AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ‘ವಿಜಯ್ 69′ ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69' ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ.

ಹೇಗಿದೆ ‘ವಿಜಯ್ 69' ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ
ಅನುಪಮ್ ಖೇರ್
TV9 Web
| Edited By: |

Updated on: Nov 09, 2024 | 2:28 PM

Share

ಅನುಪಮ್ ಖೇರ್ ಅವರಿಗೆ ಈಗ 69 ವರ್ಷ ವಯಸ್ಸು. ಅವರ ನಟನೆಯ ‘ದಿ ಸಿಗ್ನೇಚರ್’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಈಗ ಅವರ ನಟನೆಯ ‘ವಿಜಯ್ 69′ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್​ಗೆ ಆಗಿದೆ. ಇದರಲ್ಲಿ ಅನುಪಮ್ ಖೇರ್ ಅವರು ‘ವಿಜಯ್ ಮ್ಯಾಥ್ಯೂ’ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದಾರೆ.

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69′ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಇದನ್ನು ಮನೀಶ್ ಶರ್ಮಾ ಹಾಗೂ ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರವನ್ನು ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ಏನಾದರೂ ಸಾಧಿಸಬೇಕು ಎಂದಾಗ ವಯಸ್ಸು ಅನ್ನುವುದು ಕೇವಲ ಸಂಖ್ಯೆ ಎಂಬುದು ಈ ಸಿನಿಮಾ ಸಾಬೀತು ಮಾಡುತ್ತದೆ’ ಎಂದು ಕೆಲವರು ಹೇಳಿದ್ದಾರೆ. ಅನೇಕರು ಅನುಪಮ್ ಖೇರ್ ಅವರ ನಟನೆಯನ್ನು ಬಾಯ್ತುಂಬ ಹೊಗಳಿದ್ದಾರೆ.  ಇನ್ನೂ ಕೆಲವರು ಸಿನಿಮಾದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಅನುಪಮ್ ಖೇರ್ ನಟನಾ ಕ್ಷೇತ್ರಕ್ಕೆ ಕಾಲಿಟ್ಟು 40 ವರ್ಷಗಳಾಗಿವೆ. ಅವರು ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದಲ್ಲಿ ಎಎನ್ ರಾವ್ ಹೆಸರಿನ ಪಾತ್ರ ಮಾಡಿದ್ದರು.

ಇದನ್ನೂ ಓದಿ: 68ನೇ ವಯಸ್ಸಿಗೆ ಈಜು ಕಲಿತ ಅನುಪಮ್ ಖೇರ್; ಈ ವಯಸ್ಸಲ್ಲಿ ಚಾಲೆಂಜ್ ಸ್ವೀಕರಿಸೋದೇಕೆ?

ಅಂದಹಾಗೆ ‘ವಿಜಯ್ 69′ ಚಿತ್ರಕ್ಕಾಗಿ ಅವರು ಈಜು ಕಲಿತಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘68ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇನೆ. ನಂತರ ವಯಸ್ಸು ಕೇವಲ ಸಂಖ್ಯೆ ಎಂದು ನಾನು ಅರಿತುಕೊಂಡೆ’ ಎಂದಿದ್ದರು ಅವರು. ಈ ಚಿತ್ರದಲ್ಲಿ ಚಂಕಿ ಪಾಂಡೆ, ಮಿಹಿರ್ ಅಹುಜಾ, ಅದ್ರಿಜಾ ಸಿನ್ಹಾ ಮುಂತಾದ ಹಲವು ನಟರು ಈ ಚಿತ್ರದಲ್ಲಿದ್ದು, ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು