AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಹೊಸ ಪೋಸ್ಟರ್ ಬಿಡುಗಡೆ: ಖಡಕ್ ಲುಕ್​ನಲ್ಲಿ ಅನಿಲ್ ಕಪೂರ್

Ranbir Kapoor: ರಣ್​ಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ 'ಅನಿಮಲ್' ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಪೋಸ್ಟರ್​ನಲ್ಲಿ ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

'ಅನಿಮಲ್' ಹೊಸ ಪೋಸ್ಟರ್ ಬಿಡುಗಡೆ: ಖಡಕ್ ಲುಕ್​ನಲ್ಲಿ ಅನಿಲ್ ಕಪೂರ್
ಅನಿಮಲ್
ಮಂಜುನಾಥ ಸಿ.
|

Updated on: Sep 21, 2023 | 10:38 PM

Share

ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ (Bollywood) ನಿಧಾನಕ್ಕೆ ಅದರಿಂದ ಹೊರಗೆ ಬಂದಿದೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಕೋವಿಡ್ ಬಳಿಕ ಹಿಟ್​ ಸಿನಿಮಾಗಳಿಲ್ಲದೆ ಬಣಗುಟ್ಟಿದ್ದ ಬಾಲಿವುಡ್​ಗೆ ಕಳೆ ತುಂಬಿದರೆ, ‘ದೃಶ್ಯಂ’, ‘ಬ್ರಹ್ಮಾಸ್ತ್ರ’, ಇತ್ತೀಚೆಗಿನ ‘ಗದರ್ 2’ ಸಿನಿಮಾಗಳು ಗೆದ್ದು ನಿರ್ಮಾಪಕರಲ್ಲಿ ಆಶಾ ಭಾವ ಮೂಡಿಸಿದ್ದವು. ಬಳಿಕ ಬಂದ ‘ಜವಾನ್’ ಸಿನಿಮಾ ಸೂಪರ್-ಡೂಪರ್ ಹಿಟ್ ಆಗುವ ಮೂಲಕ ಬಾಲಿವುಡ್ ಮತ್ತೆ ಹಳಿಗೆ ಬರುವಂತೆ ಮಾಡಿದೆ. ಇದೀಗ ಬಾಲಿವುಡ್​ ಚಿತ್ರಕರ್ಮಿಗಳ ಕಣ್ಣು ಹಾಗೂ ಸಿನಿಮಾ ಪ್ರೇಮಿಗಳ ಕಣ್ಣು ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾದತ್ತ ನೆಟ್ಟಿದೆ.

ರಣ್​ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಮೇಲೆ ಬಹಳ ದೊಡ್ಡ ನಿರೀಕ್ಷೆ ಇದೆ. ಸಿನಿಮಾವನ್ನು ದಕ್ಷಿಣ ಭಾರತ ಚಿತ್ರರಂಗದ ನಿರ್ದೇಶಕ ಸಂದೀಪ್ ವಂಗಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಪೋಸ್ಟರ್ ಒಂದು ಇದೀಗ ಬಿಡುಗಡೆ ಆಗಿದೆ. ಪೋಸ್ಟರ್​ನಲ್ಲಿ ನಾಯಕ ರಣ್​ಬೀರ್ ಕಪೂರ್ ಇಲ್ಲ ಬದಲಿಗೆ ಅನಿಲ್ ಕಪೂರ್ ಇದ್ದಾರೆ. ಗಾಯಾಳುವಾಗಿ ಕೋಪದಿಂದ ಯಾರನ್ನೋ ದಿಟ್ಟಿಸುತ್ತಿರುವ ಅನಿಲ್​ ಕಪೂರ್​ರ ಚಿತ್ರ ಖಡಕ್ ಆಗಿದೆ. ‘ಅನಿಮಲ್’ ಸಿನಿಮಾದಲ್ಲಿ ಅನಿಲ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರಾ ಎಂಬ ಅನುಮಾನವೂ ಪೋಸ್ಟರ್​ನಿಂದ ವ್ಯಕ್ತವಾಗುತ್ತಿದೆ.

‘ಅನಿಮಲ್’ ಸಿನಿಮಾ ನಿರ್ದೇಶನ ಮಾಡಿರುವ ಸಂದೀಪ್ ರೆಡ್ಡಿ ವಂಗಾ ಈ ಹಿಂದೆ ಸೂಪರ್ ಡೂಪರ್ ಹಿಟ್ ಸಿನಿಮಾ ‘ಅರ್ಜುನ್ ರೆಡ್ಡಿ’ ನಿರ್ದೇಶನ ಮಾಡಿದ್ದರು. ಅದಾದ ಬಳಿಕ ಅದೇ ಸಿನಿಮಾದ ಹಿಂದಿ ರೀಮೇಕ್ ‘ಕಬೀರ್’ ಅನ್ನು ನಿರ್ದೇಶನ ಮಾಡಿದ್ದಾರೆ. ‘ಅನಿಮಲ್’ ಅವರ ಮೂರನೇ ಸಿನಿಮಾ. ‘ಅನಿಮಲ್’ ಸಿನಿಮಾ ಹಿಂಸಾತ್ಮಕತೆ ಹೆಚ್ಚಿಗಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಪೋಸ್ಟರ್ ಒಂದರಲ್ಲಿ ರಣ್​ಬೀರ್ ಕಪೂರ್ ರಕ್ತ-ಸಿಕ್ತವಾಗಿರುವ ಕೊಡಲಿಯೊಂದನ್ನು ಬಗಲಲ್ಲಿ ಇರಿಸಿಕೊಂಡು ಸಿಗರೇಟು ಹೊತ್ತಿಸಿಕೊಳ್ಳುತ್ತಿರುವ ಚಿತ್ರವಿದೆ. ‘ಅನಿಮಲ್’ ಸಿನಿಮಾದ ಟೀಸರ್ ಇದೇ ತಿಂಗಳು 28ರಂದು ಬಿಡುಗಡೆ ಆಗಲಿದ್ದು, ಸಿನಿಮಾ ಡಿಸೆಂಬರ್ 1 ರಂದು ತೆರೆಗೆ ಬರಲಿದೆ.

ಇದನ್ನೂ ಓದಿ:Animal Release Date: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ರಣ್​ಬೀರ್ ಕಪೂರ್, ತಮ್ಮ ಲವರ್​ಬಾಯ್ ಇಮೇಜಿನಿಂದ ಹೊರಗೆ ಬಂದು ಮಾಸ್ ಸಿನಿಮಾಗಳತ್ತ ಗಮನ ಹರಿಸುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಅವರ ಮಾಸ್ ಇಮೇಜಿಗೆ ಬೂಸ್ಟ್ ನೀಡಲಿದೆ ಎನ್ನಲಾಗುತ್ತಿದೆ. ‘ಅನಿಮಲ್’ ಬಳಿಕ ರಣ್​ಬೀರ್ ಕಪೂರ್ ‘ಬ್ರಹ್ಮಾಸ್ತ್ರ 2’ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ದಕ್ಷಿಣ ಭಾರತ ನಿರ್ದೇಶಕರೊಬ್ಬರ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಸಂದೀಪ್ ರೆಡ್ಡಿ ವಂಗಾ, ನಿರ್ದೇಶಿಸಿರುವುದು ಒಂದೇ ಸಿನಿಮಾ (ಒಂದು ರೀಮೇಕ್) ಆದರೂ ಸಾಲು-ಸಾಲು ಸ್ಟಾರ್ ನಟರೊಟ್ಟಿಗೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ‘ಅನಿಮಲ್’ ಸಿನಿಮಾ ಮುಗಿದ ಕೂಡಲೇ ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾ ಪ್ರಾರಂಭಿಸಲಿದ್ದಾರೆ. ಆ ಸಿನಿಮಾ ಮುಗಿದ ಬಳಿಕ ಅಲ್ಲು ಅರ್ಜುನ್​ಗಾಗಿ ಹೊಸ ಸಿನಿಮಾ ಒಂದನ್ನು ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?