AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವೇ ಸ್ಥಾಪಿಸಿದ ನಿರ್ಮಾಣ ಸಂಸ್ಥೆಯಿಂದ ಹೊರನಡೆದ ಅನುಷ್ಕಾ ಶರ್ಮಾ; ಅಂಥದ್ದೇನಾಯ್ತು?

ಅನುಷ್ಕಾ ಹಾಗೂ ಅವರ ಸಹೋದರ ಕರ್ಣೇಶ್​​ ಶರ್ಮಾ ಇಬ್ಬರೂ ಒಟ್ಟಾಗಿ 2013ರಲ್ಲಿ ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದರು. ಇಬ್ಬರೂ ಸೇರಿ ಈ ಸಂಸ್ಥೆಯನ್ನು ನಡೆಸುತ್ತಿದ್ದರು.

ತಾವೇ ಸ್ಥಾಪಿಸಿದ ನಿರ್ಮಾಣ ಸಂಸ್ಥೆಯಿಂದ ಹೊರನಡೆದ ಅನುಷ್ಕಾ ಶರ್ಮಾ; ಅಂಥದ್ದೇನಾಯ್ತು?
ಅನುಷ್ಕಾ ಶರ್ಮಾ
TV9 Web
| Edited By: |

Updated on: Mar 19, 2022 | 4:16 PM

Share

ಅನುಷ್ಕಾ ಶರ್ಮಾ (Anushka Sharma) ಅವರು ಸದ್ಯ ಮಗುವಿನ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟನೆಗೆ ಕಂಬ್ಯಾಕ್​ ಮಾಡೋಕೆ ರೆಡಿ ಆಗಿದ್ದಾರೆ. ಇದರ ಜತೆಗೆ ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್​​’ (Clean Slate Filmz) ಬ್ಯಾನರ್​ ಸ್ಥಾಪಿಸಿ ಅದರ ಅಡಿಯಲ್ಲಿ ಹಲವು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ಹಲವು ಸಿನಿಮಾಗಳು, ವೆಬ್​ ಸೀರಿಸ್​ ರಿಲೀಸ್ ಆಗಿ ಹಿಟ್​ ಆಗಿವೆ. ‘ಪಾತಾಳ್​ ಲೋಕ್​’ ವೆಬ್​ ಸರಣಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದನ್ನು ಅನುಷ್ಕಾ ಅವರೇ ನಿರ್ಮಾಣ ಮಾಡಿದ್ದರು. ಈಗ ಅನುಷ್ಕಾ ಶರ್ಮಾ ನಿರ್ಮಾಣ ಸಂಸ್ಥೆಯಿಂದ ಹೊರ ಬರುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಅನುಷ್ಕಾ ಹಾಗೂ ಅವರ ಸಹೋದರ ಕರ್ಣೇಶ್​​ ಶರ್ಮಾ ಇಬ್ಬರೂ ಒಟ್ಟಾಗಿ 2013ರಲ್ಲಿ ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದರು. ಇಬ್ಬರೂ ಸೇರಿ ಈ ಸಂಸ್ಥೆಯನ್ನು ನಡೆಸುತ್ತಿದ್ದರು. ಕರ್ಣೇಶ್​​ ಕೂಡ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಒಟ್ಟಿಗೆ 8 ಸಿನಿಮಾಗಳನ್ನು ನಿರ್ಮಾಣ ಮಾಡುವ ಚಾಲೆಂಜ್​ಅನ್ನು ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್’ ತೆಗೆದುಕೊಂಡ ಬಗ್ಗೆ ವರದಿ ಆಗಿತ್ತು. ಹೀಗಿರುವಾಗಲೇ ಅನುಷ್ಕಾ ನಿರ್ಮಾಣ ಸಂಸ್ಥೆ ತೊರೆದಿದ್ದಾರೆ. ಹಾಗಾದರೆ ಮುಂದೆ ಇದನ್ನು ನೋಡಿಕೊಳ್ಳೋದು ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈ ಬಗ್ಗೆ ಬರೆದುಕೊಂಡಿರುವ ಅನುಷ್ಕಾ, ‘ನನ್ನ ಸಹೋದರ ಕರ್ಣೇಶ್ ಜತೆ ಸೇರಿ ‘ಕ್ಲೀನ್ ಸ್ಲೇಟ್ ಫಿಲ್ಮ್ಸ್​’ ಅನ್ನು ಪ್ರಾರಂಭಿಸಿದೆ. ನಿರ್ಮಾಣದ ವಿಚಾರದಲ್ಲಿ ನಾವು ಆಗ ಹೊಸಬರು. ನಮ್ಮ ಪ್ರಯಾಣದಲ್ಲಿ ಹಿಂತಿರುಗಿ ನೋಡಿದಾಗ ನಾವು ಸಾಧಿಸಿದ್ದನ್ನು ನೋಡಿ ಖುಷಿ ಆಗುತ್ತದೆ. ನಮ್ಮ ನಿರ್ಮಾಣ ಸಂಸ್ಥೆ ಸಾಕಷ್ಟು ಸಾಧನೆ ಮಾಡಿದೆ. ಇದಕ್ಕೆ ಕರ್ಣೇಶ್​ ಕೊಡುಗೆ ದೊಡ್ಡದು’ ಎಂದಿದ್ದಾರೆ ಅನುಷ್ಕಾ.

‘ನನ್ನ ಬಳಿ ಎಷ್ಟೇ ಸಮಯವಿದ್ದರೂ ಅದನ್ನು ನಾನು ನಟನೆಗೆ ಮೀಸಲಿಡಲು ಬಯಸುತ್ತೇನೆ. ಹೀಗಾಗಿ, ‘ಕ್ಲೀನ್ ಸ್ಲೇಟ್ ಫಿಲ್ಮ್ಸ್’ನಿಂದ ನಾನು ಹೊರಬರುತ್ತಿದ್ದೇನೆ. ಕರ್ಣೇಶ್​ ಇದನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ’ ಎಂದು ಅನುಷ್ಕಾ ಅವರು ನಿರ್ಧಾರ ತಿಳಿಸಿದ್ದಾರೆ. 2018ರಲ್ಲಿ ತೆರೆಗೆ ಬಂದ ‘ಝೀರೋ’ ಚಿತ್ರದ ಬಳಿಕ ಅನುಷ್ಕಾ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಮದುವೆ, ಮಕ್ಕಳು ಎಂದು ಕುಟುಂಬದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಅನುಷ್ಕಾ ಶರ್ಮಾ ಅವರು ‘ಚಕ್ದಾ ಎಕ್ಸ್​ಪ್ರೆಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕ್ರಿಕೆಟರ್​ ಝುಲನ್​ ಗೋಸ್ವಾಮಿ ಅವರ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ನೆಟ್​ಫ್ಲಿಕ್ಸ್​ನಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ‘ಕ್ಲೀನ್​ ಸ್ಲೇಟ್​ ಫಿಲ್ಮ್ಸ್’ ಅಡಿಯಲ್ಲಿ  ‘ಎನ್​ಎಚ್​10’, ‘ಪರಿ’, ‘ಪಾತಾಳ್​ ಲೋಕ್​’, ‘ಬುಲ್​ಬುಲ್​’ ಮೊದಲಾದವು ಪ್ರಾಜೆಕ್ಟ್​ಗಳು ನಿರ್ಮಾಣ ಆಗಿದೆ.

ಇದನ್ನೂ ಓದಿ: Virat Kohli: ಎಲ್ಲರೆದುರು ತರಲೆ ಮಾಡಿಕೊಂಡಿರುವ ವಿರಾಟ್, ಅನುಷ್ಕಾ ಎದುರು ಬಂದರೆ ಹೇಗೆ ವರ್ತಿಸುತ್ತಾರಂತೆ ಗೊತ್ತಾ?

Anushka Sharma: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ