AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ಕೋಟಿ ರೂ. ಒಡೆಯನಾದರೂ ಬಾಡಿಗೆ ಮನೆಯಲ್ಲೇ ಇದ್ದಾರೆ ಅನುಪಮ್​ ಖೇರ್; ಕಾರಣವೇನು?

ವಿಜಯ್ 69 ಚಿತ್ರದ ನಟ ಅನುಪಮ್ ಖೇರ್ ಅವರು ಕೋಟ್ಯಾಧಿಪತಿಯಾಗಿದ್ದರೂ ಸ್ವಂತ ಮನೆ ಹೊಂದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಬಾಡಿಗೆ ಮನೆಯಲ್ಲಿ ವಾಸಿಸುವ ಅವರು, ಸ್ವಂತ ಮನೆ ಖರೀದಿಸುವ ಬದಲು ಹಣವನ್ನು ಹೂಡಿಕೆ ಮಾಡುವುದು ಉತ್ತಮ ಎಂದು ಹೇಳಿದ್ದಾರೆ. ತಮ್ಮ ತಾಯಿಗೆ ಮಾತ್ರ ಶಿಮ್ಲಾದಲ್ಲಿ ಮನೆ ಖರೀದಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ನೂರಾರು ಕೋಟಿ ರೂ. ಒಡೆಯನಾದರೂ ಬಾಡಿಗೆ ಮನೆಯಲ್ಲೇ ಇದ್ದಾರೆ ಅನುಪಮ್​ ಖೇರ್; ಕಾರಣವೇನು?
ಅನುಪಮ್ ಖೇರ್
ರಾಜೇಶ್ ದುಗ್ಗುಮನೆ
|

Updated on: Nov 11, 2024 | 2:53 PM

Share

ಅನುಪಮ್ ಖೇರ್ ಅವರ ನಟನೆಯ ‘ವಿಜಯ್ 69’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಅವರು ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಆದರೆ, ಅವರು ಈವರೆಗೆ ಸ್ವಂತ ಮನೆ ಹೊಂದಿಲ್ಲ. ಈ ವಿಚಾರವನ್ನು ಸ್ವತಃ ಅನುಪಮ್ ಖೇರ್ ಅವರೇ ರಿವೀಲ್ ಮಾಡಿದ್ದಾರೆ. ಸ್ವಂತ ಮನೆ ಹೊಂದದೇ ಇರಲು ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಇದನ್ನು ಕೆಲವರು ಒಪ್ಪಿಕೊಂಡಿದ್ದಾರೆ.

ಅನುಪಮ್ ಖೇರ್ ಅವರು ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದು, ಇದು ಬಾಡಿಗೆಯದ್ದು. ಈ ಬಗ್ಗೆ ಮಾತನಾಡಿರುವ ಅವರು, ‘ನಾನು ಅಪಾರ್ಟ್​​ಮೆಂಟ್​ನ ಬಾಡಿಗೆ ಪಡೆದು ಅಲ್ಲಿ ವಾಸವಾಗಿದ್ದೇನೆ. ನಾನು ಸ್ವಂತ ಮನೆ ಹೊಂದಬಾರದು ಎಂದು ನಿರ್ಧರಿಸಿದೆ. ಯಾರಿಗಾಗಿ ಈ ಸ್ವಂತ ಮನೆ? ಪ್ರತಿ ತಿಂಗಳು ಬಾಡಿಗೆ ಕಟ್ಟಿ ಹಾಯಾಗಿ ವಾಸ ಮಾಡಿ. ನೀವು ಮನೆ ಖರೀದಿ ಮಾಡಬೇಕು ಎಂದು ತೆಗೆದಿಟ್ಟ ಹಣವನ್ನು ಬ್ಯಾಂಕ್​ನಲ್ಲಿ ಇಡಿ. ಅದರಿಂದ ಬಾಡಿಗೆ ಕಟ್ಟಿ’ ಎಂದಿದ್ದಾರೆ ಅವರು.

‘ನೀವು ಹೋದ ಬಳಿಕ ನಿಮ್ಮ ಮನೆಗಾಗಿ ನಿಮ್ಮವರು ಜಗಳ ಆಡಬಹುದು. ಅದರ ಬದಲು ಹಣವನ್ನು ಹಂಚುವುದು ಉತ್ತಮ. ನಾನು ಶಿಮ್ಲಾದಲ್ಲಿ ನನ್ನ ತಾಯಿಗಾಗಿ ಒಂದು ಮನೆಯನ್ನು ಖರೀದಿಸಿದೆ. ಏಳು ವರ್ಷಗಳ ಹಿಂದೆ ನಾನು ನನ್ನ ತಾಯಿಗೆ ಏನು ಬೇಕು ಎಂದು ಕೇಳಿದೆ. ಮನೆ ಬೇಕು ಎಂದು ಹೇಳಿದರು. ಹೀಗಾಗಿ ಮನೆ ಖರೀದಿಸಿದೆ. ನನ್ನ ತಂದೆ ಮೃತಪಟ್ಟ ಬಳಿಕ ಅವರು ಅಲ್ಲಿ ವಾಸವಾಗಿರಲಿಲ್ಲ’ ಎಂದಿದ್ದಾರೆ ಅನುಪಮ್ ಖೇರ್.

ಇದನ್ನೂ ಓದಿ: ‘ವಿಜಯ್ 69’ ಚಿತ್ರಕ್ಕೆ ಅನುಪಮ್ ಖೇರ್ ಹಾಕಿದ ಶ್ರಮ ಕೇಳಿ ಮೆಚ್ಚುಗೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ

‘ಒಂದು ಬೆಡ್​ರೂಂ ಮನೆ ಬೇಕು ಎಂದರು. ನಾನು ಎಂಟು ಬೆಡ್​ರೂಂ ಮನೆ ಕೊಡಿಸಿದೆ. ಹೆಚ್ಚಿನ ಕರೆಂಟ್​ ಬಿಲ್ ಬರುತ್ತದೆ ಎಂದು ಅವರು ಅಲ್ಲಿಗೆ ಹೋದಾಗಲೆಲ್ಲ ಲೈಟ್​ನ ಆರಿಸಿ ಕುಳಿತುಕೊಳ್ಳುತ್ತಾರೆ. ವಿದ್ಯುತ್ ಬಿಲ್ ಹೆಚ್ಚು ಬರಹುದು’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ