AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ

ಅನುರಾಗ್ ಕಶ್ಯಪ್, ಬ್ರಾಹ್ಮಣರ ಬಗ್ಗೆ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ ಬ್ರಾಹ್ಮಣರ ಸಂಘವೊಂದು. ಹಲವು ಬ್ರಾಹ್ಮಣ ಸಂಘಟನೆಗಳು ಈ ವಿಷಯದಲ್ಲಿ ಆನ್‌ಲೈನ್ ಸಭೆ ನಡೆಸಿ ಕಶ್ಯಪ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಬ್ರಾಹ್ಮಣ ಸಮುದಾಯದ ತ್ಯಾಗ ಮತ್ತು ಕೊಡುಗೆಗಳನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿವೆ.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ
Anurag Kashyap
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 20, 2025 | 4:39 PM

Share

ಬ್ರಾಹ್ಮಣ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ನಂತರ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ವಿರುದ್ಧ ಚಾಣಕ್ಯ ಸೇನಾ ಶನಿವಾರ ಹೇಳಿಕೆ ನೀಡಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಚಾಣಕ್ಯ ಸೇನಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದೆ ಎಂದಿದೆ. ಅನುರಾಗ್ ಅವರ ಹೇಳಿಕೆಗಳ ವಿರುದ್ಧ ಹಲವಾರು ಬ್ರಾಹ್ಮಣ ಸಂಘಟನೆಗಳು ಶನಿವಾರ ಆನ್‌ಲೈನ್ ಸಭೆ ನಡೆಸಿದವು. ಇದರಲ್ಲಿ ಚಾಣಕ್ಯ ಸೇನೆ, ಅಖಿಲ ಬ್ರಾಹ್ಮಣ ಮಹಾಸಭಾ, ಬ್ರಾಹ್ಮಣ ಸೇವಾ ಸಂಘ, ಅಖಿಲ ಭಾರತ ಬ್ರಾಹ್ಮಣ ಮಹಾಸಭಾ, ವಿಶ್ವ ಬ್ರಾಹ್ಮಣ ಪರಿಷತ್ ಮತ್ತು ಅಖೀರ್ ಭಾರತೀಯ ಬ್ರಾಹ್ಮಣ ಸಂಘ ಸೇರಿವೆ. ಸರ್ವ ಬ್ರಾಹ್ಮಣ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಚಾಣಕ್ಯ ಸೇನೆಯ ಮುಖ್ಯ ಪೋಷಕರಾದ ಪಂಡಿತ್ ಸುರೇಶ್ ಮಿಶ್ರಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

‘ಬ್ರಾಹ್ಮಣರ ಬಗ್ಗೆ ಆಧಾರರಹಿತ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜವನ್ನು ವಿಭಜಿಸುತ್ತಿರುವ ಅನುರಾಗ್ ಕಶ್ಯಪ್ ಅವರಂತಹ ಜನರಿಗೆ ಪಾಠ ಕಲಿಸಬೇಕಾಗಿದೆ. ಈ ದೇಶಕ್ಕಾಗಿ ಬ್ರಾಹ್ಮಣ ಸಮುದಾಯ ತ್ಯಾಗ ಮಾಡಿಲ್ಲವೇ? ಎಲ್ಲರ ಕಲ್ಯಾಣಕ್ಕಾಗಿ ಮಾತನಾಡುವ ಮತ್ತು ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಬ್ರಾಹ್ಮಣರ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಪಾಠ ಕಲಿಸಬೇಕಾಗಿದೆ’ ಎಂದು ಮಿಶ್ರಾ ಅಸಮಾಧಾನ ವ್ಯಕ್ತಪಡಿಸಿದರು.

‘ಸಮಾಜದಲ್ಲಿ ಪರಸ್ಪರ ಗೌರವವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಇಂತಹ ವಿನಾಶಕಾರಿ ಜನರನ್ನು ಬಲವಾಗಿ ವಿರೋಧಿಸಬೇಕು. ಸರ್ವಜನ ಹಿತಾಯ ಮತ್ತು ಸರ್ವಜನ ಸುಖಾಯ ಎಂಬ ಮನೋಭಾವದಿಂದ ಕೆಲಸ ಮಾಡುವ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಇಂತಹ ಜನರನ್ನು ಅವಮಾನಿಸಬೇಕು, ಇದರಿಂದ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುವುದಿಲ್ಲ’ ಎಂದು ಮಿಶ್ರಾ ಹೇಳಿದರು.

ಇದನ್ನೂ ಓದಿ:ಬ್ರಾಹ್ಮಣರ ಬಗ್ಗೆ ಹೇಳಿಕೆ, ಕ್ಷಮೆ ಕೇಳಿದ ಅನುರಾಗ್ ಕಶ್ಯಪ್

ಜೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಜೀವನ ಆಧರಿಸಿದ ‘ಫುಲೆ’ ಸಿನಿಮಾಕ್ಕೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಈ ಕಾರಣದಿಂದ ಸೆನ್ಸಾರ್ ಮಂಡಳಿ ಸಿನಿಮಾಗೆ ವಿರೋಧ ಹೊರಹಾಕಿದೆ. ಅಲ್ಲದೆ, ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಇದೇ ಕಾರಣಕ್ಕೆ ಅನುರಾಗ್ ಕಶ್ಯಪ್ ಸಿಟ್ಟಾಗಿದ್ದು ಸಿಬಿಎಫ್​ಸಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುವಾಗ, ‘ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಏನಿವಾಗ’ ಎಂದು ಅನುರಾಗ್ ಕಶ್ಯಪ್ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!