AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ‘ಕಾಶ್ಮೀರ್​ ಫೈಲ್ಸ್​ ಚಿತ್ರದಲ್ಲಿ ಏನೋ ಸಮಸ್ಯೆ ಇರಬಹುದು’; ಆಸ್ಕರ್​ನಿಂದ ಔಟ್​ ಆಗಿದ್ದಕ್ಕೆ ಅನುಪಮ್​ ಖೇ​ರ್​ ಪ್ರತಿಕ್ರಿಯೆ

The Kashmir Files | Oscar Awards: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಆಸ್ಕರ್​ಗೆ​ ನಾಮಿನೇಟ್​ ಆಗಬಹುದು ಎಂದು ಅಭಿಮಾನಿಗಳು ಊಹಿಸಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಆ ಬಗ್ಗೆ ​ಅನುಪಮ್​ ಖೇರ್​ ಪ್ರತಿಕ್ರಿಯಿಸಿದ್ದಾರೆ.

Anupam Kher: ‘ಕಾಶ್ಮೀರ್​ ಫೈಲ್ಸ್​ ಚಿತ್ರದಲ್ಲಿ ಏನೋ ಸಮಸ್ಯೆ ಇರಬಹುದು’; ಆಸ್ಕರ್​ನಿಂದ ಔಟ್​ ಆಗಿದ್ದಕ್ಕೆ ಅನುಪಮ್​ ಖೇ​ರ್​ ಪ್ರತಿಕ್ರಿಯೆ
ಅನುಪಮ್ ಖೇರ್
ಮದನ್​ ಕುಮಾರ್​
|

Updated on:Jan 26, 2023 | 1:01 PM

Share

95ನೇ ಆಸ್ಕರ್​ ಪ್ರಶಸ್ತಿಯ (Oscar Awards) ನಾಮಿನೇಷನ್​ ಪಟ್ಟಿ ಇತ್ತೀಚೆಗಷ್ಟೇ ಪ್ರಕಟ ಆಯಿತು. 300ಕ್ಕೂ ಅಧಿಕ ಸಿನಿಮಾಗಳು ನಾಮನಿರ್ದೇಶನಗೊಳ್ಳಲು ಅರ್ಹತೆ ಪಡೆದಿದ್ದವು. ಆ ಪೈಕಿ ಒಂದಷ್ಟು ಸಿನಿಮಾಗಳಿಗೆ ಮಾತ್ರ ನಾಮಿನೇಟ್​​ ಆಗುವ ಅವಕಾಶ ಸಿಕ್ಕಿದೆ. ಇನ್ನುಳಿದ ಸಿನಿಮಾಗಳಿಗೆ ತೀವ್ರ ನಿರಾಸೆ ಆಗಿದೆ. ಕನ್ನಡದ ‘ಕಾಂತಾರ’, ‘ವಿಕ್ರಾಂತ್​ ರೋಣ’, ಹಿಂದಿಯ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾಗಳು ರೇಸ್​ನಿಂದ ಹೊರಗುಳಿದಿವೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕೆ ಆಸ್ಕರ್​ ಸಿಗಬೇಕು ಎಂಬುದು ಹಲವರ ಆಸೆ ಆಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಈ ಕುರಿತಾಗಿ ಆ ಚಿತ್ರದ ನಟ ಅನುಪಮ್​ ಖೇರ್​ (Anupam Kher) ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ಪ್ರಶಸ್ತಿಗೆ ನಾಮಿನೇಟ್​ ಆಗಿದೆ. ಆ ಬಗ್ಗೆ ಅನುಪಮ್​ ಖೇರ್​ ಅವರಿಗೆ ಖುಷಿ ಇದೆ. ‘ಆರ್​ಆರ್​ಆರ್​ ಚಿತ್ರಕ್ಕೆ ಕ್ರಿಟಿಕ್ಸ್​ ಚಾಯ್ಸ್​ ಮತ್ತು ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಬಂದಿದೆ. ಭಾರತೀಯ ಚಿತ್ರರಂಗಕ್ಕೆ ಇದು ಹೆಮ್ಮೆಯ ವಿಚಾರ. ಅದನ್ನು ನಾವೇಕೆ ಸೆಲೆಬ್ರೇಟ್​ ಮಾಡಬಾರದು? ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾದಲ್ಲಿ ಖಂಡಿತವಾಗಿ ಏನೋ ಸಮಸ್ಯೆ ಇರಬಹುದು’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

Oscar 2023 Nomination: ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟ; ಭಾರತಕ್ಕೆ ಬಂಪರ್​ ಚಾನ್ಸ್​

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
Image
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ತಯಾರಾಗಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಹಲವು ಆಯಾಮದಿಂದ ಈ ಸಿನಿಮಾ ಚರ್ಚೆಗೆ ಒಳಗಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ವಿವೇಕ್​ ಅಗ್ನಿಹೋತ್ರಿ ಅವರು ಇದಕ್ಕೆ ನಿರ್ದೇಶಮ ಮಾಡಿದ್ದಾರೆ. ಈ ಸಿನಿಮಾ ಆಸ್ಕರ್​ಗೆ ನಾಮಿನೇಟ್​ ಆಗಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ಇತ್ತೀಚೆಗೆ  #boycottoscars ಎಂದು ಹ್ಯಾಶ್ ಟ್ಯಾಗ್​ ಟ್ರೆಂಡ್​ ಆರಂಭಿಸಿದ್ದರು.

ಭಾರತಕ್ಕೆ ಆಸ್ಕರ್​ ನಿರೀಕ್ಷೆ:

ಭಾರತದ ಒಂದಷ್ಟು ಸಿನಿಮಾಗಳು ಈ ಬಾರಿ ಶಾರ್ಟ್​ಲಿಸ್ಟ್​ ಆಗಿದ್ದರಿಂದ ನಾಮಿನೇಷನ್​ ಪ್ರಕ್ರಿಯೆ ಮೇಲೆ ಸಖತ್​ ನಿರೀಕ್ಷೆ ಮೂಡಿತ್ತು. ಅಂತಿಮವಾಗಿ ಭಾರತಕ್ಕೆ ಮೂರು ನಾಮಿನೇಷನ್​ ಸಿಕ್ಕಿದೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:01 pm, Thu, 26 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?