AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅನುಷ್ಕಾ ಶರ್ಮಾ-ವಿರಾಟ್ ದಂಪತಿಯಿಂದ ಪೂಜೆ; ವಿಡಿಯೋ ವೈರಲ್

ಅನುಷ್ಕಾ ಅವರು ಪಿಂಕ್​ ಬಣ್ಣದ ಸಲ್ವಾರ್ ಕಮೀಜ್ ಧರಿಸಿದ್ದಾರೆ. ವಿರಾಟ್ ಅವರು ಸಾಂಪ್ರದಾಯಿಕ ಧೋತಿ ತೊಟ್ಟಿದ್ದಾರೆ. ವಿರಾಟ್ ಹಾಗೂ ಅನುಷ್ಕಾ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಕೆ ಮಾಡುತ್ತಿರುವುದು ವಿಡಿಯೋದಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Mar 04, 2023 | 12:37 PM

Share

ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ದೇವರ ಸಾನಿಧ್ಯಕ್ಕೆ ಹೆಚ್ಚು ತೆರಳುತ್ತಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ (Mahakaleshwar Jyotirlinga) ದೇವಾಲಯಕ್ಕೆ ಈ ದಂಪತಿ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದನ್ನು ಫ್ಯಾನ್​ ಪೇಜ್​ಗಳು ಶೇರ್ ಮಾಡಿಕೊಳ್ಳುತ್ತಿವೆ. ಈ ದಂಪತಿಗೆ ದೇವರು ಒಳ್ಳೆಯದು ಮಾಡಲಿ ಎಂದು ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

ಅನುಷ್ಕಾ ಅವರು ಪಿಂಕ್​ ಬಣ್ಣದ ಸಲ್ವಾರ್ ಕಮೀಜ್ ಧರಿಸಿದ್ದಾರೆ. ವಿರಾಟ್ ಅವರು ಸಾಂಪ್ರದಾಯಿಕ ಧೋತಿ ತೊಟ್ಟಿದ್ದಾರೆ. ವಿರಾಟ್ ಹಾಗೂ ಅನುಷ್ಕಾ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಕೆ ಮಾಡುತ್ತಿರುವುದು ವಿಡಿಯೋದಲ್ಲಿದೆ. ಉಳಿದ ಭಕ್ತಾದಿಗಳು ಕೂಡ ಇವರ ಜೊತೆ ಇದ್ದರು. ಇತ್ತೀಚೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ನಡುವೆ ಮೂರನೇ ಟೆಸ್ಟ್ ಮ್ಯಾಚ್ ಇಂದೋರ್​ನಲ್ಲಿ ನಡೆಯಿತು. ಇಂದೋರ್ ಹಾಗೂ ಉಜ್ಜಯಿನಿ ಇರೋದು ಮಧ್ಯಪ್ರದೇಶದಲ್ಲಿ. ಹೀಗಾಗಿ, ಕೊಹ್ಲಿ ಅವರು ಅನುಷ್ಕಾ ಜೊತೆ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮಗಳು ವಮಿಕಾ ಜೊತೆ ಹಿಮಾಲಯ ಪ್ರವಾಸ ಮಾಡಿದ್ದರು. ಆ ಸಂದರ್ಭದಲ್ಲಿ ಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈಗ ಅವರು ಮತ್ತೊಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಅನುಷ್ಕಾ ಬಗ್ಗೆ ವಿರಾಟ್ ಮಾತು

‘ಕಳೆದ ಎರಡು ವರ್ಷಗಳಲ್ಲಿ ಹಲವು ಘಟನೆಗಳು ನಡೆದೆವು. ನಾವು ಮಗುವನ್ನು ಪಡೆದೆವು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗ ದೊಡ್ಡದು. ಅನುಷ್ಕಾ ನೋಡಿದಾಗ ನನ್ನಲ್ಲಿರುವ ಸಮಸ್ಯೆಗಳು ಏನೂ ಅಲ್ಲ ಎಂದೆನಿಸುತ್ತದೆ. ನೀವು ಹೇಗಿದ್ದೀರೋ ಹಾಗೆ ನಿಮ್ಮ ಕುಟುಂಬ ಒಪ್ಪಿಕೊಳ್ಳುತ್ತದೆ ಎಂದಾದರೆ ಅವರಿಂದ ಅದಕ್ಕಿಂತ ಹೆಚ್ಚಿನದ್ದನ್ನು ನೀವು ನಿರೀಕ್ಷಿಸಬಾರದು’ ಎಂದು ವಿರಾಟ್​ ಕೊಹ್ಲಿ ಅವರು ಆರ್​ಸಿಬಿ ಪಾಡ್​ಕಾಸ್ಟ್​​ನಲ್ಲಿ ಹೇಳಿದ್ದರು.

‘ಸ್ಫೂರ್ತಿ ಬೇಕು ಎಂದಾಗ ನೀವು ಮೊದಲು ನೋಡೋದು ಮನೆಯ ಸದಸ್ಯರನ್ನು. ಅನುಷ್ಕಾ ನನಗೆ ದೊಡ್ಡ ಸ್ಫೂರ್ತಿ. ನನ್ನ ಜೀವನದಲ್ಲಿ ನಾನು ಬೇರೆಯದೇ ದೃಷ್ಟಿಕೋನ ಹೊಂದಿದ್ದೆ. ಆದರೆ, ಒಬ್ಬರನ್ನು ಪ್ರೀತಿಸಲು ಪ್ರಾರಂಭಿಸಿದರೆ ನಿಮ್ಮೊಳಗೆ ಆ ಬದಲಾವಣೆ ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಜೀವನದ ಬಗ್ಗೆ ಅನುಷ್ಕಾ ದೃಷ್ಟಿಕೋನ ಭಿನ್ನವಾಗಿದೆ. ವಿಷಯಗಳನ್ನು ಒಪ್ಪಿಕೊಳ್ಳಲು ನಾನು ಅವರಿಂದ ಕಲಿತೆ’ ಎಂದಿದ್ದರು ವಿರಾಟ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:55 am, Sat, 4 March 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ