AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕಿತಾಗೆ ಸುಶಾಂತ್​ ಉಡುಗೊರೆಯಾಗಿ ನೀಡಿದ್ದ ಮುದ್ದಿನ ಶ್ವಾನ ಸ್ಕಾಚ್​ ನಿಧನ

ನಟ ಸುಶಾಂತ್ ಸಿಂಗ್​ ರಜಪೂತ್​ ಅವರಿಗೆ ಪ್ರಾಣಿಗಳ ಬಗ್ಗೆ ಅಪಾರ ಪ್ರೀತಿ ಇತ್ತು. ತಮ್ಮ ಮುದ್ದಿನ ಶ್ವಾನಕ್ಕೆ ಅವರು ಸ್ಕಾಚ್​​ ಎಂದು ಹೆಸರು ಇಟ್ಟಿದ್ದರು. ಅದನ್ನು ಅವರು ಅಂಕಿತಾ ಲೋಖಂಡೆಗೆ ಉಡುಗೊರೆಯಾಗಿ ನೀಡಿದ್ದರು. ಆದರೆ ಈಗ ಸ್ಕಾಚ್​ ಕೊನೆಯುಸಿರು ಎಳೆದಿದೆ. ಆ ನೋವಿನ ಸುದ್ದಿಯನ್ನು ಅಂಕಿತಾ ಲೋಖಂಡೆ ಹಂಚಿಕೊಂಡಿದ್ದಾರೆ. ಅದರ ಫೋಟೋ ವೈರಲ್​ ಆಗಿದೆ.

ಅಂಕಿತಾಗೆ ಸುಶಾಂತ್​ ಉಡುಗೊರೆಯಾಗಿ ನೀಡಿದ್ದ ಮುದ್ದಿನ ಶ್ವಾನ ಸ್ಕಾಚ್​ ನಿಧನ
ಸ್ಕಾಚ್​ ಶ್ವಾನ, ಅಂಕಿತಾ ಲೋಖಂಡೆ, ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on:Feb 06, 2024 | 6:25 AM

Share

ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ಕೆಲವೇ ದಿನಗಳ ಹಿಂದೆ ‘ಬಿಗ್​ ಬಾಸ್​ 17’ ಶೋನಲ್ಲಿ ಸ್ಪರ್ಧಿಸಿ ಹೊರಬಂದಿದ್ದಾರೆ. ಈಗ ಅವರ ಕಡೆಯಿಂದ ಒಂದು ಕಹಿ ಸುದ್ದಿ ಸಿಕ್ಕಿದೆ. ಅವರ ಮನೆಯಲ್ಲಿ ಸಾಕಿದ್ದ ಮುದ್ದಿನ ನಾಯಿ (Ankita Lokhande Dog) ಸತ್ತು ಹೋಗಿದೆ. ಈ ಶ್ವಾನಕ್ಕೆ ಪ್ರೀತಿಯಿಂದ ಸ್ಕಾಚ್​ ಎಂದು ಹೆಸರು ಇಡಲಾಗಿತ್ತು. ಈಗ ಸ್ಕಾಚ್​ ಮೃತಪಟ್ಟಿದೆ. ಅದರ ಫೋಟೋವನ್ನು ಅಂಕಿತಾ ಲೋಖಂಡೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಕಂಬನಿ ಮಿಡಿದಿದ್ದಾರೆ. ವಿಶೇಷ ಏನೆಂದರೆ, ಅಂಕಿತಾಗೆ ಈ ಶ್ವಾನವನ್ನು ನೀಡಿದ್ದು ಮಾಜಿ ಪ್ರಿಯಕರ ಸುಶಾಂತ್​ ಸಿಂಗ್​ ರಜಪೂತ್​. ಹಾಗಾಗಿ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಅವರ ಅಭಿಮಾನಿಗಳು ಕೂಡ ಸ್ಕಾಚ್​ ನಿಧನಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಮತ್ತು ಅಂಕಿತಾ ಲೋಖಂಡೆ ಅವರು ಕಿರುತೆರೆಯ ‘ಪವಿತ್ರ ರಿಷ್ತಾ’ ಧಾರಾವಾಹಿಯಲ್ಲಿ ಜೋಡಿಯಾಗಿ ನಟಿಸಿದ್ದರು. ಆ ಸಂದರ್ಭದಲ್ಲಿ ಅವರಿಬ್ಬರ ನಡುವೆ ಆಪ್ತತೆ ಬೆಳೆದಿತ್ತು. ಪ್ರಾಣಿಗಳ ಬಗ್ಗೆ ಸುಶಾಂತ್​ ಸಿಂಗ್​ ರಜಪೂತ್​ ವಿಶೇಷ ಕಾಳಜಿ ಮತ್ತು ಪ್ರೀತಿ ಹೊಂದಿದ್ದರು. ತಮ್ಮ ಮುದ್ದಿನ ಶ್ವಾನದ ಜೊತೆ ಅವರು ಆಟವಾಡುತ್ತಿದ್ದ ವಿಡಿಯೋ ಕೂಡ ವೈರಲ್​ ಆಗಿತ್ತು. ಅದೇ ನಾಯಿ ಈಗ ಮೃತಪಟ್ಟಿದೆ.

ಅಂಕಿತಾ ಲೋಖಂಡೆ ಸೋಶಿಯಲ್​ ಮೀಡಿಯಾ ಪೋಸ್ಟ್​:

ಸ್ಕಾಚ್​ ಶ್ವಾನದ ಜೊತೆ ಅನೇಕ ನೆನಪುಗಳು ಬೆರೆತಿದ್ದವು. ಸುಶಾಂತ್​ ಸಿಂಗ್ ರಜಪೂತ್​ ಅವರು ಉಡುಗೊರೆಯಾಗಿ ನೀಡಿದ್ದು ಎಂಬ ಕಾರಣದಿಂದಲೂ ಅದು ತುಂಬಾ ಸ್ಪೆಷಲ್​ ಎನಿಸಿಕೊಂಡಿತ್ತು. ಪ್ರೀತಿಯಿಂದ ಸಾಕಿದ ನಾಯಿಯನ್ನು ಕಳೆದುಕೊಂಡು ಅಂಕಿತಾ ಲೋಖಂಡೆ ಅವರಿಗೆ ಬೇಸರ ಆಗಿದೆ. ‘ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಸ್ಕಾಚ್​. ಅಮ್ಮ ನಿನ್ನನ್ನು ಯಾವಾಗಲೂ ಮಿಸ್​ ಮಾಡಿಕೊಳ್ಳುತ್ತಾಳೆ’ ಎಂದು ಅಂಕಿತಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ನಾಗಿನ್’ ಧಾರಾವಾಹಿಯಲ್ಲಿ ನಟಿಸೋಕೆ ರೆಡಿ ಆದ ಅಂಕಿತಾ ಲೋಖಂಡೆ; ಸಿಗುತ್ತಿದೆ ಭರ್ಜರಿ ಸಂಭಾವನೆ?

ಅಂಕಿತಾ ಲೋಖಂಡೆ ಹಂಚಿಕೊಂಡ ಫೋಟೋಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ನಿಮ್ಮ ಟೈಮ್​ ಈಗ ಸರಿಯಿಲ್ಲ ಎನಿಸುತ್ತದೆ’ ಎಂದು ಕೆಲವರು ಎಚ್ಚರಿಕೆ ನೀಡಿದ್ದಾರೆ. ಟ್ರೋಫಿ ಗೆಲ್ಲಬೇಕು ಎಂದು ಅಂಕಿತಾ ಲೋಖಂಡೆ ಅವರು ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದರು. ಆದರೆ ಫಿನಾಲೆ ತನಕ ಬಂದ ಅವರಿಗೆ ವಿನ್ನರ್​ ಆಗಲು ಸಾಧ್ಯವಾಗಲಿಲ್ಲ. ಅವರ ಜೊತೆ ಪತಿ ವಿಕ್ಕಿ ಜೈನ್​ ಕೂಡ ದೊಡ್ಮನೆಯಲ್ಲಿ ಸ್ಪರ್ಧಿಯಾಗಿದ್ದರು. ಆದರೆ ಅವರಿಬ್ಬರ ನಡುವೆ ಸಾಕಷ್ಟು ಬಾರಿ ಜಗಳ ಆಗಿತ್ತು. ಬಿಗ್​ ಬಾಸ್​ ಶೋ ಮುಗಿಸಿ ಬಂದ ಕೆಲವೇ ದಿನಗಳಲ್ಲಿ ಸ್ಕಾಚ್​ ಶ್ವಾನ ಮೃತಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:28 pm, Mon, 5 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ