ಅನುಪಮ್ ಖೇರ್ ಕಚೇರಿಯನ್ನು ಲೂಟಿ ಮಾಡಿದ ಕಳ್ಳರು; ಸಿಕ್ಕಿದ್ದೇನು?

ಮನೆಯ ಬಾಗಿಲನ್ನು ಒಡೆದು ಕಳ್ಳರು ಕಚೇರಿ ಒಳಗೆ ಎಂಟ್ರಿ ಪಡೆದಿದ್ದಾರೆ. ಕಚೇರಿ ಪೂರ್ತಿಯಾಗಿ ಅವರು ಹುಡುಕಾಡಿದ್ದಾರೆ. ಆ ಬಳಿಕ ಅವರು ಖೇರ್ ಪ್ರೊಡಕ್ಷನ್ ಕಂಪನಿಯ ಸಿನಿಮಾದ ನೆಗೆಟಿವ್​ಗಳನ್ನು ಕದ್ದೊಯ್ದಿದ್ದಾರೆ. ಇನ್ನು, ಅವರು ಹಣ ಇಟ್ಟ ಬೀರುನ ಓಪನ್ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಅನುಪಮ್ ಖೇರ್ ಕಚೇರಿಯನ್ನು ಲೂಟಿ ಮಾಡಿದ ಕಳ್ಳರು; ಸಿಕ್ಕಿದ್ದೇನು?
ಅನುಪಮ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 24, 2024 | 4:59 PM

ಬಾಲಿವುಡ್​ನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರೋ ನಟ ಅನುಪಮ್ ಖೇರ್ (Anupam Kher) ಅವರು ಆಗಾಗ ತಮ್ಮ ಹೇಳಿಕೆಗಳಿಂದ, ತಮ್ಮ ನಿಲುವುಗಳಿಂದ ಸುದ್ದಿ ಆಗುತ್ತಾರೆ. ಈಗ ಬುಧವಾರ (ಜೂನ್ 19) ರಾತ್ರಿ ಅವರ ಕಚೇರಿಯನ್ನು ಕಳ್ಳರು ಲೂಟಿ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಕಳ್ಳತನ ಆಗಿರೋ ವಸ್ತುಗಳು ಯಾವವು ಎನ್ನುವುದರ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

ಮನೆಯ ಬಾಗಿಲನ್ನು ಒಡೆದು ಕಳ್ಳರು ಕಚೇರಿ ಒಳಗೆ ಎಂಟ್ರಿ ಪಡೆದಿದ್ದಾರೆ. ಕಚೇರಿ ಪೂರ್ತಿಯಾಗಿ ಅವರು ಹುಡುಕಾಡಿದ್ದಾರೆ. ಆ ಬಳಿಕ ಅವರು ಖೇರ್ ಪ್ರೊಡಕ್ಷನ್ ಕಂಪನಿಯ ಸಿನಿಮಾದ ನೆಗೆಟಿವ್​ಗಳನ್ನು ಕದ್ದೊಯ್ದಿದ್ದಾರೆ. ಇನ್ನು, ಅವರು ಹಣ ಇಟ್ಟ ಬೀರುನ ಓಪನ್ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಅನುಪಮ್ ಖೇರ್ ಕಂಪನಿಯವರು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಸಲ್ಲಿಕೆ ಮಾಡಿದ್ದಾರೆ. ಕಚೇರಿಯಲ್ಲಿ ಸಿಕ್ಕ ಎಲ್ಲಾ ವಸ್ತುಗಳನ್ನು ಆಟೋ ರಿಕ್ಷಾದಲ್ಲಿ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ. ಹಣ ಕದಿಯಲು ಸಾಧ್ಯವಾಗದೇ ಇರುವುದರಿಂದ ದೊಡ್ಡ ಮಟ್ಟದ ನಷ್ಟ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆ ಆಗುತ್ತಿದೆ. ಅನುಪಮ್ ಖೇರ್ ಅವರು ಕಳ್ಳರಿಗೆ ಬುದ್ಧಿ ಕೊಡಲಿ ಎಂದು ಕೇಳಿಕೊಂಡಿದ್ದಾರೆ.

ಅನುಪಮ್ ಖೇರ್ ಅವರು ಕನ್ನಡದಲ್ಲಿ ನಟಿಸಿದ್ದರು. ಕಳೆದ ವರ್ಷ ರಿಲೀಸ್ ಆದ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್​’ ಸಿನಿಮಾದಲ್ಲಿ ಅನುಪಮ್ ಅವರು ಜೊತೆಯಾಗಿದ್ದರು. ಇವರ ಕಾಂಬಿನೇಷನ್ ಗಮನ ಸೆಳೆದಿತ್ತು. ಶ್ರೀನಿ ನಿರ್ದೇಶನದ ಈ ಸಿನಿಮಾ ಜನರಿಂದ ಮೆಚ್ಚುಗೆ ಪಡೆಯಿತು.

ಇದನ್ನೂ ಓದಿ: ‘ನೇರ ಮರವನ್ನೇ ಮೊದಲು ಕತ್ತರಿಸೋದು’; ಫಲಿತಾಂಶದ ಬಳಿಕ ನಿಗೂಢಾರ್ಥದಲ್ಲಿ ಅನುಪಮ್ ಖೇರ್ ಪೋಸ್ಟ್  

ಅನುಪಮ್ ಖೇರ್ ಅವರು ನಾಲ್ಕು ದರ್ಶಕಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 1982ರಲ್ಲಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು, ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿ ಅನುಪಮ್ ಖೇರ್ ಸುದ್ದಿ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Fri, 21 June 24

ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ