AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಹೊಸ ಪೋಸ್ಟರ್ ಬಿಡುಗಡೆ: ಖಡಕ್ ಲುಕ್​ನಲ್ಲಿ ಅನಿಲ್ ಕಪೂರ್

Ranbir Kapoor: ರಣ್​ಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ 'ಅನಿಮಲ್' ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಪೋಸ್ಟರ್​ನಲ್ಲಿ ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

'ಅನಿಮಲ್' ಹೊಸ ಪೋಸ್ಟರ್ ಬಿಡುಗಡೆ: ಖಡಕ್ ಲುಕ್​ನಲ್ಲಿ ಅನಿಲ್ ಕಪೂರ್
ಅನಿಮಲ್
Follow us
ಮಂಜುನಾಥ ಸಿ.
|

Updated on: Sep 21, 2023 | 10:38 PM

ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ (Bollywood) ನಿಧಾನಕ್ಕೆ ಅದರಿಂದ ಹೊರಗೆ ಬಂದಿದೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಕೋವಿಡ್ ಬಳಿಕ ಹಿಟ್​ ಸಿನಿಮಾಗಳಿಲ್ಲದೆ ಬಣಗುಟ್ಟಿದ್ದ ಬಾಲಿವುಡ್​ಗೆ ಕಳೆ ತುಂಬಿದರೆ, ‘ದೃಶ್ಯಂ’, ‘ಬ್ರಹ್ಮಾಸ್ತ್ರ’, ಇತ್ತೀಚೆಗಿನ ‘ಗದರ್ 2’ ಸಿನಿಮಾಗಳು ಗೆದ್ದು ನಿರ್ಮಾಪಕರಲ್ಲಿ ಆಶಾ ಭಾವ ಮೂಡಿಸಿದ್ದವು. ಬಳಿಕ ಬಂದ ‘ಜವಾನ್’ ಸಿನಿಮಾ ಸೂಪರ್-ಡೂಪರ್ ಹಿಟ್ ಆಗುವ ಮೂಲಕ ಬಾಲಿವುಡ್ ಮತ್ತೆ ಹಳಿಗೆ ಬರುವಂತೆ ಮಾಡಿದೆ. ಇದೀಗ ಬಾಲಿವುಡ್​ ಚಿತ್ರಕರ್ಮಿಗಳ ಕಣ್ಣು ಹಾಗೂ ಸಿನಿಮಾ ಪ್ರೇಮಿಗಳ ಕಣ್ಣು ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾದತ್ತ ನೆಟ್ಟಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಮೇಲೆ ಬಹಳ ದೊಡ್ಡ ನಿರೀಕ್ಷೆ ಇದೆ. ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ನಿರ್ದೇಶಕ ಸಂದೀಪ್ ವಂಗಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಪೋಸ್ಟರ್ ಒಂದು ಇದೀಗ ಬಿಡುಗಡೆ ಆಗಿದೆ. ಪೋಸ್ಟರ್​ನಲ್ಲಿ ನಾಯಕ ರಣ್​ಬೀರ್ ಕಪೂರ್ ಇಲ್ಲ ಬದಲಿಗೆ ಅನಿಲ್ ಕಪೂರ್ ಇದ್ದಾರೆ. ಗಾಯಾಳುವಾಗಿ ಕೋಪದಿಂದ ಯಾರನ್ನೋ ದಿಟ್ಟಿಸುತ್ತಿರುವ ಅನಿಲ್​ ಕಪೂರ್​ರ ಚಿತ್ರ ಖಡಕ್ ಆಗಿದೆ. ‘ಅನಿಮಲ್’ ಸಿನಿಮಾದಲ್ಲಿ ಅನಿಲ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರಾ ಎಂಬ ಅನುಮಾನವೂ ಪೋಸ್ಟರ್​ನಿಂದ ವ್ಯಕ್ತವಾಗುತ್ತಿದೆ.

‘ಅನಿಮಲ್’ ಸಿನಿಮಾ ನಿರ್ದೇಶನ ಮಾಡಿರುವ ಸಂದೀಪ್ ರೆಡ್ಡಿ ವಂಗಾ ಈ ಹಿಂದೆ ಸೂಪರ್ ಡೂಪರ್ ಹಿಟ್ ಸಿನಿಮಾ ‘ಅರ್ಜುನ್ ರೆಡ್ಡಿ’ ನಿರ್ದೇಶನ ಮಾಡಿದ್ದರು. ಅದಾದ ಬಳಿಕ ಅದೇ ಸಿನಿಮಾದ ಹಿಂದಿ ರೀಮೇಕ್ ‘ಕಬೀರ್’ ಅನ್ನು ನಿರ್ದೇಶನ ಮಾಡಿದ್ದಾರೆ. ‘ಅನಿಮಲ್’ ಅವರ ಮೂರನೇ ಸಿನಿಮಾ. ‘ಅನಿಮಲ್’ ಸಿನಿಮಾ ಹಿಂಸಾತ್ಮಕತೆ ಹೆಚ್ಚಿಗಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದರಲ್ಲಿ ರಣ್​ಬೀರ್ ಕಪೂರ್ ರಕ್ತ-ಸಿಕ್ತವಾಗಿರುವ ಕೊಡಲಿಯೊಂದನ್ನು ಬಗಲಲ್ಲಿ ಇರಿಸಿಕೊಂಡು ಸಿಗರೇಟು ಹೊತ್ತಿಸಿಕೊಳ್ಳುತ್ತಿರುವ ಚಿತ್ರವಿದೆ. ‘ಅನಿಮಲ್’ ಸಿನಿಮಾದ ಟೀಸರ್ ಇದೇ ತಿಂಗಳು 28ರಂದು ಬಿಡುಗಡೆ ಆಗಲಿದ್ದು, ಸಿನಿಮಾ ಡಿಸೆಂಬರ್ 1 ರಂದು ತೆರೆಗೆ ಬರಲಿದೆ.

ಇದನ್ನೂ ಓದಿ:Animal Release Date: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ರಣ್​ಬೀರ್ ಕಪೂರ್, ತಮ್ಮ ಲವರ್​ಬಾಯ್ ಇಮೇಜಿನಿಂದ ಹೊರಗೆ ಬಂದು ಮಾಸ್ ಸಿನಿಮಾಗಳತ್ತ ಗಮನ ಹರಿಸುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಅವರ ಮಾಸ್ ಇಮೇಜಿಗೆ ಬೂಸ್ಟ್ ನೀಡಲಿದೆ ಎನ್ನಲಾಗುತ್ತಿದೆ. ‘ಅನಿಮಲ್’ ಬಳಿಕ ರಣ್​ಬೀರ್ ಕಪೂರ್ ‘ಬ್ರಹ್ಮಾಸ್ತ್ರ 2’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ದಕ್ಷಿಣ ಭಾರತ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಸಂದೀಪ್ ರೆಡ್ಡಿ ವಂಗಾ, ನಿರ್ದೇಶಿಸಿರುವುದು ಒಂದೇ ಸಿನಿಮಾ (ಒಂದು ರೀಮೇಕ್) ಆದರೂ ಸಾಲು-ಸಾಲು ಸ್ಟಾರ್ ನಟರೊಟ್ಟಿಗೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಮುಗಿದ ಕೂಡಲೇ ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾ ಪ್ರಾರಂಭಿಸಲಿದ್ದಾರೆ. ಆ ಸಿನಿಮಾ ಮುಗಿದ ಬಳಿಕ ಅಲ್ಲು ಅರ್ಜುನ್​ಗಾಗಿ ಹೊಸ ಸಿನಿಮಾ ಒಂದನ್ನು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್