AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ

ಅನುರಾಗ್ ಕಶ್ಯಪ್, ಬ್ರಾಹ್ಮಣರ ಬಗ್ಗೆ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ ಬ್ರಾಹ್ಮಣರ ಸಂಘವೊಂದು. ಹಲವು ಬ್ರಾಹ್ಮಣ ಸಂಘಟನೆಗಳು ಈ ವಿಷಯದಲ್ಲಿ ಆನ್‌ಲೈನ್ ಸಭೆ ನಡೆಸಿ ಕಶ್ಯಪ್ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಬ್ರಾಹ್ಮಣ ಸಮುದಾಯದ ತ್ಯಾಗ ಮತ್ತು ಕೊಡುಗೆಗಳನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿವೆ.

ಅನುರಾಗ್ ಕಶ್ಯಪ್ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ
Anurag Kashyap
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Apr 20, 2025 | 4:39 PM

ಬ್ರಾಹ್ಮಣ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ನಂತರ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ವಿರುದ್ಧ ಚಾಣಕ್ಯ ಸೇನಾ ಶನಿವಾರ ಹೇಳಿಕೆ ನೀಡಿದೆ. ಅವರ ಮುಖಕ್ಕೆ ಕಪ್ಪು ಬಣ್ಣ ಬಳಿದವರಿಗೆ ಚಾಣಕ್ಯ ಸೇನಾ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಿದೆ ಎಂದಿದೆ. ಅನುರಾಗ್ ಅವರ ಹೇಳಿಕೆಗಳ ವಿರುದ್ಧ ಹಲವಾರು ಬ್ರಾಹ್ಮಣ ಸಂಘಟನೆಗಳು ಶನಿವಾರ ಆನ್‌ಲೈನ್ ಸಭೆ ನಡೆಸಿದವು. ಇದರಲ್ಲಿ ಚಾಣಕ್ಯ ಸೇನೆ, ಅಖಿಲ ಬ್ರಾಹ್ಮಣ ಮಹಾಸಭಾ, ಬ್ರಾಹ್ಮಣ ಸೇವಾ ಸಂಘ, ಅಖಿಲ ಭಾರತ ಬ್ರಾಹ್ಮಣ ಮಹಾಸಭಾ, ವಿಶ್ವ ಬ್ರಾಹ್ಮಣ ಪರಿಷತ್ ಮತ್ತು ಅಖೀರ್ ಭಾರತೀಯ ಬ್ರಾಹ್ಮಣ ಸಂಘ ಸೇರಿವೆ. ಸರ್ವ ಬ್ರಾಹ್ಮಣ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಚಾಣಕ್ಯ ಸೇನೆಯ ಮುಖ್ಯ ಪೋಷಕರಾದ ಪಂಡಿತ್ ಸುರೇಶ್ ಮಿಶ್ರಾ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

‘ಬ್ರಾಹ್ಮಣರ ಬಗ್ಗೆ ಆಧಾರರಹಿತ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜವನ್ನು ವಿಭಜಿಸುತ್ತಿರುವ ಅನುರಾಗ್ ಕಶ್ಯಪ್ ಅವರಂತಹ ಜನರಿಗೆ ಪಾಠ ಕಲಿಸಬೇಕಾಗಿದೆ. ಈ ದೇಶಕ್ಕಾಗಿ ಬ್ರಾಹ್ಮಣ ಸಮುದಾಯ ತ್ಯಾಗ ಮಾಡಿಲ್ಲವೇ? ಎಲ್ಲರ ಕಲ್ಯಾಣಕ್ಕಾಗಿ ಮಾತನಾಡುವ ಮತ್ತು ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಬ್ರಾಹ್ಮಣರ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಪಾಠ ಕಲಿಸಬೇಕಾಗಿದೆ’ ಎಂದು ಮಿಶ್ರಾ ಅಸಮಾಧಾನ ವ್ಯಕ್ತಪಡಿಸಿದರು.

‘ಸಮಾಜದಲ್ಲಿ ಪರಸ್ಪರ ಗೌರವವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಇಂತಹ ವಿನಾಶಕಾರಿ ಜನರನ್ನು ಬಲವಾಗಿ ವಿರೋಧಿಸಬೇಕು. ಸರ್ವಜನ ಹಿತಾಯ ಮತ್ತು ಸರ್ವಜನ ಸುಖಾಯ ಎಂಬ ಮನೋಭಾವದಿಂದ ಕೆಲಸ ಮಾಡುವ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಇಂತಹ ಜನರನ್ನು ಅವಮಾನಿಸಬೇಕು, ಇದರಿಂದ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುವುದಿಲ್ಲ’ ಎಂದು ಮಿಶ್ರಾ ಹೇಳಿದರು.

ಇದನ್ನೂ ಓದಿ:ಬ್ರಾಹ್ಮಣರ ಬಗ್ಗೆ ಹೇಳಿಕೆ, ಕ್ಷಮೆ ಕೇಳಿದ ಅನುರಾಗ್ ಕಶ್ಯಪ್

ಜೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಜೀವನ ಆಧರಿಸಿದ ‘ಫುಲೆ’ ಸಿನಿಮಾಕ್ಕೆ ಬ್ರಾಹ್ಮಣ ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಈ ಕಾರಣದಿಂದ ಸೆನ್ಸಾರ್ ಮಂಡಳಿ ಸಿನಿಮಾಗೆ ವಿರೋಧ ಹೊರಹಾಕಿದೆ. ಅಲ್ಲದೆ, ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಇದೇ ಕಾರಣಕ್ಕೆ ಅನುರಾಗ್ ಕಶ್ಯಪ್ ಸಿಟ್ಟಾಗಿದ್ದು ಸಿಬಿಎಫ್​ಸಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡುವಾಗ, ‘ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಏನಿವಾಗ’ ಎಂದು ಅನುರಾಗ್ ಕಶ್ಯಪ್ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ