AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ರವೀಂದ್ರನಾಥ್​ ಟ್ಯಾಗೋರ್​ ಪಾತ್ರದಲ್ಲಿ ಅನುಪಮ್​ ಖೇರ್​; ‘ದಿ ಕಾಶ್ಮೀರ್​ ಫೈಲ್ಸ್​’ ನಟನ 538ನೇ ಸಿನಿಮಾ ಇದು

Rabindranath Tagore: ‘ನನ್ನ 538ನೇ ಸಿನಿಮಾದಲ್ಲಿ ಗುರುದೇವ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರ ಮಾಡಲು ಖುಷಿ ಆಗುತ್ತಿದೆ’ ಎಂದು ಅನುಪಮ್​ ಖೇರ್​ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಫಸ್ಟ್​ ಲುಕ್​ ವೈರಲ್​ ಆಗಿದೆ.

Anupam Kher: ರವೀಂದ್ರನಾಥ್​ ಟ್ಯಾಗೋರ್​ ಪಾತ್ರದಲ್ಲಿ ಅನುಪಮ್​ ಖೇರ್​; ‘ದಿ ಕಾಶ್ಮೀರ್​ ಫೈಲ್ಸ್​’ ನಟನ 538ನೇ ಸಿನಿಮಾ ಇದು
ಅನುಪಮ್​ ಖೇರ್
ಮದನ್​ ಕುಮಾರ್​
|

Updated on:Jul 08, 2023 | 4:52 PM

Share

ನಟ ಅನುಪಮ್​ ಖೇರ್​ (Anupam Kher) ಅವರು ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಹೊಂದಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’  (The Kashmir Files) ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಿತು. ಆ ಸಿನಿಮಾದಲ್ಲಿ ಕಾಶ್ಮೀರಿ ಪಂಡಿತನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈಗ ಅನುಪಮ್​ ಖೇರ್​ ಅವರಿಗೆ 68 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ತುಂಬ ಆಕ್ಟೀವ್​ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರ ನೂತನ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ರವೀಂದ್ರನಾಥ್​ ಟ್ಯಾಗೋರ್ (Rabindranath Tagore)​ ಪಾತ್ರದಲ್ಲಿ ಅನುಪಮ್​ ಖೇರ್​ ಅಭಿನಯಿಸುತ್ತಿದ್ದಾರೆ ಎಂಬುದು ವಿಶೇಷ. ಇದು ಅವರು ನಟಿಸುತ್ತಿರುವ 583ನೇ ಸಿನಿಮಾ ಆಗಲಿದೆ.

ಬೆಂಗಾಲಿ ಕವಿ, ಲೇಖಕ, ತತ್ವಜಾನಿ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರವನ್ನು ಮಾಡುವುದು ಎಂದರೆ ಸುಲಭದ ಮಾತಲ್ಲ. ಆ ಪಾತ್ರಕ್ಕಾಗಿ ಅನುಪಮ್​ ಖೇರ್​ ಆಯ್ಕೆ ಆಗಿದ್ದಾರೆ. ಈ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಅವರು ಸಖತ್​ ಖುಷಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಫಸ್ಟ್​ ಲುಕ್​ ಪೋಸ್ಟರ್​ ನೋಡಿದ ಅಭಿಮಾನಿಗಳಿಗೆ ಅಚ್ಚರಿ ಎನಿಸಿದೆ. ‘ಇದು ನೀವು ಅಂತ ಕಂಡು ಹಿಡಿಯಲು ಸಾಧ್ಯವೇ ಆಗುತ್ತಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ಅಂದಹಾಗೆ, ಈ ಸಿನಿಮಾದ ಶೀರ್ಷಿಕೆ ಏನು? ಪಾತ್ರವರ್ಗದಲ್ಲಿ ಬೇರೆ ಯಾರೆಲ್ಲ ಇರಲಿದ್ದಾರೆ? ನಿರ್ದೇಶನ ಮಾಡೋದು ಯಾರು? ಯಾವ ಬ್ಯಾನರ್​ನಲ್ಲಿ ಸಿನಿಮಾ ನಿರ್ಮಾಣ ಆಗಲಿದೆ? ಈ ಯಾವ ಪ್ರಶ್ನೆಗಳಿಗೂ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಕೇವಲ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಅನುಪಮ್​ ಖೇರ್​ ಅವರು ಕುತೂಹಲ ಮೂಡಿಸಿದ್ದಾರೆ. 2019ರಲ್ಲಿ ಬಿಡುಗಡೆಯಾದ ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಸಿನಿಮಾದಲ್ಲಿ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಪಾತ್ರಕ್ಕೆ ಅನುಪಮ್​ ಖೇರ್​ ಬಣ್ಣ ಹಚ್ಚಿದ್ದರು. ಈಗ ಮತ್ತೊಂದು ರಿಯಲ್​ ಲೈಫ್​ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿರುವುಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: Vijay 69: ಅನುಪಮ್​ ಖೇರ್​ ಹೊಸ ಚಿತ್ರಕ್ಕೆ ‘ವಿಜಯ್​ 69’ ಶೀರ್ಷಿಕೆ; ಇಂಥ ಟೈಟಲ್​ ಇಟ್ಟಿದ್ದಕ್ಕೆ ಇದೆ ಒಂದು ಕಾರಣ

‘ನನ್ನ 538ನೇ ಸಿನಿಮಾದಲ್ಲಿ ಗುರುದೇವ ರವೀಂದ್ರನಾಥ್​ ಟ್ಯಾಗೋರ್​ ಅವರ ಪಾತ್ರ ಮಾಡಲು ಖುಷಿ ಆಗುತ್ತಿದೆ. ಸಮಯ ಬಂದಾಗ ಹೆಚ್ಚಿನ ಮಾಹಿತಿ ಹಂಚಿಕೊಳ್ಳುತ್ತೇನೆ. ತೆರೆಮೇಲೆ ಇಂಥ ಪಾತ್ರ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ’ ಎಂದು ಅನುಪಮ್​ ಖೇರ್​ ಅವರು ಪೋಸ್ಟ್​ ಮಾಡಿದ್ದಾರೆ. ಇದಲ್ಲದೇ, ‘ದಿ ವ್ಯಾಕ್ಸಿನ್​ ವಾರ್​’, ‘ಎಮರ್ಜೆನ್ಸಿ’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:02 pm, Sat, 8 July 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?