AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಚಿತ್ರದ ನಿರ್ದೇಶಕನ ಬಗ್ಗೆಯೂ ಅನುಷ್ಕಾ ಶರ್ಮಾಗೆ ಗೊತ್ತಿರಲಿಲ್ಲ; ಇದು ನಟಿಯ ಸಿನಿ ಜರ್ನಿ

Anushka Sharma Birthday: ಚಿತ್ರರಂಗದಲ್ಲಿ ಯಶಸ್ಸು ಕಾಣಬೇಕು ಎಂದರೆ ಸಾಕಷ್ಟು ಸ್ಟ್ರಗಲ್ ಮಾಡಬೇಕು. ಆದರೆ, ಅದೃಷ್ಟ ಇದ್ದರೆ ಯಶಸ್ಸು ನಮ್ಮನ್ನೇ ಹುಡುಕಿ ಬರುತ್ತದೆ. ಅನುಷ್ಕಾ ಶರ್ಮಾಗೆ ಆಗಿದ್ದೂ ಇದೆ.

ಮೊದಲ ಚಿತ್ರದ ನಿರ್ದೇಶಕನ ಬಗ್ಗೆಯೂ ಅನುಷ್ಕಾ ಶರ್ಮಾಗೆ ಗೊತ್ತಿರಲಿಲ್ಲ; ಇದು ನಟಿಯ ಸಿನಿ ಜರ್ನಿ
ಅನುಷ್ಕಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on:May 01, 2023 | 9:20 AM

Share

ನಟಿ ಅನುಷ್ಕಾ ಶರ್ಮಾ (Anushka Sharma) ಅವರು ಬಾಲಿವುಡ್​ನ ಬೇಡಿಕೆಯ ಹೀರೋಯಿನ್. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇಂದು (ಮೇ 1) ಅವರಿಗೆ ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಅನುಷ್ಕಾಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಅನುಷ್ಕಾ ಸ್ಟಾರ್ ಕಿಡ್ ಅಲ್ಲ. ಅವರಿಗೆ ಚಿತ್ರರಂಗದ ಹಿನ್ನೆಲೆ ಇರಲಿಲ್ಲ. ಗಾಡ್ ಫಾದರ್ ದೂರದ ಮಾತು. ಹೀಗಿದ್ದರೂ ಬಾಲಿವುಡ್​ನಲ್ಲಿ ಅವರು ನೆಲೆ ಕಂಡುಕೊಂಡರು. ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಅಚ್ಚರಿಯ ವಿಚಾರ ಎಂದರೆ ಮೊದಲ ಸಿನಿಮಾ ನಿರ್ದೇಶಕ ಆದಿತ್ಯ ಚೋಪ್ರಾ (Aditya Chopra) ಬಗ್ಗೆ ಅವರಿಗೆ ತಿಳಿದೂ ಇರಲಿಲ್ಲ. ಅವಕಾಶ ಸಿಕ್ಕಿದೆ ಎಂದು ನಟಿಸಿದ್ದರು.

ಚಿತ್ರರಂಗದಲ್ಲಿ ಯಶಸ್ಸು ಕಾಣಬೇಕು ಎಂದರೆ ಸಾಕಷ್ಟು ಸ್ಟ್ರಗಲ್ ಮಾಡಬೇಕು. ಆದರೆ, ಅದೃಷ್ಟ ಇದ್ದರೆ ಯಶಸ್ಸು ನಮ್ಮನ್ನೇ ಹುಡುಕಿ ಬರುತ್ತದೆ. ಅನುಷ್ಕಾ ಶರ್ಮಾಗೆ ಆಗಿದ್ದೂ ಇದೆ. ಅವರು ನಟಿಸಿದ ಮೊದಲ ಸಿನಿಮಾ ‘ರಬ್​ ನೆ ಬನಾದಿ ಜೋಡಿ’. ಈ ಚಿತ್ರಕ್ಕೆ ಹೀರೋ ಶಾರುಖ್ ಖಾನ್. ಯಶ್ ರಾಜ್ ಫಿಲ್ಮ್ಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿತ್ತು. ಆದಿತ್ಯ ಚೋಪ್ರಾ ನಿರ್ದೇಶನ ಚಿತ್ರಕ್ಕೆ ಇತ್ತು. ಮೊದಲ ಸಿನಿಮಾದಲ್ಲೇ ಇಷ್ಟು ದೊಡ್ಡ ಅವಕಾಶ ಅನುಷ್ಕಾ ಪಾಲಾಗಿತ್ತು.

‘ನಾನು ಹೊರಗಿನವನಾದರೂ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದೇನೆ. ರಬ್​ ನೆ ಬನಾದಿ ಜೋಡಿ ಸಿನಿಮಾ ಸಿಕ್ಕಾಗ ನನಗೆ ಇದು ಇಷ್ಟೊಂದು ಮಹತ್ವದ ಸಿನಿಮಾ ಆಗುತ್ತದೆ ಎಂದುಕೊಂಡಿರಲಿಲ್ಲ. ಆದಿತ್ಯ ಚೋಪ್ರಾ ಯಾರು ಎಂಬುದೂ ಗೊತ್ತಿರಲಿಲ್ಲ. ನನ್ನ ಮನಸ್ಸಿನ ಮಾತು ಕೇಳಿದೆ. ನಾನು ಆಡಿಷನ್ ಕೊಡುತ್ತಾ ಬಂದೆ. ರಬ್​ ನೆ ಬನಾದಿ ಜೋಡಿ ಸಿನಿಮಾಗೆ ನಾನು ಆಯ್ಕೆ ಆದೆ. ಹೀಗೆ ಬಣ್ಣದ ಬದುಕು ಆರಂಭಿಸಿದೆ’ ಎಂದು ಅನುಷ್ಕಾ ಶರ್ಮಾ ಈ ಮೊದಲು ಹೇಳಿದ್ದರು.

ಇದನ್ನೂ ಓದಿ: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ‘ಎಂದೆಂದಿಗೂ ನೀವೇ ನಮ್ಮ ಫೇವರಿಟ್​’ ಎಂದ ಫ್ಯಾನ್ಸ್​

2008ರಲ್ಲಿ ‘ರಬ್​ ನೆ ಬನಾದಿ ಜೋಡಿ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಯಶಸ್ಸು ಕಂಡಿತು. ಅಲ್ಲಿಂದ ಅನುಷ್ಕಾ ಶರ್ಮಾ ಬದುಕು ಬದಲಾಯಿತು. ನಂತರ ‘ಪಿಕೆ’, ‘ಸುಲ್ತಾನ್’ ಸೇರಿ ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಸದ್ಯ ಅವರು ‘ಚಕ್ದಾ ಎಕ್ಸ್​ಪ್ರೆಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:13 am, Mon, 1 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು