AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರದಲ್ಲಿ ಸಲ್ಲು ಫ್ಯಾನ್ಸ್​ ಹುಚ್ಚು ಕೆಲಸ; ‘ಥಿಯೇಟರ್​ಗೆ ಬೆಂಕಿ ಬೀಳತ್ತೆ ಹುಷಾರ್​’ ಎಂದ ಸ್ಟಾರ್ ನಟ​

Antim: The Final Truth: ‘ಸಿನಿಮಾ ಎಂಜಾಯ್​ ಮಾಡಿ. ಆದರೆ ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಬೇಡಿ. ಇದು ನನ್ನೆಲ್ಲ ಅಭಿಮಾನಿಗಳಲ್ಲಿ ಮನವಿ’ ಎಂದು ಸಲ್ಮಾನ್​ ಖಾನ್​ ಬರೆದುಕೊಂಡಿದ್ದಾರೆ.

ಚಿತ್ರಮಂದಿರದಲ್ಲಿ ಸಲ್ಲು ಫ್ಯಾನ್ಸ್​ ಹುಚ್ಚು ಕೆಲಸ; ‘ಥಿಯೇಟರ್​ಗೆ ಬೆಂಕಿ ಬೀಳತ್ತೆ ಹುಷಾರ್​’ ಎಂದ ಸ್ಟಾರ್ ನಟ​
ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್​
TV9 Web
| Edited By: |

Updated on: Nov 28, 2021 | 8:00 AM

Share

ಬಾಲಿವುಡ್ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಅವರು ನಟಿಸಿರುವ ಯಾವುದೇ ಸಿನಿಮಾ ತೆರೆಕಂಡರೂ ಅಭಿಮಾನಿಗಳು ಹಬ್ಬದಂತೆ ಸಂಭ್ರಮಿಸುತ್ತಾರೆ. ಆದರೆ ಇಂತಹ ಅಭಿಮಾನ ಕೆಲವೊಮ್ಮೆ ಅತಿರೇಕದ ಸ್ವರೂಪ ಪಡೆದುಕೊಳ್ಳುವುದುಂಟು. ಸಲ್ಲು ಮತ್ತು ಆಯುಶ್​ ಶರ್ಮಾ (Aayush Sharma) ನಟನೆಯ ‘ಅಂತಿಮ್​: ದಿ ಫೈನಲ್​ ಟ್ರುತ್​’ (Antim: The Final Truth) ಚಿತ್ರ ನ.26ರಂದು ಬಿಡುಗಡೆಯಾಗಿದೆ. ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಅದು ಖುಷಿಯ ವಿಚಾರ. ಆದರೆ ಸಿನಿಮಾ ನೋಡಲು ಬಂದು ಕೆಲವು ಹುಚ್ಚು ಅಭಿಮಾನಿಗಳು ಅಪಾಯಕಾರಿ ಕೆಲಸಕ್ಕೆ ಕೈ ಹಾಕಿದ್ದಾರೆ. ಜನರಿಂದ ತುಂಬಿ ತುಳುಕುತ್ತಿದ್ದ ಚಿತ್ರಮಂದಿರದ ಒಳಗೆ ಪಟಾಕಿ (Firecrackers) ಸಿಡಿಸಲಾಗಿದೆ! ಅದನ್ನು ಕಂಡು ಸ್ವತಂ ಸಲ್ಮಾನ್​ ಖಾನ್​ಗೆ ಶಾಕ್​ ಆಗಿದೆ. ಅಭಿಮಾನಿಗಳ ಇಂಥ ವರ್ತನೆಯನ್ನು ಅವರು ಖಂಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಲ್ಲು ಪೋಸ್ಟ್​ ಮಾಡಿದ್ದು, ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

‘ಚಿತ್ರಮಂದಿರದ ಒಳಗೆ ಪಟಾಕಿಗಳನ್ನು ತೆಗೆದುಕೊಂಡು ಹೋಗಬಾರದು ಎಂದು ಅಭಿಮಾನಿಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಅದರಿಂದ ದೊಡ್ಡ ಅವಘಡ ಸಂಭವಿಸಬಹುದು. ಅನೇಕರ ಪ್ರಾಣ ಹಾನಿ ಆಗಬಹುದು. ಥಿಯೇಟರ್​ ಒಳಗೆ ಪಟಾಕಿ ತರುವುದಕ್ಕೆ ಚಿತ್ರಮಂದಿರದ ಮಾಲಿಕರು ಅವಕಾಶ ನೀಡಬಾರದು. ಪಟಾಕಿ ತರುವವರನ್ನು ಬಾಗಿಲಿನಲ್ಲಿಯೇ ತಡೆಯಬೇಕು. ಸಿನಿಮಾವನ್ನು ಎಂಜಾಯ್​ ಮಾಡಿ. ಆದರೆ ಇಂಥ ಕೆಲಸವನ್ನು ಮಾಡಬೇಡಿ. ಇದು ನನ್ನೆಲ್ಲ ಅಭಿಮಾನಿಗಳಲ್ಲಿ ಮನವಿ’ ಎಂದು ಸಲ್ಮಾನ್​ ಖಾನ್​ ಬರೆದುಕೊಂಡಿದ್ದಾರೆ. ಈ ಪೋಸ್ಟ್​ ಜತೆಗೆ ಅಭಿಮಾನಿಗಳು ಪಟಾಕಿ ಸಿಡಿಸುತ್ತಿರುವ ವಿಡಿಯೋವನ್ನು ಕೂಡ ಸಲ್ಲು ಹಂಚಿಕೊಂಡಿದ್ದಾರೆ.

‘ಅಂತಿಮ್​: ದಿ ಫೈನಲ್​ ಟ್ರುತ್​’ ಮೊದಲ ದಿನದ ಕಲೆಕ್ಷನ್ ಎಷ್ಟು?​

ಸಲ್ಮಾನ್​ ಖಾನ್​ ಸಿನಿಮಾ ಎಂದರೆ ಮೊದಲ ದಿನವೇ ಹತ್ತಾರು ಕೋಟಿ ರೂ. ಬ್ಯುಸಿನೆಸ್​ ಮಾಡುತ್ತವೆ. ಆ ನಿರೀಕ್ಷೆಯ ಮೇಲೆಯೇ ನಿರ್ಮಾಪಕರು ಅವರ ಚಿತ್ರಗಳಿಗೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ಆದರೆ ಸಲ್ಲು ನಟನೆಯ ಕೆಲವು ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸೊರಗುತ್ತವೆ. ಈಗ ‘ಅಂತಿಮ್​’ ಚಿತ್ರಕ್ಕೂ ಹಾಗೆಯೇ ಆಗಿದೆ. ಈ ಸಿನಿಮಾ ಬಿಡುಗಡೆಯಾದ ಮೊದಲ ದಿನ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಿಲ್ಲ. ಟ್ರೇಲರ್​​ ಮೂಲಕ ಸಖತ್​ ಹೈಪ್​ ಸೃಷ್ಟಿ ಮಾಡಿದ್ದ ಈ ಚಿತ್ರ ಮೊದಲ ದಿನ ಕೇವಲ 4.5 ಕೋಟಿ ರೂ. ಗಳಿಸಿದೆ.

‘ಸತ್ಯಮೇವ ಜಯತೆ 2’ ನ.25ರಂದು ತೆರೆಕಂಡಿತು. ಅದರ ಮರುದಿನ ‘ಅಂತಿಮ್​: ದಿ ಫೈನಲ್​ ಟ್ರುತ್​’ ಬಿಡುಗಡೆ ಆಯಿತು. ಎರಡೂ ಚಿತ್ರಗಳ ನಡುವೆ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಏರ್ಪಟ್ಟಿದೆ. ದೇಶಾದ್ಯಂತ 3,500 ಪರದೆಗಳಲ್ಲಿ ‘ಅಂತಿಮ್​’ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಹಿಟ್​ ಎನಿಸಿಕೊಳ್ಳಲು ಕನಿಷ್ಠ 50 ಕೋಟಿ ರೂಪಾಯಿ ಆದ್ರೂ ಗಳಿಸಬೇಕು ಎಂದು ಗಲ್ಲಾಪೆಟ್ಟಿಗೆ ವ್ಯವಹಾರ ಬಲ್ಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಕತ್ರಿನಾ-ವಿಕ್ಕಿ ವಿವಾಹ: ವೈರಲ್​ ಆಗಿದ್ದ ಸಲ್ಮಾನ್​-ಕತ್ರಿನಾ ಮದುವೆ ವಿಡಿಯೋದ ಅಸಲಿಯತ್ತೇನು?

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!