AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಆಲಿಯಾ ಭಟ್​ಗೆ ಅನುಪಮ್​ ಖೇರ್​ ಮೆಚ್ಚುಗೆ; ಕಂಗನಾ ಪ್ರತಿಕ್ರಿಯೆ ತಿಳಿಯಲು ಕಾದಿರುವ ನೆಟ್ಟಿಗರು

Kangana Ranaut | Anupam Kher: ಆಲಿಯಾ ಭಟ್​ ಅವರನ್ನು ಹೊಗಳಿ ಅನುಪಮ್​ ಖೇರ್​ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಇನ್ನೂ ಕಂಗನಾ ರಣಾವತ್​ ಕಣ್ಣಿಗೆ ಬಿದ್ದಿಲ್ಲವೇ’ ಎಂದು ಜನ ಪ್ರಶ್ನಿಸುತ್ತಿದ್ದಾರೆ.

Alia Bhatt: ಆಲಿಯಾ ಭಟ್​ಗೆ ಅನುಪಮ್​ ಖೇರ್​ ಮೆಚ್ಚುಗೆ; ಕಂಗನಾ ಪ್ರತಿಕ್ರಿಯೆ ತಿಳಿಯಲು ಕಾದಿರುವ ನೆಟ್ಟಿಗರು
ಕಂಗನಾ ರಣಾವತ್, ಅನುಪಮ್ ಖೇರ್, ಆಲಿಯಾ ಭಟ್
Follow us
ಮದನ್​ ಕುಮಾರ್​
|

Updated on: Feb 14, 2023 | 4:53 PM

ನಟಿ ಕಂಗನಾ ರಣಾವತ್​ (Kangana Ranaut) ಅವರು ಬಾಲಿವುಡ್​ನಲ್ಲಿ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ನಟನೆ ವಿಚಾರದಲ್ಲಿ ತಮ್ಮನ್ನು ಯಾರಾದರೂ ಕಡೆಗಣಿಸಿ, ಇತರೆ ನಟಿಯರಿಗೆ ಬಿಲ್ಡಪ್​ ಕೊಟ್ಟರೆ ಅದನ್ನು ಕಂಗನಾ ಸಹಿಸುವುದೇ ಇಲ್ಲ. ಅದಕ್ಕೆ ಹಲವು ಘಟನೆಗಳು ಸಾಕ್ಷಿ ಆಗಿವೆ. ಹಾಗಾಗಿ ಪ್ರತಿ ಬಾರಿಯೂ ಅಂಥದ್ದೇನಾದರೂ ನಡೆದರೆ ಅದಕ್ಕೆ ಕಂಗನಾ ಹೇಗೆ ಪ್ರತಿಕ್ರಿಯಿಸಬಹುದು ಎಂಬ ನಿರೀಕ್ಷೆ ನೆಟ್ಟಿಗರಿಗೆ ಇರುತ್ತದೆ. ಈಗ ಅದೇ ರಿತಿ ಆಗಿದೆ. ಹಿರಿಯ ನಟ ಅನುಪಮ್​ ಖೇರ್​ (Anupam Kher) ಅವರು ಆಲಿಯಾ ಭಟ್​ ಅವರನ್ನು ಮನಸಾರೆ ಹೊಗಳಿದ್ದಾರೆ. ‘ಹುಟ್ಟು ಕಲಾವಿದೆ’ ಎಂದು ಆಲಿಯಾ ಭಟ್​ (Alia Bhatt) ಬಗ್ಗೆ ಅವರು ಮೆಚ್ಚುಗೆ ನುಡಿಗಳನ್ನು ಹೇಳಿದ್ದಾರೆ. ಇದಕ್ಕೆ ಕಂಗನಾ ಕಡೆಯಿಂದ ಎಂತಹ ಪ್ರತಿಕ್ರಿಯೆ ಬರಬಹುದು ಎಂಬ ಕೌತುಕ ಮೂಡಿದೆ.

ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರ ಮದುವೆ ಇತ್ತೀಚೆಗೆ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ನಡೆಯಿತು. ಬಳಿಕ ಅವರು ಮುಂಬೈನಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳಿಗಾಗಿ ರಿಸೆಪ್ಷನ್​ ಏರ್ಪಡಿಸಿದ್ದರು. ಅದಕ್ಕೆ ಅನೇಕ ತಾರೆಯರು ಹಾಜರಿ ಹಾಕಿದ್ದರು. ಈ ವೇಳೆ ಅನುಪಮ್​ ಖೇರ್ ಮತ್ತು ಆಲಿಯಾ ಭಟ್​ ಭೇಟಿ ಆಗಿದ್ದಾರೆ. ಆ ಸಂದರ್ಭದ ಫೋಟೋವನ್ನು ಪೋಸ್ಟ್​ ಮಾಡಿರುವ ಅನುಪಮ್​ ಖೇರ್​ ಅವರು ಆಲಿಯಾಗೆ ಮೆಚ್ಚುಗೆಯ ಮಳೆ ಸುರಿಸಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: ಕಂಗನಾ ಬಿಟ್ಟು ದೀಪಿಕಾ, ಆಲಿಯಾ ಹೊಗಳಿದ ಆಮಿರ್ ಖಾನ್; ಸರಿಯಾಗಿ ತಿರುಗೇಟು ಕೊಟ್ಟ ರಣಾವತ್

‘ಪ್ರೀತಿಯ ಆಲಿಯಾ ಭಟ್​.. ತುಂಬ ದಿನಗಳ ಬಳಿಕ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ರಿಸೆಪ್ಷನ್​ನಲ್ಲಿ ನಿನ್ನನ್ನು ಭೇಟಿ ಮಾಡಿ ಖುಷಿ ಆಯಿತು. ಶಾಲೆಯಲ್ಲಿ ಕಲಿಯುತ್ತಿದ್ದಾಗ ನಿನ್ನನ್ನು ನಾನು ಹುಟ್ಟು ಕಲಾವಿದೆ ಅಂತ ಟೀಸ್​ ಮಾಡುತ್ತಿದ್ದ ದಿನಗಳ ಬಗ್ಗೆ ಈಗ ಮಾತನಾಡಿದ್ದು ಚೆನ್ನಾಗಿತ್ತು. ನಿನ್ನ ನಟನೆಯನ್ನು ಇಷ್ಟಪಟ್ಟಿದ್ದೇನೆ. ಅದರಲ್ಲೂ ಗಂಗೂಬಾಯಿ ಕಾಠಿಯಾವಾಡಿ ಚಿತ್ರದಲ್ಲಿ ಅಭಿನಯ ಚೆನ್ನಾಗಿದೆ. ಹೀಗೆ ಮುಂದುವರಿ. ನಿನಗಾಗಿ ಸದಾ ನನ್ನ ಪ್ರೀತಿ ಮತ್ತು ಪ್ರಾರ್ಥನೆಗಳು’ ಎಂದು ಅನುಪಮ್​ ಖೇರ್​ ಪೋಸ್ಟ್​ ಮಾಡಿದ್ದಾರೆ.

View this post on Instagram

A post shared by Anupam Kher (@anupampkher)

ಇದನ್ನು ನೋಡಿದ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಇನ್ನೂ ಕಂಗನಾ ರಣಾವತ್​ ಕಣ್ಣಿಗೆ ಬಿದ್ದಿಲ್ಲವೇ? ಅನುಪಮ್​ ಖೇರ್​ ಮೇಲೆ ಅವರು ದಾಳಿ ಮಾಡೋದು ಗ್ಯಾರಂಟಿ. ಹೊಟ್ಟೆ ಉರಿಯಿಂದಾಗಿ ಅವರು ಹೇಗೆ ರಿಯಾಕ್ಟ್​ ಮಾಡುತ್ತಾರೋ ಅಂತ ನೋಡಬೇಕು’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ಕೆಲವೇ ದಿನಗಳ ಹಿಂದೆ ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ದೀರ್ಘವಾಗಿ ಬರೆದುಕೊಂಡಿದ್ದರು. ತಮ್ಮನ್ನು ಸೆಲೆಬ್ರಿಟಿ ದಂಪತಿ ಫಾಲೋ ಮಾಡುತ್ತಿದ್ದಾರೆ ಎಂಬ ವಿಷಯವನ್ನು ಬಹಿರಂಗ ಪಡಿಸಿದ್ದರು. ಆದರೆ ಯಾರ ಹೆಸರನ್ನು ಪ್ರಸ್ತಾಪಿಸಿರಲಿಲ್ಲ. ಅದು ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಬಗ್ಗೆಯೇ ಬರೆದಿದ್ದು ಎಂದು ನೆಟ್ಟಿಗರು ಊಹಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ