AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ

Antim The Final Truth: ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಂದು ರಿಲೀಸ್​ ಆದ ಟ್ರೇಲರ್ ಸಿನಿಮಾ ಬಗ್ಗೆ ಭರವಸೆ ಮೂಡಿಸುವಂತೆ ಮಾಡಿದೆ.

Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ
ಸಲ್ಮಾನ್​ ಖಾನ್​
TV9 Web
| Edited By: |

Updated on:Oct 25, 2021 | 10:09 PM

Share

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರುತ್ತವೆ. ಇದು ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲೂ ಮುಂದುವರಿದಿದೆ. ಈ ಸಿನಿಮಾದ ಟ್ರೇಲರ್​ ಇಂದು ರಿಲೀಸ್​ ಆಗಿದ್ದು, ಸಖತ್​ ಆ್ಯಕ್ಷನ್​ನಿಂದ ಕೂಡಿದೆ. ಸಲ್ಲು ಖಡಕ್​ ಸಿಖ್​ ಪೊಲೀಸ್​ ಆಫೀಸರ್​ ಆಗಿ ಮಿಂಚಿದ್ದಾರೆ. ಈ ಟ್ರೇಲರ್ ನೋಡಿದ ಮೇಲೆ ‘ಅಂತಿಮ್​’ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ನವೆಂಬರ್​ 26ರಂದು ಸಿನಿಮಾ ತೆರೆಗೆ ಬರುತ್ತಿದೆ.

ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇಂದು ರಿಲೀಸ್​ ಆದ ಟ್ರೇಲರ್ ಸಿನಿಮಾ ಬಗ್ಗೆ ಭರವಸೆ ಮೂಡಿಸುವಂತೆ ಮಾಡಿದೆ. ಒಂದು ದೃಶ್ಯದಲ್ಲಿ ಸಲ್ಮಾನ್​ ಖಾನ್​ ಸಿಕ್ಸ್​ ಪ್ಯಾಕ್​ ತೋರಿಸುತ್ತಾರೆ. ಈ ದೃಶ್ಯಗಳಿಗೆ ಚಿತ್ರಮಂದಿರದಲ್ಲಿ ಶಿಳ್ಳೆ ಬೀಳೋದು ಪಕ್ಕಾ. ಸಲ್ಮಾನ್ ಖಾನ್​ ನಟನೆಯ ಈ ಹಿಂದಿನ ‘ರಾಧೆ: ಯುವರ್​ ಮೋಸ್ಟ್ ವಾಂಟೆಡ್​ ಭಾಯ್’​ ಚಿತ್ರ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಈಗ ‘ಅಂತಿಮ್​’ ಸಿನಿಮಾ ಮೂಲಕ ಗೆಲುವು ಕಾಣಲೇ ಬೇಕಾದ ಅನಿವಾರ್ಯತೆ ಸಲ್ಲುಗೆ ಎದುರಾಗಿದೆ.

ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರವೂ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ. ಹೀಗಾಗಿ, ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಬಜೆಟ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ. ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಆಗುತ್ತಿದೆ.

ಇದನ್ನೂ ಓದಿ: ಜಾನ್​ ಅಬ್ರಾಹಂ ಎದುರು ತೊಡೆತಟ್ಟಿದ ಸಲ್ಮಾನ್​ ಖಾನ್​; ಗೆಲ್ಲೋರು ಯಾರು?

ಸಲ್ಮಾನ್​ ಖಾನ್​ ಜೊತೆ ಶಮಿತಾ ಶೆಟ್ಟಿ ತುಳು ಮಾತುಕತೆ; ಮಾತೃಭಾಷೆ ಅಭಿಮಾನಕ್ಕೆ ಜನರು ಫಿದಾ

Published On - 9:50 pm, Mon, 25 October 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!