Animal Movie: ಬದಲಾಯ್ತು ‘ಅನಿಮಲ್​’ ಬಿಡುಗಡೆ ದಿನಾಂಕ; ತಪ್ಪಿತು ಗಂಡ-ಹೆಂಡತಿ ನಡುವಿನ ಕ್ಲ್ಯಾಶ್​

‘ಅನಿಮಲ್​’ ಸಿನಿಮಾಗೆ ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿದ್ದಾರೆ. ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

Animal Movie: ಬದಲಾಯ್ತು ‘ಅನಿಮಲ್​’ ಬಿಡುಗಡೆ ದಿನಾಂಕ; ತಪ್ಪಿತು ಗಂಡ-ಹೆಂಡತಿ ನಡುವಿನ ಕ್ಲ್ಯಾಶ್​
ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್
Follow us
|

Updated on:Jul 02, 2023 | 7:26 AM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಅನಿಮಲ್​’ ಚಿತ್ರ (Animal Movie) ಕೂಡ ಇದೆ. ಆಗಸ್ಟ್​ 11ರಂದು ಈ ಚಿತ್ರ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕಾದಿದ್ದರು. ಅದಕ್ಕಾಗಿ ಚಿತ್ರತಂಡ ಪ್ರಚಾರವನ್ನೂ ಆರಂಭಿಸಿತ್ತು. ಆದರೆ ಈಗ ಬೇಸರದ ಸುದ್ದಿ ಕೇಳಿಬಂದಿದೆ. ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​​ ಡೇಟ್​ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದೊಂದು ಆ್ಯಕ್ಷನ್​ ಸಿನಿಮಾ. ಅದಕ್ಕೆ ಸಾಕ್ಷಿ ಎಂಬಂತೆ ಕೆಲವೇ ದಿನಗಳ ಹಿಂದೆ ಪ್ರೀ-ಟೀಸರ್​ ವಿಡಿಯೋ ರಿಲೀಸ್​ ಮಾಡಲಾಗಿತ್ತು. ಆದರೆ ಈಗ ‘ಅನಿಮಲ್​’ ರಿಲೀಸ್​ ಡೇಟ್​ (Animal Release Date) ಮುಂದಕ್ಕೆ ಹೋಗಿರುವ ಬಗ್ಗೆ ಸುದ್ದಿ ಕೇಳಿಬಂದಿದೆ.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್​ 11ರಂದು ‘ಅನಿಮಲ್​’ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆ ಸಂದರ್ಭದಲ್ಲಿ ರಿಲೀಸ್​ ಆದರೆ ಉತ್ತಮ ರೆಸ್ಪಾನ್ಸ್​ ಸಿಗಲಿದೆ ಎಂಬುದು ಬಾಕ್ಸ್​ ಆಫೀಸ್​ ಬಲ್ಲವರ ನಂಬಿಕೆ. ಅದೇ ಉದ್ದೇಶದಿಂದ ‘ಅನಿಮಲ್​’ ಚಿತ್ರತಂಡ ಬಿಡುಗಡೆ ದಿನಾಂಕ ಫಿಕ್ಸ್​ ಮಾಡಿತ್ತು. ಈಗ ಏಕಾಏಕಿ ಮನಸ್ಸು ಬದಲಾಯಿಸಿ, ರಿಲೀಸ್​ ಡೇಟ್​ ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ.

Alia Bhatt: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

‘ಅನಿಮಲ್​’ ಸಿನಿಮಾಗೆ ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್​’ ಸಿನಿಮಾಗಳಿಗೆ ಆ್ಯಕ್ಷನ್​-ಕಟ್​ ಹೇಳಿ ದೊಡ್ಡ ಯಶಸ್ಸು ಪಡೆದಿದ್ದ ಅವರು ಈಗ ರಣಬೀರ್​ ಕಪೂರ್​ ಜೊತೆ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಿಸಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್​ ಕಪೂರ್​?

ರಣಬೀರ್​ ಕಪೂರ್​ ಅವರ ಪತ್ನಿ ಆಲಿಯಾ ಭಟ್​ ಕೂಡ ಚಿತ್ರರಂಗದಲ್ಲಿ ಸಖತ್​ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಹಾರ್ಟ್​ ಆಫ್​ ಸ್ಟೋನ್​’ ಸಿನಿಮಾ ಆಗಸ್ಟ್​ 11ರಂದು ಒಟಿಟಿ ಮೂಲಕ ರಿಲೀಸ್​ ಆಗಲಿದೆ. ಅದೇ ದಿನಾಂಕದಲ್ಲಿ ‘ಅನಿಮಲ್​’ ಕೂಡ ಬಿಡುಗಡೆ ಆಗಿದ್ದರೆ ಇಬ್ಬರ ಸಿನಿಮಾಗಳ ನಡುವೆ ಕ್ಲ್ಯಾಶ್​ ಆಗುತ್ತಿತ್ತು. ಆದರೆ ‘ಅನಿಮಲ್​’ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ಗಂಡ-ಹೆಂಡತಿ ನಡುವಿನ ಕ್ಲ್ಯಾಶ್​ ತಪ್ಪಿದಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:14 am, Sun, 2 July 23

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ