚ್ಚುಗೆಯ ಮಾತುಗಳನ್ನು ಆಡಿದರು.

‘ಈ ಮೊದಲು ನಾನು ರಣಬೀರ್​ ಕಪೂರ್​ ಅವರನ್ನು ಭೇಟಿ ಆದಾಗ ಕೂಡ ಈ ಮಾತನ್ನು ಹೇಳಿದ್ದೆ. ಆದರೆ ಅದನ್ನು ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇಂದು ಈ ವೇದಿಕೆಯಲ್ಲಿ ಮತ್ತೆ ಹೇಳುತ್ತಿದ್ದೇನೆ. ನಾನು ರಣಬೀರ್​ ಕಪೂರ್ ಅವರ ದೊಡ್ಡ ಅಭಿಮಾನಿ. ನನ್ನ ಪ್ರಕಾರ, ಅವರೇ ಭಾರತದ ಬೆಸ್ಟ್​ ಆ್ಯಕ್ಟರ್​’ ಎಂದು ಮಹೇಶ್​ ಬಾಬು ಹೇಳಿದ್ದಾರೆ. ಈ ಮಾತು ಕೇಳಿ ಅಭಿಮಾನಿಗಳೆಲ್ಲರೂ ಜೈಕಾರ ಹಾಕಿದ್ದಾರೆ. ‘ಅನಿಮಲ್​’ ಸಿನಿಮಾದಲ್ಲಿ ಬಾಬಿ ಡಿಯೋಲ್​, ಅನಿಲ್​ ಕಪೂರ್​ ಮುಂತಾದವರು ಕೂಡ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​