AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ‘ವಿಜಯ್ 69′ ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69' ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ.

ಹೇಗಿದೆ ‘ವಿಜಯ್ 69' ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ
ಅನುಪಮ್ ಖೇರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 09, 2024 | 2:28 PM

ಅನುಪಮ್ ಖೇರ್ ಅವರಿಗೆ ಈಗ 69 ವರ್ಷ ವಯಸ್ಸು. ಅವರ ನಟನೆಯ ‘ದಿ ಸಿಗ್ನೇಚರ್’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಈಗ ಅವರ ನಟನೆಯ ‘ವಿಜಯ್ 69′ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್​ಗೆ ಆಗಿದೆ. ಇದರಲ್ಲಿ ಅನುಪಮ್ ಖೇರ್ ಅವರು ‘ವಿಜಯ್ ಮ್ಯಾಥ್ಯೂ’ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದಾರೆ.

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69′ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಇದನ್ನು ಮನೀಶ್ ಶರ್ಮಾ ಹಾಗೂ ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರವನ್ನು ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ಏನಾದರೂ ಸಾಧಿಸಬೇಕು ಎಂದಾಗ ವಯಸ್ಸು ಅನ್ನುವುದು ಕೇವಲ ಸಂಖ್ಯೆ ಎಂಬುದು ಈ ಸಿನಿಮಾ ಸಾಬೀತು ಮಾಡುತ್ತದೆ’ ಎಂದು ಕೆಲವರು ಹೇಳಿದ್ದಾರೆ. ಅನೇಕರು ಅನುಪಮ್ ಖೇರ್ ಅವರ ನಟನೆಯನ್ನು ಬಾಯ್ತುಂಬ ಹೊಗಳಿದ್ದಾರೆ.  ಇನ್ನೂ ಕೆಲವರು ಸಿನಿಮಾದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಅನುಪಮ್ ಖೇರ್ ನಟನಾ ಕ್ಷೇತ್ರಕ್ಕೆ ಕಾಲಿಟ್ಟು 40 ವರ್ಷಗಳಾಗಿವೆ. ಅವರು ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದಲ್ಲಿ ಎಎನ್ ರಾವ್ ಹೆಸರಿನ ಪಾತ್ರ ಮಾಡಿದ್ದರು.

ಇದನ್ನೂ ಓದಿ: 68ನೇ ವಯಸ್ಸಿಗೆ ಈಜು ಕಲಿತ ಅನುಪಮ್ ಖೇರ್; ಈ ವಯಸ್ಸಲ್ಲಿ ಚಾಲೆಂಜ್ ಸ್ವೀಕರಿಸೋದೇಕೆ?

ಅಂದಹಾಗೆ ‘ವಿಜಯ್ 69′ ಚಿತ್ರಕ್ಕಾಗಿ ಅವರು ಈಜು ಕಲಿತಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘68ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇನೆ. ನಂತರ ವಯಸ್ಸು ಕೇವಲ ಸಂಖ್ಯೆ ಎಂದು ನಾನು ಅರಿತುಕೊಂಡೆ’ ಎಂದಿದ್ದರು ಅವರು. ಈ ಚಿತ್ರದಲ್ಲಿ ಚಂಕಿ ಪಾಂಡೆ, ಮಿಹಿರ್ ಅಹುಜಾ, ಅದ್ರಿಜಾ ಸಿನ್ಹಾ ಮುಂತಾದ ಹಲವು ನಟರು ಈ ಚಿತ್ರದಲ್ಲಿದ್ದು, ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ