AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

‘ವಮಿಕಾಳ ಚಿತ್ರಗಳು/ವಿಡಿಯೋಗಳನ್ನು ಪ್ರಕಟಿಸದಿದ್ದಕ್ಕಾಗಿ ನಾವು ಭಾರತೀಯ ಪಾಪರಾಜಿಗಳಿಗೆ ಮತ್ತು ಮಾಧ್ಯಮದವರಿಗೆ ಕೃತಜ್ಞರಾಗಿರುತ್ತೇವೆ’ ಎಂದಿದ್ದಾರೆ ಅನುಷ್ಕಾ.

ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ
ವಿರಾಟ್​-ಅನುಷ್ಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 19, 2021 | 10:08 PM

ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್​ ಕೊಹ್ಲಿ (Virat Kohli) ದಂಪತಿಯ ಮಗು ವಮಿಕಾಗೆ (Vamika) ಒಂದು ವರ್ಷ ತುಂಬುತ್ತಾ ಬಂದಿದೆ. ಅಚ್ಚರಿ ಎಂದರೆ ಒಂದು ವರ್ಷದ ಅವಧಿಯಲ್ಲಿ ಅವರು ಎಲ್ಲಿಯೂ ಮಗುವಿನ ಮುಖವನ್ನು ತೋರಿಸಿಲ್ಲ. ಅವಳಿಗೆ ಅನಗತ್ಯ ಪ್ರಚಾರ ನೀಡುವುದು ಬೇಡ ಹಾಗೂ ಸೋಶಿಯಲ್​ ಮೀಡಿಯಾದಿಂದ ಆಕೆಯನ್ನು ದೂರವೇ ಇಡಬೇಕು ಎಂಬ ನಿರ್ಧಾರದ ಹಿನ್ನೆಲೆಯಲ್ಲಿ ದಂಪತಿ ಆಕೆಯ ಫೋಟೋ ಹಂಚಿಕೊಂಡಿಲ್ಲ. ಇದನ್ನು ಮಾಧ್ಯಮದವರು ಹಾಗೂ ಪಾಪರಾಜಿಗಳು ಬೆಂಬಲಿಸುತ್ತಿದ್ದಾರೆ. ಆದಾಗ್ಯೂ ಕೆಲವರು ವಮಿಕಾಳ ಮುಖವನ್ನು ತೋರಿಸುವಂತೆ ಮನವಿ ಇಡುತ್ತಿದ್ದಾರೆ. ಅವರಿಗೆ ಅನುಷ್ಕಾ ವಿಶೇಷ ಪತ್ರ ಬರೆದಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಸಾಲುಗಳನ್ನು ಬರೆದುಕೊಂಡಿರುವ ಅನುಷ್ಕಾ, ‘ವಮಿಕಾಳ ಚಿತ್ರಗಳು/ವಿಡಿಯೋಗಳನ್ನು ಪ್ರಕಟಿಸದಿದ್ದಕ್ಕಾಗಿ ನಾವು ಭಾರತೀಯ ಪಾಪರಾಜಿಗಳಿಗೆ ಮತ್ತು ಮಾಧ್ಯಮದವರಿಗೆ ಕೃತಜ್ಞರಾಗಿರುತ್ತೇವೆ’ ಎಂದಿದ್ದಾರೆ.

‘ನಮ್ಮ ಮಗುವಿಗೆ ಖಾಸಗಿತನ ನೀಡಿ. ಸೋಶಿಯಲ್​ ಮೀಡಿಯಾದಿಂದ ಮುಕ್ತವಾಗಿ ಜೀವನವನ್ನು ನಡೆಸಲು ಅವಳಿಗೆ ಅವಕಾಶವನ್ನು ಕೊಡಿ. ಅವಳು ಬೆಳೆದಂತೆ ನಾವು ಅವಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ಹೀಗಾಗಿ ನಿಮ್ಮ ಬೆಂಬಲದ ಅಗತ್ಯವಿದೆ. ಅವಳ ಚಿತ್ರಗಳನ್ನು ಪೋಸ್ಟ್ ಮಾಡದಿರಲು ಕೋರುತ್ತೇವೆ. ನಮ್ಮ ಫ್ಯಾನ್​ ಕ್ಲಬ್‌ಗಳು ಮತ್ತು ಸೋಶಿಯಲ್​ ಮೀಡಿಯಾ ಬಳಕೆದಾರರಿಗೆ ವಿಶೇಷ ಧನ್ಯವಾದಗಳು’ ಎಂದು ಅನುಷ್ಕಾ ಬರೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆಡಲು ವಿರಾಟ್​ ಕೊಹ್ಲಿ ಆ ದೇಶಕ್ಕೆ ತೆರಳಿದ್ದಾರೆ. ಅನುಷ್ಕಾ ಶರ್ಮಾ ಕೂಡ ವಿರಾಟ್​ ಜತೆಯಲ್ಲಿ ಇದ್ದಾರೆ. ವಿಮಾನ ನಿಲ್ದಾಣದಲ್ಲಿ ವಿರಾಟ್​ ಮಗುವನ್ನು ಕರೆದುಕೊಂಡು ಬಂದಿದ್ದರು. ಪಾಪರಾಜಿಗಳು ಫೋಟೋ ತೆಗೆಯೋಕೆ ಮುಂದಾದರು. ಮಗುವಿನ ಫೋಟೋವನ್ನು ತೆಗೆಯದಂತೆ ವಿರಾಟ್​ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪಾಪರಾಜಿಗಳು ಒಪ್ಪಿಗೆ ಸೂಚಿಸಿದ್ದರು.

ಅನುಷ್ಕಾ ತಮ್ಮ ಸಂಪೂರ್ಣ ಸಮಯವನ್ನು ಮಗುವಿಗೆ ನೀಡುತ್ತಿದ್ದಾರೆ. ಅವರು ನಟನೆಯಿಂದ ದೂರ ಉಳಿದು ಕೆಲವು ವರ್ಷಗಳು ಕಳೆದಿವೆ. ಸಿನಿಮಾ ನಿರ್ಮಾಣದತ್ತ ಅವರು ಹೆಚ್ಚು ಗಮನಹರಿಸುತ್ತಿದ್ದಾರೆ. ಅನುಷ್ಕಾ ಮತ್ತೆ ನಟನೆಗೆ ಮರಳಬೇಕು ಎಂಬುದು ಅನೇಕರ ಆಶಯ.

ಇದನ್ನೂ ಓದಿ: IND vs SA: ವಿರಾಟ್ ಶತಕದ ಬರ ನೀಗಲಿದೆ; ಕಿಂಗ್ ಕೊಹ್ಲಿಗೆ ಬ್ಯಾಟಿಂಗ್ ಪಾಠ ಮಾಡಿದ ಗುರು ದ್ರಾವಿಡ್

ವಿರಾಟ್​- ಅನುಷ್ಕಾ ಮನೆಯ ನೆರೆಮನೆಯವರಾಗಲಿದ್ದಾರೆ ಕತ್ರಿನಾ ಕೈಫ್​ – ವಿಕ್ಕಿ ಕೌಶಲ್​

Published On - 8:33 pm, Sun, 19 December 21

ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ