AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

Sushant Singh Rajput: ನಟ ಸುಶಾಂತ್ ಸಿಂಗ್ ರಜಪೂತ್ ರ ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಲೋಖಂಡೆ, ಸುಶಾಂತ್ ಸಿಂಗ್​ರ ಅಂತಿಮ ದರ್ಶನಕ್ಕೆ ಏಕೆ ಹೋಗಲಿಲ್ಲ ಎಂಬ ವಿಷಯ ಹಂಚಿಕೊಂಡಿದ್ದಾರೆ.

ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ
ಸುಶಾಂತ್-ಅಂಕಿತಾ
ಮಂಜುನಾಥ ಸಿ.
|

Updated on: Nov 21, 2023 | 7:55 AM

Share

ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನ ಹೊಂದಿ ಮೂರು ವರ್ಷಗಳಾಯ್ತು. ಸುಶಾಂತ್ ಸಿಂಗ್ ನಿಧನದಿಂದಾಗಿ ಬಾಲಿವುಡ್​ನ ಹಲವರ ಹಣೆಬರಹವೇ ಬದಲಾಯ್ತು. ಸುಶಾಂತ್​ರ ಗರ್ಲ್​ಫ್ರೆಂಡ್ ರಿಯಾ ಚಕ್ರವರ್ತಿ ಸೇರಿದಂತೆ ಹಲವರು ಜೈಲು ಪಾಲಾಗಬೇಕಾಯ್ತು. ಸುಶಾಂತ್ ಸಾವಿನ ತನಿಖೆ ವೇಳೆ ಹೊರಬಂದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್​ನ ದಿಗ್ಗಜ ನಟ-ನಟಿಯರು ಸಹ ವಿಚಾರಣೆ ಎದುರಿಸಬೇಕಾಯ್ತು. ಈಗಲೂ ಆಗೊಮ್ಮೆ, ಈಗೊಮ್ಮೆ ಸುಶಾಂತ್ ಸಿಂಗ್ ಕುರಿತ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸುಶಾಂತ್​ ಸಿಂಗ್​ರ ಮಾಜಿ ಗೆಳತಿಯೊಬ್ಬರು ತಾವೇಕೆ ಸುಶಾಂತ್​ರ ಅಂತಿಮ ದರ್ಶನಕ್ಕೆ ಹೋಗಲಿಲ್ಲವೆಂಬ ಬಗ್ಗೆ ಮಾತನಾಡಿದ್ದಾರೆ.

ಸುಶಾಂತ್ ಸಿಂಗ್, ರಿಯಾ ಚಕ್ರವರ್ತಿ ಅವರೊಟ್ಟಿಗೆ ಪ್ರೇಮ ಸಂಬಂಧಕ್ಕೆ ಬೀಳುವ ಮುನ್ನ ಸಾರಾ ಅಲಿ ಖಾನ್, ಕೃತಿ ಸೆನನ್ ಅವರುಗಳೊಟ್ಟಿಗೆ ಡೇಟ್ ಮಾಡಿದ್ದರು. ಆದರೆ ಸುಶಾಂತ್ ಅತಿ ಹೆಚ್ಚು ಸಮಯ ಪ್ರೀತಿಯಲ್ಲಿದ್ದಿದ್ದು ಸಹ ನಟಿ ಅಂಕಿತಾ ಲೋಖಂಡೆ ಜೊತೆಗೆ. ಅಂಕಿತಾ ಲೋಖಂಡೆ ಹಾಗೂ ಸುಶಾಂತ್ ಒಟ್ಟಿಗೆ ಟಿವಿ ಧಾರಾವಾಹಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಪರಿಚಯವಾಗಿ, ಇಬ್ಬರೂ ಪ್ರೀತಿಸತೊಡಗಿದ್ದರು. ಇವರ ಪ್ರೀತಿ ಬರೋಬ್ಬರಿ ಆರು ವರ್ಷ ನಡೆದಿತ್ತು. ಅಂತಿಮವಾಗಿ ಇವರು ದೂರಾದರು.

ಅಂಕಿತಾ ಜೊತೆ ದೂರಾದ ಬಳಿಕ, ಕೃತಿ ಸೆನನ್ ಆ ಬಳಿಕ ಸಾರಾ ಅಲಿ ಖಾನ್ ಜೊತೆ ಡೇಟ್ ನಡೆಸಿದ ಸುಶಾಂತ್ ಸಾಯುವ ಒಂದೆರಡು ವರ್ಷ ಮುಂಚಿನಿಂದ ರಿಯಾ ಚಕ್ರವರ್ತಿಯೊಟ್ಟಿಗೆ ಪ್ರೀತಿಯಲ್ಲಿದ್ದರು. ಅಂಕಿತಾ ಜೊತೆಗೆ ಹಲವು ವರ್ಷಗಳ ಕಾಲ ಪ್ರೀತಿಯಲ್ಲಿದ್ದರೂ ಸಹ ಸುಶಾಂತ್ ಸಿಂಗ್ ನಿಧನ ಹೊಂದಿದಾಗ ಅಂಕಿತಾ, ಸುಶಾಂತ್ ಸಿಂಗ್​ರ ಅಂತಿಮ ದರ್ಶನಕ್ಕೆ ಹೋಗಿರಲಿಲ್ಲ. ತಾವೇಕೆ ಅಂತಿಮ ದರ್ಶನಕ್ಕೆ ಹೋಗಲಿಲ್ಲ ಎಂಬ ಬಗ್ಗೆ ಅಂಕಿತಾ, ಬಿಗ್​ಬಾಸ್ ರಿಯಾಲಿಟಿ ಶೋನಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ:ಸುಶಾಂತ್ ಸಿಂಗ್ ಜೊತೆಗಿನ ಬ್ರೇಕಪ್​ಗೆ ಕಾರಣವೇ ಇಲ್ಲ; ಮೌನ ಮುರಿದ ಅಂಕಿತಾ ಲೋಕಂಡೆ

ಹಿಂದಿ ಬಿಗ್​ಬಾಸ್ ಸ್ಪರ್ಧಿಯಾಗಿರುವ ಅಂಕಿತಾ ಲೋಖಂಡೆ, ಮತ್ತೊಬ್ಬ ಸ್ಪರ್ಧಿ ಮುನಾವರ್ ಜೊತೆ ಮಾತನಾಡುತ್ತಾ, ”ನಾವು ಏಳು ವರ್ಷ ಪ್ರೀತಿಸಿದೆವು. ಅವನನ್ನು ಆ ಸ್ಥಿತಿಯಲ್ಲಿ ನೋಡಲು ನನಗೆ ಆಗುತ್ತಿರಲಿಲ್ಲ. ವಿಕ್ಕಿ ಸಹ (ಈಗಿನ ಪತಿ) ಹೋಗಿ ಬಾ ಎಂದು ಹೇಳಿದ. ವಿಕ್ಕಿ ಸಹ ಸುಶಾಂತ್​ಗೆ ಗೆಳೆಯನಾಗಿದ್ದ. ಹಾಗಿದ್ದರೂ ಸಹ ನನಗೆ ಹೋಗಲು ಆಗಲಿಲ್ಲ. ನನಗೆ ಅವನನ್ನು ಆ ಸ್ಥಿತಿಯಲ್ಲಿ ನೋಡಲು ಆಗುತ್ತಿರಲಿಲ್ಲ” ಎಂದಿದ್ದಾರೆ.

ಅದೇ ಕಾರ್ಯಕ್ರಮದಲ್ಲಿ ತಾವೇಕೆ ಸುಶಾಂತ್ ಜೊತೆಗೆ ಬ್ರೇಕಪ್ ಮಾಡಿಕೊಂಡಿದ್ದು ಎಂಬ ಬಗ್ಗೆಯೂ ಮಾತನಾಡಿರುವ ಅಂಕಿತಾ, ”ಬ್ರೇಕಪ್​ಗೆ ಸ್ಪಷ್ಟವಾದ ಕಾರಣ ಇರಲೇ ಇಲ್ಲ. ಒಂದೇ ರಾತ್ರಿಯಲ್ಲಿ ನನ್ನ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಯ್ತು. ನನ್ನ ಆಸೆ ಏನೆತ್ತೆಂದರೆ ಯಾವುದೇ ವಿಷಯವಾದರೂ ನನಗೆ ಹೇಳಿ ಮಾಡಬೇಕು ಎಂಬುದು ನನ್ನ ನಿಯಮವಾಗಿತ್ತು. ಆದರೆ ಸುಶಾಂತ್ ಸಿಂಗ್ ಜೀವನದಲ್ಲಿ ಕೆಲವು ಹೊಸ ವಿಷಯಗಳು ನಡೆದವು ಅದರ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಇದೇ ಮುಖ್ಯ ಕಾರಣವಾಯ್ತು’’ ಎಂದಿದ್ದಾರೆ ಅಂಕಿತಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ