AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ‘ವಿಜಯ್ 69′ ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69' ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ.

ಹೇಗಿದೆ ‘ವಿಜಯ್ 69' ಸಿನಿಮಾ? ಅನುಪಮ್ ಖೇರ್ ನಟನೆಗೆ ಮೆಚ್ಚುಗೆ
ಅನುಪಮ್ ಖೇರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 09, 2024 | 2:28 PM

Share

ಅನುಪಮ್ ಖೇರ್ ಅವರಿಗೆ ಈಗ 69 ವರ್ಷ ವಯಸ್ಸು. ಅವರ ನಟನೆಯ ‘ದಿ ಸಿಗ್ನೇಚರ್’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಈಗ ಅವರ ನಟನೆಯ ‘ವಿಜಯ್ 69′ ಸಿನಿಮಾ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್​ಗೆ ಆಗಿದೆ. ಇದರಲ್ಲಿ ಅನುಪಮ್ ಖೇರ್ ಅವರು ‘ವಿಜಯ್ ಮ್ಯಾಥ್ಯೂ’ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದಾರೆ.

ಅಕ್ಷಯ್ ರಾಯ್ ಅವರ ನಿರ್ದೇಶನದಲ್ಲಿ ‘ವಿಜಯ್ 69′ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾ ನವೆಂಬರ್ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಕಂಡಿದೆ. ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್​  ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಇದನ್ನು ಮನೀಶ್ ಶರ್ಮಾ ಹಾಗೂ ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರವನ್ನು ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ಏನಾದರೂ ಸಾಧಿಸಬೇಕು ಎಂದಾಗ ವಯಸ್ಸು ಅನ್ನುವುದು ಕೇವಲ ಸಂಖ್ಯೆ ಎಂಬುದು ಈ ಸಿನಿಮಾ ಸಾಬೀತು ಮಾಡುತ್ತದೆ’ ಎಂದು ಕೆಲವರು ಹೇಳಿದ್ದಾರೆ. ಅನೇಕರು ಅನುಪಮ್ ಖೇರ್ ಅವರ ನಟನೆಯನ್ನು ಬಾಯ್ತುಂಬ ಹೊಗಳಿದ್ದಾರೆ.  ಇನ್ನೂ ಕೆಲವರು ಸಿನಿಮಾದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಅನುಪಮ್ ಖೇರ್ ನಟನಾ ಕ್ಷೇತ್ರಕ್ಕೆ ಕಾಲಿಟ್ಟು 40 ವರ್ಷಗಳಾಗಿವೆ. ಅವರು ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾದಲ್ಲಿ ಎಎನ್ ರಾವ್ ಹೆಸರಿನ ಪಾತ್ರ ಮಾಡಿದ್ದರು.

ಇದನ್ನೂ ಓದಿ: 68ನೇ ವಯಸ್ಸಿಗೆ ಈಜು ಕಲಿತ ಅನುಪಮ್ ಖೇರ್; ಈ ವಯಸ್ಸಲ್ಲಿ ಚಾಲೆಂಜ್ ಸ್ವೀಕರಿಸೋದೇಕೆ?

ಅಂದಹಾಗೆ ‘ವಿಜಯ್ 69′ ಚಿತ್ರಕ್ಕಾಗಿ ಅವರು ಈಜು ಕಲಿತಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ‘68ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇನೆ. ನಂತರ ವಯಸ್ಸು ಕೇವಲ ಸಂಖ್ಯೆ ಎಂದು ನಾನು ಅರಿತುಕೊಂಡೆ’ ಎಂದಿದ್ದರು ಅವರು. ಈ ಚಿತ್ರದಲ್ಲಿ ಚಂಕಿ ಪಾಂಡೆ, ಮಿಹಿರ್ ಅಹುಜಾ, ಅದ್ರಿಜಾ ಸಿನ್ಹಾ ಮುಂತಾದ ಹಲವು ನಟರು ಈ ಚಿತ್ರದಲ್ಲಿದ್ದು, ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ